AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕಾಲದ ಸ್ಟಾರ್ ನಟ, ಬಳಿಕ ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಈಗ ಸಿನಿಮಾಕ್ಕೆ ರೀಎಂಟ್ರಿ

Actor Abbas: ಐಶ್ವರ್ಯಾ ರೈ, ಮಮ್ಮುಟಿ, ಮಾಧವನ್ ಇನ್ನೂ ಹಲವಾರು ಸ್ಟಾರ್ ನಟ-ನಟಿಯರು, ಹಲವು ಅತ್ಯುತ್ತಮ ನಿರ್ದೇಶಕರುಗಳ ಜೊತೆಗೆ ಕೆಲಸ ಮಾಡಿ, ಸೂಪರ್ ಸ್ಟಾರ್ ಎನಿಸಿಕೊಂಡಿದ್ದ ನಟನೋರ್ವ ಆ ಬಳಿಕ ಎಲ್ಲವನ್ನೂ ಕಳೆದುಕೊಂಡು ಚಿತ್ರರಂಗದಿಂದಲೇ ದೂರಾಗಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಾ, ಲಾರಿ ಓಡಿಸುತ್ತಾ ಜೀವನ ನಡೆಸಿ, ಇದೀಗ ಬರೋಬ್ಬರಿ 11 ವರ್ಷದ ಬಳಿಕ ಚಿತ್ರರಂಗಕ್ಕೆ ಮರಳಲು ಸಜ್ಜಾಗಿದ್ದಾರೆ. ಯಾರದು?

ಒಂದು ಕಾಲದ ಸ್ಟಾರ್ ನಟ, ಬಳಿಕ ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಈಗ ಸಿನಿಮಾಕ್ಕೆ ರೀಎಂಟ್ರಿ
Abbas
ಮಂಜುನಾಥ ಸಿ.
|

Updated on:Mar 21, 2026 | 4:48 PM

Share

ಸಿನಿಮಾ (Cinema) ರಂಗವೇ ಹಾಗೆ. ಎಲ್ಲೋ, ಹೇಗೋ ಇದ್ದವರು ಸಹ ಸ್ಟಾರ್ ಆಗಿ ಬಿಡುತ್ತಾರೆ, ಸ್ಟಾರ್ ಆಗಿ ಮೆರೆದವರು ಸಹ ಅದೃಷ್ಟ ಕೈಕೊಟ್ಟು ಪಾತಾಳ ಸೇರಿಬಿಡುತ್ತಾರೆ. ಇದಕ್ಕೆ ಅತ್ಯುತ್ತಮ ಉದಾಹರಣೆ ದಕ್ಷಿಣ ಭಾರತ ಚಿತ್ರರಂಗದಲ್ಲಿದೆ. ಐಶ್ವರ್ಯಾ ರೈ, ಮಮ್ಮುಟಿ, ಮಾಧವನ್ ಇನ್ನೂ ಹಲವಾರು ಸ್ಟಾರ್ ನಟ-ನಟಿಯರು, ಹಲವು ಅತ್ಯುತ್ತಮ ನಿರ್ದೇಶಕರುಗಳ ಜೊತೆಗೆ ಕೆಲಸ ಮಾಡಿ, ಸೂಪರ್ ಸ್ಟಾರ್ ಎನಿಸಿಕೊಂಡಿದ್ದ ನಟನೋರ್ವ ಆ ಬಳಿಕ ಎಲ್ಲವನ್ನೂ ಕಳೆದುಕೊಂಡು ಚಿತ್ರರಂಗದಿಂದಲೇ ದೂರಾಗಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಾ, ಲಾರಿ ಓಡಿಸುತ್ತಾ ಜೀವನ ನಡೆಸಿ, ಇದೀಗ ಬರೋಬ್ಬರಿ 11 ವರ್ಷದ ಬಳಿಕ ಚಿತ್ರರಂಗಕ್ಕೆ ಮರಳಲು ಸಜ್ಜಾಗಿದ್ದಾರೆ. ಅದು ಇನ್ಯಾರೂ ಅಲ್ಲ ಕನ್ನಡದಲ್ಲೂ ನಟಿಸಿರುವ ತಮಿಳಿನ ನಟ ಅಬ್ಬಾಸ್.

1996 ರ ಬ್ಲಾಕ್ ಬಸ್ಟರ್, ಕಲ್ಟ್ ಕ್ಲಾಸಿಕ್ ಸಿನಿಮಾ ‘ಪ್ರೇಮ ದೇಸಂ’ ಸಿನಿಮಾ ಮೂಲಕ ನಟನೆ ಆರಂಭಿಸಿದ ಅಬ್ಬಾಸ್ ತಮ್ಮ ಅತ್ಯುತ್ತಮ ನಟನೆ ಮತ್ತು ಅದ್ಭುತ ಲುಕ್ಸ್​​ನಿಂದಾಗಿ ಬಹು ಬೇಗ ಸ್ಟಾರ್ ನಟ ಎನಿಸಿಕೊಂಡರು. ವರ್ಷಕ್ಕೆ ಏಳು-ಎಂಟು ಸಿನಿಮಾಗಳಲ್ಲಿ ನಾಯಕನಾಗಿ ನಟಿಸುತ್ತಿದ್ದರು. ಕನ್ನಡದಲ್ಲಿ ಮಾಧವನ್ ಜೊತೆಗೆ ‘ಶಾಂತಿ, ಶಾಂತಿ ಶಾಂತಿ’ ಹೆಸರಿನ ಸಿನಿಮಾನಲ್ಲಿಯೂ ನಟಿಸಿದ್ದರು. ಐಶ್ವರ್ಯಾ ರೈ, ಕಮಲ್ ಹಾಸನ್, ರಜನೀಕಾಂತ್, ಮಮ್ಮುಟಿ ಇನ್ನೂ ಹಲವರೊಟ್ಟಿಗೆ ನಟಿಸಿದರು ಅಬ್ಬಾಸ್, 2000 ದಶಕದಲ್ಲೂ ಸ್ಟಾರ್ ಆಗಿದ್ದರು, ಹಲವು ಒಳ್ಳೆಯ ಸಿನಿಮಾಗಳಲ್ಲಿ ನಟಿಸಿದರು. ಆದರೆ ಆ ಬಳಿಕ ಅವರಿಗೆ ಅವಕಾಶಗಳು ಕಡಿಮೆ ಆದವು.

ಇದನ್ನೂ ಓದಿ:‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ

2015ರ ಬಳಿಕ ಚಿತ್ರರಂಗದಿಂದಲೇ ದೂರಾದ ಅಬ್ಬಾಸ್ ವಿದೇಶಕ್ಕೆ ಹೋದರು ಅಲ್ಲಿ ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಮಾಡಿದರು. ಲಾರಿ ಡ್ರೈವಿಂಗ್ ಮಾಡಿದರು. ಕಸ್ಟ್ರಕ್ಷನ್ ನಲ್ಲಿ ಕೆಲಸ ಮಾಡಿದರು. ಬಳಿಕ ಮೋಟಿವೇಷನಲ್ ಸ್ಪೀಕರ್ ಆದರು. ಆದರೆ ಇದೀಗ ಅವರು ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಇದೀಗ 11 ವರ್ಷಗಳ ನಂತರ ಅಬ್ಬಾಸ್ ಮತ್ತೆ ಬಣ್ಣ ಹಚ್ಚಿದ್ದಾರೆ. ಜಿ.ವಿ. ಪ್ರಕಾಶ್ ನಟನೆಯ ‘ಹ್ಯಾಪಿ ರಾಜ್’ ಎಂಬ ತಮಿಳು ಚಿತ್ರದಲ್ಲಿ ಅವರು ಪ್ರಮುಖ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಟ್ರೈಲರ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಅದರ ಜೊತೆಗೆ ಮಲಯಾಳಂನ ‘ಹಾಫ್’ ಹೆಸರಿನ ಸಿನಿಮಾನಲ್ಲಿಯೂ ನಟಿಸುತ್ತಿದ್ದಾರೆ. ಅದರ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ.

ಅಬ್ಬಾಸ್, ತಮಿಳಿನ ಜೊತೆಗೆ ತೆಲುಗು, ಮಲಯಾಳಂ, ಹಿಂದಿ ಮತ್ತು ಕನ್ನಡ ಸಿನಿಮಾನಲ್ಲಿಯೂ ನಟಿಸಿದ್ದಾರೆ. ಕನ್ನಡದ ‘ಶಾಂತಿ ಶಾಂತಿ ಶಾಂತಿ’ ಸಿನಿಮಾ ಅದಾದ ಬಳಿಕ ‘ಶ್ವೇತ ನಾಗ’, ‘ಅಪ್ಪು ಪಪ್ಪು’, ‘ಸವಾರಿ 2’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಅವರು ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿರುವುದು ಅವರ ಹಳೆಯ ಅಭಿಮಾನಿಗಳಿಗೆ ಖುಷಿ ತಂದಿದೆ. ಮೊದಲಿನಂತೆ ಅವರಿಗೆ ಸ್ಟಾರ್ ಗಿರಿ ದೊರಕುತ್ತದೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Sat, 21 March 26

Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್