AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಗ್ಗದ ಜೈಲೂಟ; ದಿನೇ ದಿನೇ ತೂಕ ಕಳೆದುಕೊಳ್ಳುತ್ತಿರುವ ನಟ ದರ್ಶನ್

ಮಂಗಳವಾರ ರಾತ್ರಿ ದರ್ಶನ್ ಬೇಗ ಮಲಗಿದ್ದಾರೆ. ಇಂದು (ಜೂನ್ 26) ಬೆಳಿಗ್ಗೆ ಬೇಗ ಎದ್ದಿದ್ದಾರೆ. ಜೈಲಿನ ಸಿಬ್ಬಂದಿ ಬಳಿ ಬಿಸಿ ನೀರನ್ನು ಕೇಳಿ ದರ್ಶನ್ ಪಡೆದಿದ್ದಾರೆ. ಬಳಿಕ ಕೆಲ ಹೊತ್ತು ಬ್ಯಾರಾಕ್​ನಲ್ಲಿಯೇ ನಟ ದರ್ಶನ್ ವಾಕಿಂಗ್ ಮಾಡಿದ್ದಾರೆ. ಕುಟುಂಬದವರ ಭೇಟಿ ಬಳಿಕ ಅವರು ಗೆಲುವಾಗಿದ್ದಾರೆ.

ಒಗ್ಗದ ಜೈಲೂಟ; ದಿನೇ ದಿನೇ ತೂಕ ಕಳೆದುಕೊಳ್ಳುತ್ತಿರುವ ನಟ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jun 26, 2024 | 8:55 AM

Share

ರೇಣುಕಾ ಸ್ವಾಮಿ (Renuka Swamy) ಹತ್ಯೆ ಕೇಸ್​ನಲ್ಲಿ ಹಲವು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದರ್ಶನ್ ಅವರು ಈಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದಾರೆ. ಎಲ್ಲರಿಗೂ ಸಿಗುತ್ತಿರುವ ವ್ಯವಸ್ಥೆಯೇ ದರ್ಶನ್​ಗೂ ಸಿಗುತ್ತಿದೆ. ಅವರಿಗೆ ಜೈಲಿನಲ್ಲಿ ಊಟ ಸೇರುತ್ತಿಲ್ಲ. ಹೀಗಾಗಿ ಹಂತ ಹಂತವಾಗಿ ಅವರು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗೊಂದು ವಿಚಾರ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜೂನ್ 25ರ ರಾತ್ರಿ ದರ್ಶನ್ ಬೇಗನೇ ಮಲಗಿದ್ದಾರೆ. ಇಂದು (ಜೂನ್ 26) ಬೆಳಿಗ್ಗೆ 5.30ರ ಸುಮಾರಿಗೆ ಎದ್ದಿದ್ದಾರೆ. ಜೈಲಿನ ಸಿಬ್ಬಂದಿ ಬಳಿ ಬಿಸಿ ನೀರನ್ನು ಕೇಳಿ ದರ್ಶನ್ ಪಡೆದಿದ್ದಾರೆ. ಬಳಿಕ ಕೆಲ ಹೊತ್ತು ಬ್ಯಾರಾಕ್​ನಲ್ಲಿಯೇ ನಟ ದರ್ಶನ್ ವಾಕಿಂಗ್ ಮಾಡಿದ್ದಾರೆ. ಜೂನ್ 25ರಂದು ದರ್ಶನ್ ಅವರು ಪತ್ನಿ, ಮಗನ ಭೇಟಿ ಮಾಡಿದ್ದಾರೆ. ಆ ಬಳಿಕ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಮೂಡ್​ನಲ್ಲಿ ಇದ್ದಾರೆ.

ದರ್ಶನ್​ಗೆ ಜೈಲೂಟ ಒಗ್ಗುತ್ತಿಲ್ಲ. ಆದಾಗ್ಯೂ ಅನಿವಾರ್ಯವಾಗಿ ಇದನ್ನು ಸೇವಿಸಬೇಕಾದ ಸ್ಥಿತಿ ಬಂದೊದಗಿದೆ. ದಿನೇ ದಿನೇ ಅವರು ತೂಕ ಕಳೆದುಕೊಳ್ಳುತ್ತಿದ್ದಾರೆ. ಸಹ ಬಂಧಿಗಳ‌ ಜತೆ ಅಷ್ಟಾಗಿ ಬೆರೆಯದೆ ದರ್ಶನ್ ಒಂಟಿಯಾಗಿ ಕುಳಿತಿದ್ದಾರೆ.

ಪವಿತ್ರಾ ಕಥೆ ಏನು?

ಮಗಳನ್ನ ಕಂಡು ಪವಿತ್ರಾ ಗೌಡ ಕೊಂಚ ನಿರಾಳವಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಅವರು ಕುಗ್ಗಿ ಹೋಗಿದ್ದರು. ಜೂನ್ 25ರಂದು ಪವಿತ್ರಾ ಗೌಡ ಭೇಟಿಗೆ ಅವರ ಮಗಳು ಖುಷಿ ಮೊದಲಾದವರು ಆಗಮಿಸಿದ್ದರು. ಸದ್ಯ ಪವಿತ್ರಾ ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಬ್ಯಾರಕ್​ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು

ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿದ್ದರು. ಮಗಳು ಖುಷಿ ಭೇಟಿ ಬಳಿಕ ಪವಿತ್ರಾ ಗೌಡ ಮನಸ್ಸು ಕೊಂಚ ಹಗುರವಾಗಿದೆ. ಜೈಲು ಸಿಬ್ಬಂದಿ ನೀಡಿದ್ದ ಮುದ್ದೆ, ಅನ್ನ, ಚಪಾತಿ, ಸಾಂಬರ್, ಮಜ್ಜಿಗೆ ಊಟ ಮಾಡಿ ಮಲಗಿದ್ದರು. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ನಿದ್ರೆಯಿಂದ ಪವಿತ್ರಾ ಎದ್ದಿದ್ದಾರೆ. ಬ್ಯಾರಕ್​ನಲ್ಲಿಯೇ ಕೆಲ ಹೊತ್ತು ವಾಕಿಂಗ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ