Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Act 1978’ ಚಿತ್ರ ಮಿಸ್​ ಮಾಡಿಕೊಂಡವರಿಗೆ ಇಲ್ಲಿದೆ ಗುಡ್​ ನ್ಯೂಸ್​! ಮನೆಯಲ್ಲೇ ಕುಳಿತು ಸಿನಿಮಾ ನೋಡಿ

ಮಂಸೋರೆ ನಿರ್ದೇಶನದ ‘Act 1978’ ಚಿತ್ರ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ ಕೋವಿಡ್​-19 ಭೀತಿಯಿಂದ ಈ ಸಿನಿಮಾವನ್ನು ಅನೇಕರು ಚಿತ್ರಮಂದಿರದಲ್ಲಿ ನೋಡಲು ಹಿಂದೇಟು ಹಾಕಿದ್ದರು.

‘Act 1978’ ಚಿತ್ರ ಮಿಸ್​ ಮಾಡಿಕೊಂಡವರಿಗೆ ಇಲ್ಲಿದೆ ಗುಡ್​ ನ್ಯೂಸ್​! ಮನೆಯಲ್ಲೇ ಕುಳಿತು ಸಿನಿಮಾ ನೋಡಿ
ಆಕ್ಟ್​ 1978 ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
| Updated By: ganapathi bhat

Updated on: Mar 10, 2021 | 12:18 PM

ಲಾಕ್​ ಡೌನ್​ ಸಡಿಲಿಕೆ ಬಳಿಕ ದೊಡ್ಡ ದೊಡ್ಡ ಸ್ಟಾರ್​ ಸಿನಿಮಾಗಳು ರಿಲೀಸ್​ ಆಗಲು ಅನುಮಾನ ಪಡುತ್ತಿದ್ದವು. ಅಂಥ ಸಂದರ್ಭದಲ್ಲಿ ಧೈರ್ಯವಾಗಿ ಚಿತ್ರಮಂದಿರದಲ್ಲಿ ರಿಲೀಸ್​ ಆಗಿತ್ತು ‘ಆಕ್ಟ್​ 1978’ ಚಿತ್ರ. ಆದರೆ ಆಗಿನ್ನೂ ಕೊರೊನಾ ಲಸಿಕೆ ಲಭ್ಯವಿಲ್ಲದ ಕಾರಣ ಬಹುತೇಕರು ಥಿಯೇಟರ್​ಗೆ ಬರಲು ಭಯ ಪಟ್ಟುಕೊಂಡಿದ್ದರು. ಹಾಗಾಗಿ ಚಿತ್ರಮಂದಿರದಲ್ಲಿ ‘Act 1978’ ನೋಡಲು ಅನೇಕರಿಗೆ ಸಾಧ್ಯವಾಗಿರಲಿಲ್ಲ.

ಥಿಯೇಟರ್​ಗಳಲ್ಲಿ ಈ ಚಿತ್ರವನ್ನು ಮಿಸ್ ಮಾಡಿಕೊಂಡಿದ್ದವರು ಈಗ ಮನೆಯಲ್ಲೇ ಕುಳಿತು ನೋಡಬಹುದು. ಬಿಡುಗಡೆಯಾಗಿ ಎರಡೂವರೆ ತಿಂಗಳ ಬಳಿಕ ಓಟಿಟಿ ಪ್ಲಾಟ್​​ಫಾರ್ಮ್​ನಲ್ಲಿ ‘ಆಕ್ಟ್​ 1978’ ಚಿತ್ರ ವೀಕ್ಷಣೆಗೆ ಲಭ್ಯವಾಗುತ್ತಿದೆ. ಅಮೇಜಾನ್​ ಪ್ರೈಮ್​ನಲ್ಲಿ ಪ್ರಸಾರ ಆರಂಭಿಸಿದೆ. ಇದು ಚಿತ್ರಪ್ರೇಮಿಗಳಿಗೆ ಖುಷಿ ನೀಡಿದೆ.

‘ಹರಿವು’ ಮತ್ತು ‘ನಾತಿಚರಾಮಿ’ ಸಿನಿಮಾಗಳ ಬಳಿಕ ನಿರ್ದೇಶಕ ಮಂಸೋರೆ ಅವರು ‘Act 1978’ ಚಿತ್ರ ಮಾಡಿದರು. ಗರ್ಭಿಣಿ ಮಹಿಳೆಯ ಪಾತ್ರದಲ್ಲಿ ಯಗ್ನಾ ಶೆಟ್ಟಿ ನಟಿಸಿದರು. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ಬಿ. ಸುರೇಶ, ಸಂಚಾರಿ ವಿಜಯ್​, ಪ್ರಮೋದ್​ ಶೆಟ್ಟಿ, ರಾಘು ಶಿವಮೊಗ್ಗ, ಕೃಷ್ಣ ಹೆಬ್ಬಾಳೆ ಮುಂತಾದವರು ಅಭಿನಯಿಸಿರುವ ಈ ಸಿನಿಮಾ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಓಟಿಟಿ ಮೂಲಕ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರಿಗೆ ಈ ಸಿನಿಮಾ ಲಭ್ಯವಾಗಿದೆ.

ತುಂಬ ಗರ್ಭಿಣಿಯೊಬ್ಬಳು ತನ್ನ ಗಂಡನ ಸಾವಿಗೆ ನ್ಯಾಯ ಹುಡುಕುವ ಕಥೆಯನ್ನು Act 1978 ಸಿನಿಮಾ ಹೊಂದಿದೆ. ಆ ಮೂಲಕ ಸರ್ಕಾರಿ ಅಧಿಕಾರಿಗಳ ಲಂಚಾವತಾರವನ್ನು ಬಯಲಿಗೆ ಎಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಈ ಚಿತ್ರವನ್ನು ಕನ್ನಡ ಸಿನಿಮಾರಂಗದ ಅನೇಕ ಸೆಲೆಬ್ರಿಟಿಗಳು ಪ್ರಶಂಸಿಸಿದ್ದರು. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಇಡೀ ತಂಡವನ್ನು ತಮ್ಮ ಮನೆಗೆ ಕರೆಸಿಕೊಂಡು ಅಭಿನಂದಿಸಿದ್ದರು. ಹಂಸಲೇಖ ಅವರು ಚಿತ್ರವನ್ನು ಹಾಡಿ ಹೊಗಳಿದ್ದರು.

ಇದನ್ನೂ ಓದಿ: ‘ಪ್ರಾಣ ಒತ್ತೆಯಿಟ್ಟು ಮಾಡಿದ ಸಿನಿಮಾಗೆ ಇಂಥ ಅನ್ಯಾಯ’! ನೋವು ತೋಡಿಕೊಂಡ ಖ್ಯಾತ ನಟ ಸಂಚಾರಿ ವಿಜಯ್​

ಲಾಕ್​ಡೌನ್ ನಂತರ ಬಿಡುಗಡೆಯಾಗಿ ಯಶಸ್ವಿ 50 ದಿನ ಪೂರೈಸಿದ ಆ್ಯಕ್ಟ್- 1978

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್