AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದಿಯಲ್ಲಿ ‘ಆಚಾರ್ಯ’ ರಿಲೀಸ್​ ಮಾಡಲ್ಲ, ಬೇಸರವೂ ಇಲ್ಲ’: ನಿರ್ಧಾರಕ್ಕೆ ಕಾರಣ ತಿಳಿಸಿದ ರಾಮ್​ ಚರಣ್​

Megastar Chiranjeevi: ಹಿಂದಿ ಮಾರ್ಕೆಟ್​ ಬಗ್ಗೆ ‘ಆಚಾರ್ಯ’ ಚಿತ್ರತಂಡ ತಲೆ ಕೆಡಿಸಿಕೊಂಡಿಲ್ಲ. ಅದಕ್ಕೆ ಕಾರಣ ಏನೆಂದು ನಟ/ನಿರ್ಮಾಪಕ ರಾಮ್​ ಚರಣ್​ ವಿವರಿಸಿದ್ದಾರೆ.

‘ಹಿಂದಿಯಲ್ಲಿ ‘ಆಚಾರ್ಯ’ ರಿಲೀಸ್​ ಮಾಡಲ್ಲ, ಬೇಸರವೂ ಇಲ್ಲ’: ನಿರ್ಧಾರಕ್ಕೆ ಕಾರಣ ತಿಳಿಸಿದ ರಾಮ್​ ಚರಣ್​
ಮೆಗಾಸ್ಟಾರ್​ ಚಿರಂಜೀವಿ, ರಾಮ್​ ಚರಣ್​
TV9 Web
| Updated By: ಮದನ್​ ಕುಮಾರ್​|

Updated on: Apr 25, 2022 | 7:35 AM

Share

ಈಗ ಚಿತ್ರರಂಗದಲ್ಲಿ ಪ್ಯಾನ್​ ಇಂಡಿಯಾ ಸಿನಿಮಾಗಳ (Pan India Movie) ಟ್ರೆಂಡ್​ ಜೋರಾಗಿದೆ. ದಕ್ಷಿಣ ಭಾರತದ ಸಿನಿಮಾಗಳು ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗುತ್ತಿವೆ. ಹಿಂದಿ ವರ್ಷನ್​ನಿಂದ ‘ಆರ್​ಆರ್​ಆರ್’, ‘ಪುಷ್ಪ’, ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ಅತ್ಯುತ್ತಮ ಕಮಾಯಿ ಮಾಡಿವೆ. ಬಾಲಿವುಡ್​ ಮಾರುಕಟ್ಟೆಯನ್ನು ದಕ್ಷಿಣ ಭಾರತದ ಸಿನಿಮಾಗಳು ಆಕ್ರಮಿಸಿಕೊಂಡಿವೆ. ಉತ್ತರ ಭಾರತದಲ್ಲಿ ಬಾಲಿವುಡ್​ ಚಿತ್ರಗಳೇ ಸೊರಗುತ್ತಿರುವಾಗ ದಕ್ಷಿಣ ಭಾರತದ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಕಮಾಲ್​ ಮಾಡುತ್ತಿವೆ. ಮುಂಬರುವ ಅನೇಕ ಸಿನಿಮಾಗಳು ಕೂಡ ಹಿಂದಿಗೆ ಡಬ್​ ಆದರೆ ಬಾಕ್ಸ್​ ಆಫೀಸ್​ ದೃಷ್ಟಿಯಿಂದ ಸಖತ್​ ಲಾಭ ಆಗಲಿದೆ. ಆದರೆ ‘ಮೆಗಾ ಸ್ಟಾರ್’ ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ (Acharya Movie) ಬೇರೆ ದಾರಿ ಹಿಡಿದಿದೆ. ಈ ಸಿನಿಮಾವನ್ನು ರಾಮ್​ ಚರಣ್​ (Ram Charan) ನಿರ್ಮಾಣ ಮಾಡಿದ್ದಾರೆ. ​ಆದರೆ ಹಿಂದಿಗೆ ಡಬ್​ ಮಾಡಲು ಅವರು ಸಿದ್ಧರಿಲ್ಲ. ಈ ಬಗ್ಗೆ ಅವರು ಖಡಕ್​ ನಿರ್ಧಾರ ತಿಳಿಸಿದ್ದಾರೆ. ‘ಆಚಾರ್ಯ’ ಸಿನಿಮಾವನ್ನು ಹಿಂದಿಗೆ ಡಬ್​ ಮಾಡದೇ ಇರುವುದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರ ವಿವರಿಸಿದ್ದಾರೆ. ಅವರ ಈ ಉತ್ತರ ಕೇಳಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಸಿನಿಮಾ ಏ.29ರಂದು ರಿಲೀಸ್​ ಆಗಲಿದೆ. ಈಗಾಗಲೇ ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. ಉತ್ತರ ಭಾರತದ ಮಂದಿ ಕೂಡ ಈ ಸಿನಿಮಾವನ್ನು ನೋಡಬೇಕು ಎಂದು ಕಾತರ ಇಟ್ಟುಕೊಂಡಿರಬಹುದು. ಆದರೆ, ಹಿಂದಿಗೆ ಡಬ್​ ಆಗದೇ ಇರುವುದರಿಂದ ಕೆಲವರಿಗೆ ನಿರಾಸೆ ಆಗಬಹುದು. ಹಿಂದಿ ಮಾರುಕಟ್ಟೆಯಿಂದ ಬರಬಹುದಾದ ಆದಾಯ ಕೂಡ ಚಿತ್ರತಂಡಕ್ಕೆ ಮಿಸ್​ ಆಗಲಿದೆ. ಹಾಗಿದ್ದರೂ ಕೂಡ ರಾಮ್​ ಚರಣ್​ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

‘ಈ ಸಿನಿಮಾದ ಕೆಲಸ ಶುರು ಆದಾಗಿನಿಂದಲೂ ನಿರ್ದೇಶಕ ಕೊರಟಾಲ ಶಿವ ಅವರು ಈ ವಿಚಾರದಲ್ಲಿ ಸ್ಪಷ್ಟವಾಗಿದ್ದರು. ಇದು ದಕ್ಷಿಣ ಭಾರತದ ಸೊಗಡಿನ ಸಿನಿಮಾ. ಗಡಿಬಿಡಿಯಲ್ಲಿ ಇದನ್ನು ಪ್ಯಾನ್​ ಇಂಡಿಯಾ ಸಿನಿಮಾ ಆಗಿಸುವ ಉದ್ದೇಶವೂ ನಮಗೆ ಇಲ್ಲ. ಹಿಂದಿಗೆ ಡಬ್​ ಆಗಿಲ್ಲ ಎಂಬ ಬಗ್ಗೆ ನಮಗೆ ಬೇಸರ ಕೂಡ ಇಲ್ಲ’ ಎಂದು ರಾಮ್​ ಚರಣ್​ ಅವರು ಹೇಳಿದ್ದಾರೆ.

ಈ ಸಿನಿಮಾದಲ್ಲಿ ರಾಮ್​ ಚರಣ್​ ಅತಿಥಿ ಪಾತ್ರ ಮಾಡಿದ್ದಾರೆ. ಆರಂಭದಲ್ಲಿ ಈ ಬಗ್ಗೆ ಸ್ವತಃ ರಾಮ್​ ಚರಣ್​ ಅವರಿಗೂ ತಿಳಿದಿರಲಿಲ್ಲವಂತೆ. ‘ನಾನು ನಿರ್ಮಾಪಕನಾಗಿ ತೊಡಗಿಕೊಂಡಿದ್ದೆ. ಒಂದು ದಿನ ಕೊರಟಾಲ ಶಿವ ಅವರು ಬಂದು ಅತಿಥಿ ಪಾತ್ರದ ಬಗ್ಗೆ ಹೇಳಿದರು. ನಾನು ‘ಆರ್​ಆರ್​ಆರ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದೆ. ‘ಆಚಾರ್ಯ’ ಸಿನಿಮಾದ ಗೆಸ್ಟ್​ ರೋಲ್​ ಬಗ್ಗೆ ಕೇಳಿ ಖುಷಿ ಆಯಿತು. ಆ ಪಾತ್ರ ನೀಡಿದ್ದಕ್ಕಾಗಿ ನಿರ್ದೇಶಕರಿಗೆ ಧನ್ಯವಾದಗಳು’ ಎಂದು ರಾಮ್​ ಚರಣ್​ ಹೇಳಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದಿಂದ ರಾಮ್​ ಚರಣ್​ ಅವರಿಗೆ ಬಹುದೊಡ್ಡ ಯಶಸ್ಸು ಸಿಕ್ಕಿದೆ. ರಾಜಮೌಳಿ, ಜ್ಯೂ. ಎನ್​ಟಿಆರ್​ ಜತೆ ಸೇರಿ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

ಇದನ್ನೂ ಓದಿ:

ಹೇಗಿದೆ ರಾಮ್​ ಚರಣ್​ ಹೊಸ ಕಾರು? ಇದರ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ

‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ