AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ: ಕೊನೆಯ ಮಾತನ್ನು ಕೇಳಲು ಆಗಲೇ ಇಲ್ಲ

ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ (85) ವಯೋಸಹಜ ಕಾಯಿಲೆಯಿಂದ ಚೆನ್ನೈನಲ್ಲಿ ನಿಧನರಾಗಿದ್ದಾರೆ. ದುಬೈನಲ್ಲಿದ್ದ ಅಜಿತ್ ಸುದ್ದಿ ತಿಳಿದು ಚೆನ್ನೈಗೆ ಮರಳುತ್ತಿದ್ದಾರೆ. ಚಿತ್ರರಂಗದ ಗಣ್ಯರು, ಕಮಲ್ ಹಾಸನ್, ಎಂ.ಕೆ. ಸ್ಟಾಲಿನ್ ಸೇರಿದಂತೆ ರಾಜಕೀಯ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ: ಕೊನೆಯ ಮಾತನ್ನು ಕೇಳಲು ಆಗಲೇ ಇಲ್ಲ
ತಾಯಿ ಜೊತೆ ಅಜಿತ್
ರಾಜೇಶ್ ದುಗ್ಗುಮನೆ
|

Updated on:May 30, 2026 | 12:28 PM

Share

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ (Ajith Kumar) ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೂರು ವರ್ಷಗಳ ಹಿಂದೆ (ಮಾರ್ಚ್ 24, 2023) ಅಜಿತ್ ಅವರ ತಂದೆ ಪಿ. ಸುಬ್ರಮಣ್ಯಂ ಅವರು ತಮ್ಮ 85ನೇ ವಯಸ್ಸಿನಲ್ಲಿಯೇ ನಿಧನರಾಗಿದ್ದರು.

ಕಾರ್​ ರೇಸ್ ಹಿನ್ನೆಲೆಯಲ್ಲಿ ದುಬೈನಲ್ಲಿದ್ದ ನಟ ಅಜಿತ್ ಕುಮಾರ್ ಅವರು ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚೆನ್ನೈಗೆ ಹಿಂತಿರುಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಪಾಲವಾಕ್ಕಂನಲ್ಲಿರುವ ಅಜಿತ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ತಾಯಿಯ ಜೊತೆ ಕೊನೆಯದಾಗಿ ಮಾತನಾಡಲು ಅಜಿತ್​ಗೆ ಸಾಧ್ಯವಾಗಲೇ ಇಲ್ಲ.

ಅಜಿತ್ ತಾಯಿಯ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಅಜಿತ್ ಹಾಗೂ ಅವರ ಕುಟುಂಬಕ್ಕೆ ನನ್ನ ಸಾಂತ್ವನ’ ಎಂದು ಕಮಲ್ ಹಾಸನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್

ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡಿನ ಮಾಜಿ ಸಿಎಂ ಎಂ.ಕೆ. ಸ್ಟಾಲಿನ್, ಬಿಜೆಪಿ ನಾಯಕ ಕೆ. ಅಣ್ಣಾಮಲೈ ಸೇರಿದಂತೆ ಅನೇಕರು ಅಜಿತ್ ತಾಯಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಅಜಿತ್ ಕೊನೆಯದಾಗಿ ಕಾಣಿಸಿಕೊಂಡಿದ್ದು ಕಳೆದ ವರ್ಷ ರಿಲೀಸ್ ಆದ ‘ವಿದುಮುಯಾರ್ಚಿ’ ಹಾಗೂ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ. ಸದ್ಯಕ್ಕೆ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಅವರಿಗೆ ಕಾರ್ ರೇಸ್ ಎಂದರೆ ಇಷ್ಟ. ಅವರು ತಮ್ಮದೇ ತಂಡ ಆರಂಭಿಸಿದ್ದು, ಇದರಲ್ಲೇ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Sat, 30 May 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More