AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acharya: ರಾಮ್​ ಚರಣ್-ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ವಿವರ

Acharya Movie First Half Review: ‘ಆರ್​ಆರ್​ಆರ್​’ ಚಿತ್ರದಿಂದ ರಾಮ್​ ಚರಣ್ ಖ್ಯಾತಿ ಹೆಚ್ಚಿದೆ. ಆ ಚಿತ್ರದ ಬಳಿಕ ‘ಆಚಾರ್ಯ’ ತೆರೆಗೆ ಬರುತ್ತಿದೆ.  ಹಾಗಾದರೆ, ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

Acharya: ರಾಮ್​ ಚರಣ್-ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ವಿವರ
ಚಿರಂಜೀವಿ-ರಾಮ್ ಚರಣ್
TV9 Web
| Edited By: |

Updated on: Apr 29, 2022 | 8:10 AM

Share

ರಾಮ್ ಚರಣ್ (Ram Charan) ಹಾಗೂ ಚಿರಂಜೀವಿ (Chiranjeevi) ನಟನೆಯ ‘ಆಚಾರ್ಯ’ ಸಿನಿಮಾ ಇಂದು (ಏಪ್ರಿಲ್ 29) ರಿಲೀಸ್ ಆಗಿದೆ. ಈ ಸಿನಿಮಾದ ಕಥೆ ಕಾಡಿನಲ್ಲಿ ನಡೆಯಲಿದೆ ಅನ್ನೋದು ಟ್ರೇಲರ್ ಮೂಲಕ ಗೊತ್ತಾಗಿತ್ತು. ಈ ಸಿನಿಮಾದಲ್ಲಿ ತಂದೆ-ಮಗ ಒಟ್ಟಾಗಿ ನಟಿಸಿರುವುದು ಅಭಿಮಾನಿಗಳಿಗೆ ಖುಷಿ ಇದೆ. ಟ್ರೇಲರ್ ಮೂಲಕ ಸಿನಿಮಾ ಹೇಗಿದೆ ಎನ್ನುವ ಝಲಕ್ ಸಿಕ್ಕಿತ್ತು. ಕೊರಟಾಲ ಶಿವ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ‘ಮಿರ್ಚಿ’, ‘ಭರತ್ ಅನೆ ನೇನು’ ಮೊದಲಾದ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ‘ಆರ್​ಆರ್​ಆರ್​’ ಚಿತ್ರದಿಂದ ರಾಮ್​ ಚರಣ್ ಖ್ಯಾತಿ ಹೆಚ್ಚಿದೆ. ಆ ಚಿತ್ರದ ಬಳಿಕ ‘ಆಚಾರ್ಯ’ ತೆರೆಗೆ ಬರುತ್ತಿದೆ.  ಹಾಗಾದರೆ, ‘ಆಚಾರ್ಯ’ ಸಿನಿಮಾದ ಮೊದಲಾರ್ಧ (Acharya Movie First Half Review) ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ‘ಆಚಾರ್ಯ’ ಸಿನಿಮಾದ ಪೂರ್ತಿ ಕಥೆ ಕಾಡಿನಲ್ಲೇ ಸಾಗುತ್ತದೆ. ಫಸ್ಟ್​ ಹಾಫ್​ ಬಹುತೇಕ ಕಾಡಿನ ದೃಶ್ಯಗಳೇ ತುಂಬಿಕೊಂಡಿವೆ.
  2. ಈ ಸಿನಿಮಾದಲ್ಲಿ ಚಿರಂಜೀವಿ ಮತ್ತು ರಾಮ್​ ಚರಣ್​ ನಟಿಸಿದ್ದಾರೆ. ರಾಮ್​ ಚರಣ್​ ಅವರದ್ದು ಅತಿಥಿ ಪಾತ್ರ. ಮಧ್ಯಂತರಕ್ಕಿಂತ ಮುನ್ನ ಅವರ​ ಎಂಟ್ರಿ ಆಗುತ್ತದೆ.
  3. ಪೂಜಾ ಹೆಗ್ಡೆ ಅವರಿಗೆ ‘ಆಚಾರ್ಯ’ ಚಿತ್ರದ ಮೊದಲಾರ್ಧದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಕೇವಲ ಎರಡು ದೃಶ್ಯಗಳಲ್ಲಿ ಮಾತ್ರ ಅವರು ಕಾಣಿಸಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಲಿದೆ.
  4. ‘ಆಚಾರ್ಯ’ ಫಸ್ಟ್​ ಹಾಫ್​ನಲ್ಲಿ ಭರ್ಜರಿ ಫೈಟ್ ಇದೆ. ಎರಡು ಹಾಡುಗಳಿವೆ. ಐಟಂ ಸಾಂಗ್​ ಬಯಸುವ ಪ್ರೇಕ್ಷಕರಿಗೆ ಮೊದಲಾರ್ಧದಲ್ಲಿ ಮನರಂಜನೆ ಇದೆ.
  5. ಈ ಸಿನಿಮಾದ ಮೊದಲಾರ್ಧದ ಕಥೆ ತುಂಬ ನಿಧಾನಗತಿಯಲ್ಲಿ ಸಾಗುತ್ತದೆ. ಪ್ರೇಕ್ಷಕರ ತಾಳ್ಮೆ ಪರೀಕ್ಷೆ ಮಾಡುತ್ತದೆ.
  6. ಹೇಳಿಕೊಳ್ಳುವಂತಹ ಗಟ್ಟಿಯಾದ ಕಥಾಹಂದರ ಈ ಚಿತ್ರದಲ್ಲಿ ಇಲ್ಲ. ಸಣ್ಣ ವಿಷಯವನ್ನೇ ಎಳೆದಾಡಿದಂತಿದೆ.

ಇದನ್ನೂ ಓದಿ: Kajal Aggarwal: ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ಪಾತ್ರ ಏಕಿಲ್ಲ? ಕಾರಣ ಬಹಿರಂಗಪಡಿಸಿದ ನಿರ್ದೇಶಕ

Urfi Javed: ರಾಮ್ ಚರಣ್ ನೆಚ್ಚಿನ ನಟ ಎಂದ ಉರ್ಫಿ ‘ಕೆಜಿಎಫ್’ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು