AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acharya: ರಾಮ್​ ಚರಣ್-ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ವಿವರ

Acharya Movie First Half Review: ‘ಆರ್​ಆರ್​ಆರ್​’ ಚಿತ್ರದಿಂದ ರಾಮ್​ ಚರಣ್ ಖ್ಯಾತಿ ಹೆಚ್ಚಿದೆ. ಆ ಚಿತ್ರದ ಬಳಿಕ ‘ಆಚಾರ್ಯ’ ತೆರೆಗೆ ಬರುತ್ತಿದೆ.  ಹಾಗಾದರೆ, ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

Acharya: ರಾಮ್​ ಚರಣ್-ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ವಿವರ
ಚಿರಂಜೀವಿ-ರಾಮ್ ಚರಣ್
TV9 Web
| Updated By: ಮದನ್​ ಕುಮಾರ್​|

Updated on: Apr 29, 2022 | 8:10 AM

Share

ರಾಮ್ ಚರಣ್ (Ram Charan) ಹಾಗೂ ಚಿರಂಜೀವಿ (Chiranjeevi) ನಟನೆಯ ‘ಆಚಾರ್ಯ’ ಸಿನಿಮಾ ಇಂದು (ಏಪ್ರಿಲ್ 29) ರಿಲೀಸ್ ಆಗಿದೆ. ಈ ಸಿನಿಮಾದ ಕಥೆ ಕಾಡಿನಲ್ಲಿ ನಡೆಯಲಿದೆ ಅನ್ನೋದು ಟ್ರೇಲರ್ ಮೂಲಕ ಗೊತ್ತಾಗಿತ್ತು. ಈ ಸಿನಿಮಾದಲ್ಲಿ ತಂದೆ-ಮಗ ಒಟ್ಟಾಗಿ ನಟಿಸಿರುವುದು ಅಭಿಮಾನಿಗಳಿಗೆ ಖುಷಿ ಇದೆ. ಟ್ರೇಲರ್ ಮೂಲಕ ಸಿನಿಮಾ ಹೇಗಿದೆ ಎನ್ನುವ ಝಲಕ್ ಸಿಕ್ಕಿತ್ತು. ಕೊರಟಾಲ ಶಿವ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ‘ಮಿರ್ಚಿ’, ‘ಭರತ್ ಅನೆ ನೇನು’ ಮೊದಲಾದ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ‘ಆರ್​ಆರ್​ಆರ್​’ ಚಿತ್ರದಿಂದ ರಾಮ್​ ಚರಣ್ ಖ್ಯಾತಿ ಹೆಚ್ಚಿದೆ. ಆ ಚಿತ್ರದ ಬಳಿಕ ‘ಆಚಾರ್ಯ’ ತೆರೆಗೆ ಬರುತ್ತಿದೆ.  ಹಾಗಾದರೆ, ‘ಆಚಾರ್ಯ’ ಸಿನಿಮಾದ ಮೊದಲಾರ್ಧ (Acharya Movie First Half Review) ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ‘ಆಚಾರ್ಯ’ ಸಿನಿಮಾದ ಪೂರ್ತಿ ಕಥೆ ಕಾಡಿನಲ್ಲೇ ಸಾಗುತ್ತದೆ. ಫಸ್ಟ್​ ಹಾಫ್​ ಬಹುತೇಕ ಕಾಡಿನ ದೃಶ್ಯಗಳೇ ತುಂಬಿಕೊಂಡಿವೆ.
  2. ಈ ಸಿನಿಮಾದಲ್ಲಿ ಚಿರಂಜೀವಿ ಮತ್ತು ರಾಮ್​ ಚರಣ್​ ನಟಿಸಿದ್ದಾರೆ. ರಾಮ್​ ಚರಣ್​ ಅವರದ್ದು ಅತಿಥಿ ಪಾತ್ರ. ಮಧ್ಯಂತರಕ್ಕಿಂತ ಮುನ್ನ ಅವರ​ ಎಂಟ್ರಿ ಆಗುತ್ತದೆ.
  3. ಪೂಜಾ ಹೆಗ್ಡೆ ಅವರಿಗೆ ‘ಆಚಾರ್ಯ’ ಚಿತ್ರದ ಮೊದಲಾರ್ಧದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಕೇವಲ ಎರಡು ದೃಶ್ಯಗಳಲ್ಲಿ ಮಾತ್ರ ಅವರು ಕಾಣಿಸಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಲಿದೆ.
  4. ‘ಆಚಾರ್ಯ’ ಫಸ್ಟ್​ ಹಾಫ್​ನಲ್ಲಿ ಭರ್ಜರಿ ಫೈಟ್ ಇದೆ. ಎರಡು ಹಾಡುಗಳಿವೆ. ಐಟಂ ಸಾಂಗ್​ ಬಯಸುವ ಪ್ರೇಕ್ಷಕರಿಗೆ ಮೊದಲಾರ್ಧದಲ್ಲಿ ಮನರಂಜನೆ ಇದೆ.
  5. ಈ ಸಿನಿಮಾದ ಮೊದಲಾರ್ಧದ ಕಥೆ ತುಂಬ ನಿಧಾನಗತಿಯಲ್ಲಿ ಸಾಗುತ್ತದೆ. ಪ್ರೇಕ್ಷಕರ ತಾಳ್ಮೆ ಪರೀಕ್ಷೆ ಮಾಡುತ್ತದೆ.
  6. ಹೇಳಿಕೊಳ್ಳುವಂತಹ ಗಟ್ಟಿಯಾದ ಕಥಾಹಂದರ ಈ ಚಿತ್ರದಲ್ಲಿ ಇಲ್ಲ. ಸಣ್ಣ ವಿಷಯವನ್ನೇ ಎಳೆದಾಡಿದಂತಿದೆ.

ಇದನ್ನೂ ಓದಿ: Kajal Aggarwal: ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ಪಾತ್ರ ಏಕಿಲ್ಲ? ಕಾರಣ ಬಹಿರಂಗಪಡಿಸಿದ ನಿರ್ದೇಶಕ

Urfi Javed: ರಾಮ್ ಚರಣ್ ನೆಚ್ಚಿನ ನಟ ಎಂದ ಉರ್ಫಿ ‘ಕೆಜಿಎಫ್’ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ