AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acharya Poster: ‘ಆಚಾರ್ಯ’ ಸಿನಿಮಾದಲ್ಲಿ ರಾಮ್​ ಚರಣ್​ ಲುಕ್​ ಬಹಿರಂಗ

Ram Charan: ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿ ನಿಂತಿತ್ತು.

Acharya Poster: ‘ಆಚಾರ್ಯ’ ಸಿನಿಮಾದಲ್ಲಿ ರಾಮ್​ ಚರಣ್​ ಲುಕ್​ ಬಹಿರಂಗ
‘ಆಚಾರ್ಯ’ ಸಿನಿಮಾದಲ್ಲಿ ರಾಮ್​ ಚರಣ್​ ಲುಕ್​ ಬಹಿರಂಗ
TV9 Web
| Edited By: |

Updated on:Jul 10, 2021 | 8:23 PM

Share

ರಾಮ್​ ಚರಣ್​ ಸದ್ಯ ಎರಡು ದೊಡ್ಡದೊಡ್ಡ ಪ್ರಾಜೆಕ್ಟ್​ನಲ್ಲಿ ನಟಿಸುತ್ತಿದ್ದಾರೆ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ರಾಮ್​ ಚರಣ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಜತೆಗೆ ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದಲ್ಲಿಯೂ ರಾಮ್​ ಚರಣ್​ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಫಸ್ಟ್​ ಪೋಸ್ಟರ್​ ರಿಲೀಸ್​ ಆಗಿದ್ದು, ರಾಮ್​ ಚರಣ್​ ಲುಕ್​ ಬಹಿರಂಗೊಂಡಿದೆ.

ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿ ನಿಂತಿತ್ತು. ಈಗ ಕೊರೊನಾ ಕಡಿಮೆ ಆಗುತ್ತಿದ್ದು, ಶೂಟಿಂಗ್​ಗೆ ಮತ್ತೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಅವರು ಮತ್ತೆ ಸಿನಿಮಾದ ಸೆಟ್​​ ಸೇರಿಕೊಂಡಿದ್ದಾರೆ.

‘ಆಚಾರ್ಯ’ ಪಾತ್ರದಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಕೊನೆಯ ಹಂತದ ಶೂಟಿಂಗ್​ ನಡೆಯುತ್ತಿದೆ. ಅಂದಹಾಗೆ, ರಾಮ್​ ಚರಣ್​ ಈ ಚಿತ್ರದಲ್ಲಿ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದಿಲ್ಲ. ಇದೊಂದು ಅತಿಥಿ ಪಾತ್ರ. ಸದ್ಯ, ರಾಮ್​ ಚರಣ್​ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನು, ಆರ್​ಆರ್​ಆರ್​ ಚಿತ್ರದಲ್ಲಿ ರಾಮ್​ ಚರಣ್​ ಅಲ್ಲುರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣಲಿದೆ. ಇದೇ ವರ್ಷ ಅಕ್ಟೋಬರ್​ 13ರಂದು ಸಿನಿಮಾ ತೆರೆಕಾಣಿಸಬೇಕು ಎಂದು ನಿರ್ಮಾಪಕರು ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಆದರೆ ಲಾಕ್​ಡೌನ್ ಕಾರಣದಿಂದ ಚಿತ್ರದ ಕೆಲಸಗಳು ಲೇಟ್​ ಆಗಿರುವುದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಆದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: RRR: ಬಹುದಿನಗಳಿಂದ ಕಾದಿದ್ದ ಅಭಿಮಾನಿಗಳಿಗೆ ಆರ್​ಆರ್​ಆರ್​ ತಂಡದಿಂದ ಸಿಕ್ತು ಬಿಗ್​ ನ್ಯೂಸ್​

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

Published On - 8:01 pm, Sat, 10 July 21

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ