AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಗ್ಗದ ಜೈಲೂಟ; ದಿನೇ ದಿನೇ ತೂಕ ಕಳೆದುಕೊಳ್ಳುತ್ತಿರುವ ನಟ ದರ್ಶನ್

ಮಂಗಳವಾರ ರಾತ್ರಿ ದರ್ಶನ್ ಬೇಗ ಮಲಗಿದ್ದಾರೆ. ಇಂದು (ಜೂನ್ 26) ಬೆಳಿಗ್ಗೆ ಬೇಗ ಎದ್ದಿದ್ದಾರೆ. ಜೈಲಿನ ಸಿಬ್ಬಂದಿ ಬಳಿ ಬಿಸಿ ನೀರನ್ನು ಕೇಳಿ ದರ್ಶನ್ ಪಡೆದಿದ್ದಾರೆ. ಬಳಿಕ ಕೆಲ ಹೊತ್ತು ಬ್ಯಾರಾಕ್​ನಲ್ಲಿಯೇ ನಟ ದರ್ಶನ್ ವಾಕಿಂಗ್ ಮಾಡಿದ್ದಾರೆ. ಕುಟುಂಬದವರ ಭೇಟಿ ಬಳಿಕ ಅವರು ಗೆಲುವಾಗಿದ್ದಾರೆ.

ಒಗ್ಗದ ಜೈಲೂಟ; ದಿನೇ ದಿನೇ ತೂಕ ಕಳೆದುಕೊಳ್ಳುತ್ತಿರುವ ನಟ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jun 26, 2024 | 8:55 AM

Share

ರೇಣುಕಾ ಸ್ವಾಮಿ (Renuka Swamy) ಹತ್ಯೆ ಕೇಸ್​ನಲ್ಲಿ ಹಲವು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದರ್ಶನ್ ಅವರು ಈಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದಾರೆ. ಎಲ್ಲರಿಗೂ ಸಿಗುತ್ತಿರುವ ವ್ಯವಸ್ಥೆಯೇ ದರ್ಶನ್​ಗೂ ಸಿಗುತ್ತಿದೆ. ಅವರಿಗೆ ಜೈಲಿನಲ್ಲಿ ಊಟ ಸೇರುತ್ತಿಲ್ಲ. ಹೀಗಾಗಿ ಹಂತ ಹಂತವಾಗಿ ಅವರು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗೊಂದು ವಿಚಾರ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜೂನ್ 25ರ ರಾತ್ರಿ ದರ್ಶನ್ ಬೇಗನೇ ಮಲಗಿದ್ದಾರೆ. ಇಂದು (ಜೂನ್ 26) ಬೆಳಿಗ್ಗೆ 5.30ರ ಸುಮಾರಿಗೆ ಎದ್ದಿದ್ದಾರೆ. ಜೈಲಿನ ಸಿಬ್ಬಂದಿ ಬಳಿ ಬಿಸಿ ನೀರನ್ನು ಕೇಳಿ ದರ್ಶನ್ ಪಡೆದಿದ್ದಾರೆ. ಬಳಿಕ ಕೆಲ ಹೊತ್ತು ಬ್ಯಾರಾಕ್​ನಲ್ಲಿಯೇ ನಟ ದರ್ಶನ್ ವಾಕಿಂಗ್ ಮಾಡಿದ್ದಾರೆ. ಜೂನ್ 25ರಂದು ದರ್ಶನ್ ಅವರು ಪತ್ನಿ, ಮಗನ ಭೇಟಿ ಮಾಡಿದ್ದಾರೆ. ಆ ಬಳಿಕ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಮೂಡ್​ನಲ್ಲಿ ಇದ್ದಾರೆ.

ದರ್ಶನ್​ಗೆ ಜೈಲೂಟ ಒಗ್ಗುತ್ತಿಲ್ಲ. ಆದಾಗ್ಯೂ ಅನಿವಾರ್ಯವಾಗಿ ಇದನ್ನು ಸೇವಿಸಬೇಕಾದ ಸ್ಥಿತಿ ಬಂದೊದಗಿದೆ. ದಿನೇ ದಿನೇ ಅವರು ತೂಕ ಕಳೆದುಕೊಳ್ಳುತ್ತಿದ್ದಾರೆ. ಸಹ ಬಂಧಿಗಳ‌ ಜತೆ ಅಷ್ಟಾಗಿ ಬೆರೆಯದೆ ದರ್ಶನ್ ಒಂಟಿಯಾಗಿ ಕುಳಿತಿದ್ದಾರೆ.

ಪವಿತ್ರಾ ಕಥೆ ಏನು?

ಮಗಳನ್ನ ಕಂಡು ಪವಿತ್ರಾ ಗೌಡ ಕೊಂಚ ನಿರಾಳವಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಅವರು ಕುಗ್ಗಿ ಹೋಗಿದ್ದರು. ಜೂನ್ 25ರಂದು ಪವಿತ್ರಾ ಗೌಡ ಭೇಟಿಗೆ ಅವರ ಮಗಳು ಖುಷಿ ಮೊದಲಾದವರು ಆಗಮಿಸಿದ್ದರು. ಸದ್ಯ ಪವಿತ್ರಾ ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಬ್ಯಾರಕ್​ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು

ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿದ್ದರು. ಮಗಳು ಖುಷಿ ಭೇಟಿ ಬಳಿಕ ಪವಿತ್ರಾ ಗೌಡ ಮನಸ್ಸು ಕೊಂಚ ಹಗುರವಾಗಿದೆ. ಜೈಲು ಸಿಬ್ಬಂದಿ ನೀಡಿದ್ದ ಮುದ್ದೆ, ಅನ್ನ, ಚಪಾತಿ, ಸಾಂಬರ್, ಮಜ್ಜಿಗೆ ಊಟ ಮಾಡಿ ಮಲಗಿದ್ದರು. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ನಿದ್ರೆಯಿಂದ ಪವಿತ್ರಾ ಎದ್ದಿದ್ದಾರೆ. ಬ್ಯಾರಕ್​ನಲ್ಲಿಯೇ ಕೆಲ ಹೊತ್ತು ವಾಕಿಂಗ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ