Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೆಗಾ ಸ್ಟಾರ್​’ ಚಿರಂಜೀವಿಗೆ ಕೊರೊನಾ ಪಾಸಿಟಿವ್​; ಮನೆಯಲ್ಲೇ ಕ್ವಾರಂಟೈನ್ ಆದ ನಟ

‘ಎಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ ನನಗೆ ಕೊರೊನಾ ಪಾಸಿಟಿವ್​ ಆಗಿದೆ. ನಿನ್ನೆ ರಾತ್ರಿಯಿಂದ ಕೊವಿಡ್​ ಲಕ್ಷಣಗಳು ಕಾಣಿಸಿವೆ’ ಎಂದು ‘ಮೆಗಾ ಸ್ಟಾರ್​’ ಜಿರಂಜೀವಿ ಹೇಳಿದ್ದಾರೆ.

‘ಮೆಗಾ ಸ್ಟಾರ್​’ ಚಿರಂಜೀವಿಗೆ ಕೊರೊನಾ ಪಾಸಿಟಿವ್​; ಮನೆಯಲ್ಲೇ ಕ್ವಾರಂಟೈನ್ ಆದ ನಟ
ಮೆಗಾ ಸ್ಟಾರ್ ಚಿರಂಜೀವಿ
Follow us
TV9 Web
| Updated By: ಮದನ್​ ಕುಮಾರ್​

Updated on: Jan 26, 2022 | 1:10 PM

ಕೊರೊನಾ ವೈರಸ್​ (Coronavirus) ಹಾವಳಿಗೆ ಎಲ್ಲರೂ ಬೇಸತ್ತಿದ್ದಾರೆ. ಕೊವಿಡ್​ ಮೂರನೇ ಅಲೆಯಿಂದಾಗಿ ಅನೇಕ ಉದ್ಯಮಗಳು ಸೊರಗಿವೆ. ಚಿತ್ರೋದ್ಯಮದ ವಹಿವಾಟು ಕೂಡ ಕುಸಿದಿದೆ. ಹಲವು ಸೆಲೆಬ್ರಿಟಿಗಳಿಗೆ ಕೊರೊನಾ ಪಾಸಿಟಿವ್​ (Corona Positive) ಆಗಿದೆ. ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕು ತಗುಲಿಸಿಕೊಂಡ ಸೆಲೆಬ್ರಿಟಿಗಳ ಸಂಖ್ಯೆ ಹೆಚ್ಚಿದೆ. ಕೆಲವೇ ದಿನಗಳ ಹಿಂದೆ ಲತಾ ಮಂಗೇಶ್ಕರ್​, ಕರೀನಾ ಕಪೂರ್​ ಖಾನ್​, ಜಾನ್​ ಅಬ್ರಾಹಂ, ಏಕ್ತಾ ಕಪೂರ್​ ಸೇರಿದಂತೆ ಅನೇಕರಿಗೆ ಕೊವಿಡ್​ ಪಾಸಿಟಿವ್​ ಆಗಿರುವುದು ತಿಳಿದು ಬಂತು. ಈಗ ಟಾಲಿವುಡ್​ ನಟ, ‘ಮೆಗಾ ಸ್ಟಾರ್’​ ಚಿರಂಜೀವಿ (Megastar Chiranjeevi) ಅವರಿಗೂ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರು ಟ್ವೀಟ್​ ಮಾಡಿದ್ದು, ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಅವರ ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಸದ್ಯ ತಮ್ಮ ಆರೋಗ್ಯದ ಸ್ಥಿತಿ ಹೇಗಿದೆ ಎಂಬುದನ್ನು ಚಿರಂಜೀವಿ ತಿಳಿಸಿದ್ದಾರೆ.

‘ಎಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ ನನಗೆ ಕೊರೊನಾ ಪಾಸಿಟಿವ್​ ಆಗಿದೆ. ನಿನ್ನೆ ರಾತ್ರಿಯಿಂದ ಕೊವಿಡ್​ ಲಕ್ಷಣಗಳು ಕಾಣಿಸಿವೆ. ಹಾಗಾಗಿ ನಾನು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಅಂತ ವಿನಂತಿಸುತ್ತೇನೆ. ಶೀಘ್ರದಲ್ಲೇ ನಿಮ್ಮೆಲ್ಲರನ್ನೂ ಭೇಟಿ ಮಾಡುತ್ತೇನೆ’ ಎಂದು ಮೆಗಾ ಸ್ಟಾರ್​ ಜಿರಂಜೀವಿ ಟ್ವೀಟ್​ ಮಾಡಿದ್ದಾರೆ.

ಕೊರೊನಾ ಹಾವಳಿಯಿಂದಾಗಿ ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದ ಬಿಡುಗಡೆ ದಿನಾಂಕ ಕೂಡ ಮುಂದಕ್ಕೆ ಹೋಗಿದೆ. ಆ ಕುರಿತು ಇತ್ತೀಚೆಗೆ ಅನೌನ್ಸ್​ ಮಾಡಲಾಗಿತ್ತು. ಪರಿಸ್ಥಿತಿ ಚೆನ್ನಾಗಿ ಇದ್ದರೆ ಫೆ.4ರಂದು ‘ಆಚಾರ್ಯ’ ಚಿತ್ರವನ್ನು ತೆರೆಕಾಣಿಸಲು ನಿರ್ಮಾಪಕರು ಸಜ್ಜಾಗಿದ್ದರು. ಆದರೆ ಕೊರೊನಾ ಹಾವಳಿಯಿಂದ ಇನ್ನೂ ಅನೇಕ ಕಡೆಗಳಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿವೆ. ಬಹುತೇಕ ರಾಜ್ಯಗಳ ಚಿತ್ರಮಂದಿರಗಳಲ್ಲಿ ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ಆಚಾರ್ಯ’ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಯಿತು.

ಕೊರೊನಾದ ಕಣ್ಣಾಮುಚ್ಚಾಲೆಯಿಂದಾಗಿ ಎಲ್ಲ ಉದ್ಯಮಗಳಿಗೂ ತೊಂದರೆ ಆಗಿದೆ. ನಾಳೆ ಏನಾಗಲಿದೆ ಎಂಬ ಅನಿಶ್ಚಿತತೆ ಕಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರಿಲೀಸ್​ ಡೇಟ್​ಗಾಗಿ ಸ್ಟಾರ್​ ನಟರ ನಡುವೆ ಪೈಪೋಟಿ ಇದೆ. ಫೆ.4ರಂದು ಬಿಡುಗಡೆ ಆಗಬೇಕಿದ್ದ ‘ಆಚಾರ್ಯ’ ಚಿತ್ರವನ್ನು ಈಗ ಏಪ್ರಿಲ್​ 1ರಂದು ತೆರೆಕಾಣಿಸಲು ನಿರ್ಧರಿಸಲಾಗಿದೆ. ಏಪ್ರಿಲ್​ 2ರಂದು ಯುಗಾದಿ ಹಬ್ಬ ಇದೆ. ಆ ಸಮಯದಲ್ಲಿ ಸಿನಿಮಾ ಬಿಡುಗಡೆಯಾದರೆ ಒಳ್ಳೆಯ ಕಲೆಕ್ಷನ್​ ಆಗಲಿದೆ. ಆ ಕಾರಣದಿಂದಲೇ ‘ಆಚಾರ್ಯ’ ತಂಡ ಏ.1ರ ದಿನಾಂಕದ ಮೇಲೆ ಕಣ್ಣಿಟ್ಟಿದೆ. ಈ ಚಿತ್ರದಲ್ಲಿ ರಾಮ್​ ಚರಣ್​ ಕೂಡ ನಟಿಸಿದ್ದಾರೆ. ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ಮಹಾಭಾರತ​’ ಸೀರಿಯಲ್​ ಅರ್ಜುನ ಪಾತ್ರಧಾರಿ ಶಾಹೀರ್ ಶೇಖ್​ ತಂದೆ ಕೊವಿಡ್​ನಿಂದ ನಿಧನ

ಐಸೋಲೇಟ್​​ ಆಗಲು ಗೋವಾ ರೆಸಾರ್ಟ್​ಗೆ ತೆರಳಿದ ಅಕ್ಕಿನೇನಿ ನಾಗಾರ್ಜುನ

ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು