AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಬಲ್ ಪಾರ್ಟ್​ನಲ್ಲಿ ಬಂದ ಅಜಿತ್​; ಹೊಸ ಸಿನಿಮಾಗಾಗಿ ಮೂರು ಅವತಾರ

ದೊಡ್ಡ ಬಜೆಟ್ ಸಿನಿಮಾಗಳನ್ನು ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಮಾಡೋಕೆ ಎಲ್ಲರೂ ಇಷ್ಟಪಡುತ್ತಾರೆ. ಅದೇ ರೀತಿ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರವನ್ನು ಪೊಂಗಲ್​ ಸಂದರ್ಭದಲ್ಲೇ ರಿಲೀಸ್ ಮಾಡಲಾಗುತ್ತಿದೆ. ಈ ಸಿನಿಮಾಗಳ ಜೊತೆ ಯಾವ ಯಾವ ಸಿನಿಮಾಗಳು ಸ್ಪರ್ಧೆಗೆ ಇಳಿಯಲಿವೆ ಎನ್ನುವ ಕುತೂಹಲ ಮೂಡಿದೆ.

ತ್ರಿಬಲ್ ಪಾರ್ಟ್​ನಲ್ಲಿ ಬಂದ ಅಜಿತ್​; ಹೊಸ ಸಿನಿಮಾಗಾಗಿ ಮೂರು ಅವತಾರ
ಅಜಿತ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: May 20, 2024 | 2:35 PM

Share

ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರು ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಬಗ್ಗೆ ಇತ್ತೀಚೆಗೆ ಘೋಷಣೆ ಆಗಿತ್ತು. ಈಗ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಇದರಲ್ಲಿ ಅವರು ತ್ರಿಬಲ್ ರೋಲ್​​ನಲ್ಲಿ ಕಾಣಿಸಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಇದು ಅಜಿತ್ ಅವರ 63ನೇ ಸಿನಿಮಾ ಆಗಿದ್ದು, ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಸಿನಿಮಾ 2025ರ ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಆಗಲಿದೆ.

‘ಗುಡ್ ಬ್ಯಾಡ್ ಅಗ್ಲಿ’ ಚಿತ್ರದ ಪೋಸ್ಟರ್ ಗಮನ ಸೆಳೆದಿದೆ. ಇದರಲ್ಲಿ ಮೂರು ಅಜಿತ್​ನ ತೋರಿಸಲಾಗಿದೆ.  ಮಧ್ಯದಲ್ಲಿರೋ ಅಜಿತ್ ಅವರು ಸಖತ್ ದಪ್ಪ ಕಾಣುತ್ತಿದ್ದಾರೆ. ಅವರ ಕೈಗೆ ಟ್ಯಾಟೂ ಇದೆ. ತುಂಬಾನೇ ಗಂಭೀರವಾಗಿಯೂ ಕಾಣಿಸುತ್ತಾರೆ. ಮತ್ತೊಂದರಲ್ಲಿ ಅವರು ಮಧ್ಯಬೆಟ್ಟು ತೋರಿಸುತ್ತಿದ್ದು, ಬ್ಲರ್ ಮಾಡಲಾಗಿದೆ. ಮತ್ತೊಂದರಲ್ಲಿ ಅಜಿತ್ ಅವರು ಹೊಡೆಯೋಕೆ ರೆಡಿ ಆಗಿದ್ದಾರೆ. ಟೈಟಲ್​ಗೆ ತಕ್ಕಂತೆ ಸಿನಿಮಾ ಮೂಡಿ ಬಂದಿದೆ.

ಇದನ್ನೂ ಓದಿ: ಅಜಿತ್ ಕುಮಾರ್ ಚಿತ್ರಕ್ಕೆ ಹಾಲಿವುಡ್ ಸಿನಿಮಾ ಟೈಟಲ್; ‘ಪುಷ್ಪ’ ನಿರ್ಮಾಪಕನಿಂದ ಬಂಡವಾಳ

ದೊಡ್ಡ ಬಜೆಟ್ ಸಿನಿಮಾಗಳನ್ನು ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಮಾಡೋಕೆ ಎಲ್ಲರೂ ಇಷ್ಟಪಡುತ್ತಾರೆ. ಅದೇ ರೀತಿ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರವನ್ನು ಪೊಂಗಲ್​ ಸಂದರ್ಭದಲ್ಲೇ ರಿಲೀಸ್ ಮಾಡಲಾಗುತ್ತಿದೆ. ಈ ಸಿನಿಮಾಗಳ ಜೊತೆ ಯಾವ ಯಾವ ಸಿನಿಮಾಗಳು ಸ್ಪರ್ಧೆಗೆ ಇಳಿಯಲಿವೆ ಎನ್ನುವ ಕುತೂಹಲ ಮೂಡಿದೆ.

ದೇವಿ ಶ್ರೀ ಪ್ರಸಾದ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಧಿಕ್ ರವಿಚಂದ್ರನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರಿಬ್ಬರ ಕಾಂಬಿನೇಷನ್​ನ ಮೊದಲ ಸಿನಿಮಾ.  ಸದ್ಯ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ. ಶೀಘ್ರವೇ ಚಿತ್ರದ ಶೂಟಿಂಗ್ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ