AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ಕುಮಾರ್ ಹೊಸ ಸಾಧನೆ; ಶೂಟಿಂಗ್ ಚಾಂಪಿಯನ್​ಶಿಪ್​ನಲ್ಲಿ ನಾಲ್ಕು ಚಿನ್ನ, ಎರಡು ಕಂಚು ಗೆದ್ದ ನಟ

ತಿರುಚಿ ರೈಫಲ್​ ಕ್ಲಬ್​ನಲ್ಲಿ ಈ ಸ್ಪರ್ಧೆ ನಡೆದಿದೆ. ಸ್ಪರ್ಧೆ ನಡೆಯುವ ಕಟ್ಟಡದ ಹೊರ ಭಾಗದಲ್ಲಿ ಅಜಿತ್ ಫ್ಯಾನ್ಸ್ ದೊಡ್ಡಮಟ್ಟದಲ್ಲಿ ಸೇರಿದ್ದರು. ಕಟ್ಟಡದಿಂದ ಅಜಿತ್ ಅವರು ಫ್ಯಾನ್ಸ್ ಕಡೆ ತಿರುಗಿ ಕೈ ಬೀಸುತ್ತಿದ್ದಂತೆ ನೆರೆದಿದ್ದ ಫ್ಯಾನ್ಸ್ ಜೋರಾಗಿ ಕೂಗಿದ್ದಾರೆ.

ಅಜಿತ್ ಕುಮಾರ್ ಹೊಸ ಸಾಧನೆ; ಶೂಟಿಂಗ್ ಚಾಂಪಿಯನ್​ಶಿಪ್​ನಲ್ಲಿ ನಾಲ್ಕು ಚಿನ್ನ, ಎರಡು ಕಂಚು ಗೆದ್ದ ನಟ
ಅಜಿತ್ ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 30, 2022 | 5:46 PM

ನಟ ಅಜಿತ್ ಕುಮಾರ್ (Ajith Kumar) ಅವರು ಮಲ್ಟಿಟ್ಯಾಲೆಂಟೆಡ್. ನಟನೆ ಅಲ್ಲದೆ, ಹಲವು ಕ್ಷೇತ್ರಗಳಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಈಗ ಶೂಟಿಂಗ್ ಸ್ಪರ್ಧೆಯಲ್ಲಿ ಆರು ಪದಕ ಗೆದ್ದಿದ್ದಾರೆ. 47ನೇ ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್​ಶಿಪ್​ನಲ್ಲಿ ಅಜಿತ್ ಸ್ಪರ್ಧಿಯಾಗಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ನಾಲ್ಕು ಸ್ಪರ್ಧೆಯಲ್ಲಿ ಮೊದಲ ಸ್ಥಾನ ಹಾಗೂ ಎರಡು ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಸಿಕ್ಕಿದೆ. ಅವರ ಸಾಧನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸೆಂಟರ್ ಫೈರ್​ ಪಿಸ್ತೂಲ್ ಪುರುಷ ವಿಭಾಗ, ಸ್ಟ್ಯಾಂಡರ್ಡ್​ ಪಿಸ್ತೂಲ್ ಮಾಸ್ಟರ್​ ಪುರುಷ ವಿಭಾಗ, 50 ಮೀಟರ್ ಫ್ರೀ ಪಿಸ್ತೂಲ್​ ಮಾಸ್ಟರ್ ಪುರುಷ ವಿಭಾಗ ಹಾಗೂ ಸ್ಟ್ಯಾಂಡರ್ಡ್​ ಪಿಸ್ತೂಲ್ ಮಾಸ್ಟರ್ ಪುರುಷ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 50 ಮೀಟರ್ ಫ್ರೀ ಪಿಸ್ತೂಲ್ ಪುರುಷ ವಿಭಾಗ ಹಾಗೂ ಸ್ಟ್ಯಾಂಡರ್ಡ್​ ಪಿಸ್ತೂಲ್ ಪುರುಷ ವಿಭಾಗದಲ್ಲಿ ಕಂಚಿನ ಪದಕ ಬಾಚಿಕೊಂಡಿದ್ದಾರೆ.

ತಿರುಚಿ ರೈಫಲ್​ ಕ್ಲಬ್​ನಲ್ಲಿ ಈ ಸ್ಪರ್ಧೆ ನಡೆದಿದೆ. ಸ್ಪರ್ಧೆ ನಡೆಯುವ ಕಟ್ಟಡದ ಹೊರ ಭಾಗದಲ್ಲಿ ಅಜಿತ್ ಫ್ಯಾನ್ಸ್ ದೊಡ್ಡಮಟ್ಟದಲ್ಲಿ ಸೇರಿದ್ದರು. ಕಟ್ಟಡದಿಂದ ಅಜಿತ್ ಅವರು ಫ್ಯಾನ್ಸ್ ಕಡೆ ತಿರುಗಿ ಕೈ ಬೀಸುತ್ತಿದ್ದಂತೆ ನೆರೆದಿದ್ದ ಫ್ಯಾನ್ಸ್ ಜೋರಾಗಿ ಕೂಗಿದ್ದಾರೆ, ಸಿಳ್ಳೆ ಹೊಡೆದಿದ್ದಾರೆ. ಫ್ಯಾನ್ಸ್ ದೊಡ್ಡ ಮಟ್ಟದಲ್ಲಿ ಸೇರಿದ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ಇದನ್ನೂ ಓದಿ
Image
Thala Ajith Kumar Birthday: ಅಜಿತ್​ ಕುಮಾರ್​ ಜನ್ಮದಿನ: ವಿಮಾನದ ಪೈಲಟ್​ ಕೂಡ ಆಗಿರುವ ಸ್ಟಾರ್​ ನಟನಿಗಿದೆ ಹಲವು ಹವ್ಯಾಸ
Image
ಒಟಿಟಿಯಲ್ಲಿ ‘ವಲಿಮೈ’ ದಾಖಲೆ; ಒಂದೇ ನಿಮಿಷಕ್ಕೆ 10 ಕೋಟಿ ಸ್ಟ್ರೀಮಿಂಗ್
Image
​ಕೀಳು ಮಟ್ಟಕ್ಕೆ ಬಂತು ಫ್ಯಾನ್ಸ್​ ವಾರ್​; ದಳಪತಿ ವಿಜಯ್​ ನಿಧನ ಎಂದು ಫೇಕ್​ ನ್ಯೂಸ್​ ಹಬ್ಬಿಸಿದ ಅಜಿತ್​ ಫ್ಯಾನ್ಸ್​
Image
ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

ಅಜಿತ್ ಅವರು ಈ ರೀತಿ ಪ್ರಶಸ್ತಿ ಗೆಲ್ಲುತ್ತಿರುವುದು ಇದೇ ಮೊದಲೇನು ಅಲ್ಲ. ಕಳೆದ ವರ್ಷ ನಡೆದ ತಮಿಳುನಾಡು ಶೂಟಿಂಗ್ ಚಾಂಪಿಯನ್​ಶಿಪ್​ನಲ್ಲಿ ಹಲವು ಪ್ರಶಸ್ತಿಗಳನ್ನು ಅವರು ಬಾಚಿಕೊಂಡಿದ್ದರು. ಶೂಟಿಂಗ್ ಮಾತ್ರವಲ್ಲದೆ ಕಾರು ಹಾಗೂ ಬೈಕ್​ ರೇಸಿಂಗ್ ಬಗ್ಗೆಯೂ ಅವರಿಗೆ ಆಸಕ್ತಿ ಇದೆ. ಡ್ರೋನ್ ಡಿಸೈನಿಂಗ್ ಕೂಡ ಮಾಡುತ್ತಾರೆ.

ಇದನ್ನೂ ಓದಿ: ಬೈಕ್​ನಲ್ಲೇ ಅಜಿತ್ ಕುಮಾರ್ ಯುರೋಪ್ ಪರ್ಯಟನೆ; ವೈರಲ್ ಆಯ್ತು ಫೋಟೋ

ಸಿನಿಮಾ ವಿಚಾರಕ್ಕೆ ಬರೋದಾದರೆ ‘ವಲಿಮೈ’ ಚಿತ್ರದಲ್ಲಿ ಅಜಿತ್ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಗೆದ್ದು ಬೀಗಿತ್ತು. ಈ ಚಿತ್ರ ಎಚ್. ವಿನೋದ್ ನಿರ್ದೇಶನ ಹೇಳಿದ್ದರು. ಬೋನಿ ಕಪೂರ್ ಬಂಡವಾಳ ಹೂಡಿದ್ದರು. ಈ ಮೂವರು ಹೊಸ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್ ಆಗಿಲ್ಲ.

ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್