AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhudeva: ಅರ್ಧ ತುಂಡಾದ ಕಾಲು ಇಟ್ಟುಕೊಂಡು ಅಚ್ಚರಿ ಮೂಡಿಸಿದ ನಟ ಪ್ರಭುದೇವ; ಬೆರಗಾದ ಅಭಿಮಾನಿಗಳು

Poikkal Kuthirai First Look: ಮೊಣಕಾಲಿನವರೆಗೆ ಕಾಲು ಕಳೆದುಕೊಂಡು, ಮರದ ಕಾಲು ಅಳವಡಿಸಿಕೊಂಡಿರುವ ವ್ಯಕ್ತಿಯ ಗೆಟಪ್​ನಲ್ಲಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ. ಈ ಲುಕ್​ ನೋಡಿದ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

Prabhudeva: ಅರ್ಧ ತುಂಡಾದ ಕಾಲು ಇಟ್ಟುಕೊಂಡು ಅಚ್ಚರಿ ಮೂಡಿಸಿದ ನಟ ಪ್ರಭುದೇವ; ಬೆರಗಾದ ಅಭಿಮಾನಿಗಳು
ಅರ್ಧ ತುಂಡಾದ ಕಾಲು ಇಟ್ಟುಕೊಂಡು ಅಚ್ಚರಿ ಮೂಡಿಸಿದ ನಟ ಪ್ರಭುದೇವ; ಬೆರಗಾದ ಅಭಿಮಾನಿಗಳು
TV9 Web
| Edited By: |

Updated on: Aug 05, 2021 | 11:36 AM

Share

ಪ್ರಭುದೇವ (Prabhudheva) ಎಂದರೆ ಮೊದಲು ನೆನಪಾಗುವುದು ಡ್ಯಾನ್ಸ್​. ಮೈಯಲ್ಲಿ ಮೂಳೆಯೇ ಇಲ್ಲವೇನೋ ಎಂಬಂತೆ ಅವರು ಡ್ಯಾನ್ಸ್​ ಮಾಡುತ್ತಾರೆ. ಪ್ರಭುದೇವ (Prabhudeva) ನಟಿಸುವ ಪ್ರತಿ ಸಿನಿಮಾದಲ್ಲಿಯೂ ಅಭಿಮಾನಿಗಳು ಇಂಥ ಡ್ಯಾನ್ಸ್​ ಬಯಸುವುದು ಸಹಜ. ಆದರೆ ಅವರ ಮುಂದಿನ ಸಿನಿಮಾದಲ್ಲಿ ಅದ್ಭುತ ನೃತ್ಯವನ್ನು ನಿರೀಕ್ಷಿಸುವುದು ಸ್ವಲ್ಪ ಕಷ್ಟ ಎನಿಸುತ್ತಿದೆ. ಅವರ ಹೊಸ ಸಿನಿಮಾ ‘ಪೊಯ್​ಕ್ಕಾಲ್​ ಕುದುರೈ’ (Poikkal Kuthirai) ಚಿತ್ರದ ಫಸ್ಟ್​ ಲುಕ್​ ನೋಡಿದ ಬಳಿಕ ಇಂಥ ಅಭಿಪ್ರಾಯ ಮೂಡುತ್ತಿದೆ. ಯಾಕೆಂದರೆ, ಈ ಸಿನಿಮಾದಲ್ಲಿ ಅವರು ಒಂದು ಕಾಲು ಇಲ್ಲದ ವ್ಯಕ್ತಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ!

‘ಪೊಯ್​ಕ್ಕಾಲ್​ ಕುದುರೈ’ ಚಿತ್ರದ ಫಸ್ಟ್​ಲುಕ್​ ಬಿಡುಗಡೆ ಆಗಿದೆ. ಅದನ್ನು ಕಂಡು ಪ್ರಭುದೇವ ಅಭಿಮಾನಿಗಳು ನಿಜಕ್ಕೂ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮೊಣಕಾಲಿನವರೆಗೆ ಕಾಲು ಕಳೆದುಕೊಂಡು, ಮರದ ಕಾಲು ಅಳವಡಿಸಿಕೊಂಡಿರುವ ವ್ಯಕ್ತಿಯ ಗೆಟಪ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಒಂದು ಕೈಯಲ್ಲಿ ಮಗು ಎತ್ತಿಕೊಂಡು, ಇನ್ನೊಂದು ಕೈಯಲ್ಲಿ ದೊಡ್ಡ ಸ್ಪ್ಯಾನರ್​ ಹಿಡಿದು ಫೈಟ್​ ಮಾಡಲು ಸಿದ್ಧವಾಗಿರುವ ಭಂಗಿಯಲ್ಲಿ ಅವರ ಫಸ್ಟ್​​ಲುಕ್​ ಮೂಡಿಬಂದಿದೆ.

ಈ ಚಿತ್ರಕ್ಕೆ ಸಂತೋಷ್​ ಪಿ. ಜಯಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಶೇ.40ರಷ್ಟು ಶೂಟಿಂಗ್​ ಮುಕ್ತಾಯ ಆಗಿದೆ. ಆದಷ್ಟು ಬೇಗ ಚಿತ್ರೀಕರಣ ಮುಗಿಸಿಕೊಂಡು ಈ ವರ್ಷ ಡಿಸೆಂಬರ್​ ವೇಳೆಗೆ ಚಿತ್ರವನ್ನು ತೆರೆಕಾಣಿಸುವ ಗುರಿ ಇಟ್ಟುಕೊಳ್ಳಲಾಗಿದೆ. ವರಲಕ್ಷ್ಮೀ ಶರತ್​ಕುಮಾರ್​ ಮತ್ತು ರೈಸಾ ವಿಲ್ಸನ್​ ಅವರು ನಾಯಕಿಯರಾಗಿ ನಟಿಸುತ್ತಿದ್ದಾರೆ. ಆದರೆ ಇಬ್ಬರೂ ಕೂಡ ಪ್ರಭುದೇವಗೆ ಜೋಡಿ ಅಲ್ಲ ಎನ್ನಲಾಗುತ್ತಿದೆ. ಪ್ರಕಾಶ್​ ರೈ, ಸಮುದ್ರಖಣಿ ಮುಂತಾದವರು ಕೂಡ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

‘ಒಂದು ಕಾಲು ಇಲ್ಲದ ವ್ಯಕ್ತಿ ತನ್ನ ಮಗಳನ್ನು ಹೇಗೆ ಕಾಪಾಡುತ್ತಾನೆ ಎಂಬುದು ಚಿತ್ರದ ಕಥೆ. ಪ್ರಭುದೇವ ಅವರು ಶೂಟಿಂಗ್​ ವೇಳೆ ಒಂದು ಕಾಲು ಮಡಚಿಕೊಂಡೇ ಇರಬೇಕಿತ್ತು. ದೇಹವನ್ನು ಬ್ಯಾಲೆನ್ಸ್​ ಮಾಡುತ್ತ ನಟಿಸುವುದು ಸುಲಭ ಅಲ್ಲ. ಅದಕ್ಕಾಗಿ ಅವರು ತುಂಬ ಪ್ರಾಕ್ಟೀಸ್​ ಮಾಡಬೇಕಾಯಿತು’ ಎಂದು ನಿರ್ದೇಶಕ ಸಂತೋಷ್​ ಜಯಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ:

ಡ್ರಗ್ಸ್ ಸಾಗಾಟ: ಡ್ಯಾನ್ಸರ್ ಪ್ರಭುದೇವ ಶಿಷ್ಯ ಕಿಶೋರ್ ಶೆಟ್ಟಿ ಅರೆಸ್ಟ್

ನೀವಂದುಕೊಂಡಂತೆ ಇಲ್ಲ ಆಶಿಕಾ ರಂಗನಾಥ್​; ಬರ್ತ್​ಡೇ ದಿನವೇ ಬಯಲಾಯ್ತು ಇನ್ನೊಂದು ಮುಖ

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್