AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಿತ್ರಕ್ಕಾಗಿ ನಟ ಚಿರಂಜೀವಿ ಭರ್ಜರಿ ವರ್ಕೌಟ್; ವಿಡಿಯೋ ವೈರಲ್

2023ರಲ್ಲಿ ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಚಿತ್ರ ರಿಲೀಸ್ ಆಯಿತು. ಆದರೆ, ಅಂದುಕೊಂಡ ರೀತಿಯಲ್ಲಿ ಸಿನಿಮಾ ಮೂಡಿ ಬರಲಿಲ್ಲ. ಈ ಸಿನಿಮಾ ಸಾಧಾರಣ ಗಳಿಕೆ ಮಾಡಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಈಗ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ವರ್ಕೌಟ್ ಮಾಡುತ್ತಿದ್ದಾರೆ.

ಹೊಸ ಚಿತ್ರಕ್ಕಾಗಿ ನಟ ಚಿರಂಜೀವಿ ಭರ್ಜರಿ ವರ್ಕೌಟ್; ವಿಡಿಯೋ ವೈರಲ್
ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on:Feb 01, 2024 | 11:22 AM

Share

ನಟ ಚಿರಂಜೀವಿ (Chiranjeevi) ಅವರಿಗೆ ಈಗ 68 ವರ್ಷ ವಯಸ್ಸು. ಅವರು ಈಗಲೂ ಆ್ಯಕ್ಷನ್ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿರಂಜೀವಿ ಅವರು ಫಿಟ್ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಹೀಗಾಗಿ ಅವರು ವರ್ಕೌಟ್ ಮಾಡಲು ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಈಗ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಭರ್ಜರಿ ವರ್ಕೌಟ್ ಮಾಡುತ್ತಿರುವುದು ಕಂಡು ಬಂದಿದೆ. ಅವರು ಇಷ್ಟೆಲ್ಲ ರೆಡಿ ಆಗುತ್ತಿರುವುದು ‘ವಿಶ್ವಂಬರ’ ಚಿತ್ರಕ್ಕಾಗಿ. ಈ ಫ್ಯಾಂಟಸಿ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ.

2023ರಲ್ಲಿ ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಸಿನಿಮಾ ರಿಲೀಸ್ ಆಯಿತು. ಆದರೆ, ಅಂದುಕೊಂಡ ರೀತಿಯಲ್ಲಿ ಸಿನಿಮಾ ಮೂಡಿ ಬರಲಿಲ್ಲ. ಈ ಚಿತ್ರ ಸಾಧಾರಣ ಗಳಿಕೆ ಮಾಡಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಸೋಲನ್ನು ಮರೆತು ಚಿರಂಜೀವಿ ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ವಸಿಷ್ಠ ನಿರ್ದೇಶನದ ಈ ಚಿತ್ರ ಚಿರಂಜೀವಿ ಅವರ 156ನೇ ಸಿನಿಮಾ ಅನ್ನೋದು ವಿಶೇಷ.

ಚಿರಂಜೀವಿ ಮಾಡಿರೋ ಟ್ವೀಟ್​..

ಫ್ಯಾಂಟಸಿ ಸಿನಿಮಾ ಆಗಿರುವುದರಿಂದ ಪಾತ್ರ ಕೂಡ ಬೇರೆ ರೀತಿಯಲ್ಲೇ ಇರಲಿದೆ. ಅವರು ಹೊಸ ಅವತಾರ ತಾಳಲು ಬಾಡಿ ಬಿಲ್ಡ್ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಚಿರಂಜೀವಿ ಅವರು ಸಖತ್ ವರ್ಕೌಟ್ ಮಾಡುತ್ತಿದ್ದಾರೆ.  ನವೆಂಬರ್ 2023ರಲ್ಲಿ ಈ ಚಿತ್ರ ಸೆಟ್ಟೇರಿದೆ. ಈ ಚಿತ್ರಕ್ಕೆ ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಬಜೆಟ್ 150 ಕೋಟಿ ರೂಪಾಯಿಗೂ ಅಧಿಕವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಸಿನಿಮಾದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎನ್ನುವ ವಿಚಾರವನ್ನು ತಂಡ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

ಇದಲ್ಲದೆ, ಬೋಯಪತಿ ಶ್ರೀನು ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲೂ ಚಿರಂಜೀವಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆಯೂ ನಿರೀಕ್ಷೆ ಮೂಡಿದೆ. ಇತ್ತೀಚೆಗೆ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಅವಾರ್ಡ್ ಸಿಕ್ಕಿದೆ. ಇದರಿಂದ ಅವರು ಖುಷಿಯಾಗಿದ್ದಾರೆ. ಸಿನಿಮಾ ರಂಗಕ್ಕೆ ಚಿರಂಜೀವಿ ನೀಡಿದ ಕೊಡುಗೆ ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ಇದನ್ನು ಅವರ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:05 am, Thu, 1 February 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ