AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 11ಕ್ಕೆ ದರ್ಶನ್ ಮಧ್ಯಂತರ ಜಾಮೀನು ಅವಧಿ ಅಂತ್ಯ; ಮತ್ತೆ ಜೈಲು ಸೇರ್ತಾರಾ ಡಿ ಬಾಸ್?

ಇಂದು (ಡಿಸೆಂಬರ್ 9) ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಲಿದೆ. ಈ ವೇಳೆ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ಮಧ್ಯಂತರ ಜಾಮೀನು ಅವಧಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ. ದರ್ಶನ್ ಜಾಮೀನು ಅರ್ಜಿ ವಿರೋಧಿಸಿ SPP ಪ್ರಸನ್ನ ಕುಮಾರ್ ವಾದ ಮಂಡಿಸಲಿದ್ದಾರೆ.

ಡಿಸೆಂಬರ್ 11ಕ್ಕೆ ದರ್ಶನ್ ಮಧ್ಯಂತರ ಜಾಮೀನು ಅವಧಿ ಅಂತ್ಯ; ಮತ್ತೆ ಜೈಲು ಸೇರ್ತಾರಾ ಡಿ ಬಾಸ್?
ದರ್ಶನ್
Ramesha M
| Edited By: |

Updated on:Dec 09, 2024 | 10:36 AM

Share

ನಟ ದರ್ಶನ್ ಅವರು ಮಧ್ಯಂತರ ಜಾಮೀನು ಅರ್ಜಿ ಪಡೆದು ಒಂದೂವರೆ ತಿಂಗಳು ಕಳೆಯುತ್ತಾ ಬಂದಿದೆ. ಅವರ ಮಧ್ಯಂತರ ಜಾಮೀನು ಅವಧಿ ಡಿಸೆಂಬರ್ 11ರಂದು ಪೂರ್ಣಗೊಳ್ಳಲಿದೆ. ದರ್ಶನ್ ಅವರು ಶಸ್ತ್ರಚಿಕಿತ್ಸೆ ಮಾಡಿಸಲೆಂದೇ ಜಾಮೀನು ಪಡೆದವರು. ಆದರೆ, ಈವರೆಗೆ ಅದನ್ನು ಮಾಡಿಸಿಲ್ಲ. ಈ ಕಾರಣ ನೀಡಿ ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲು ಸರ್ಕಾರ ಪರ ವಕೀಲರು ಮನವಿ ಮಾಡಬಹುದು. ಹಾಗಾದಲ್ಲಿ, ಅವರು ಮತ್ತೆ ಬಳ್ಳಾರಿ ಜೈಲಿಗೆ ತೆರಳಬೇಕಾಗುತ್ತದೆ.

ಇಂದು (ಡಿಸೆಂಬರ್ 9) ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಲಿದೆ. ಈ ವೇಳೆ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ಮಧ್ಯಂತರ ಜಾಮೀನು ಅವಧಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ. ದರ್ಶನ್ ಜಾಮೀನು ಅರ್ಜಿ ವಿರೋಧಿಸಿ SPP ಪ್ರಸನ್ನ ಕುಮಾರ್ ವಾದ ಮಂಡಿಸಲಿದ್ದಾರೆ.

ಈಗಾಗಲೇ ಸರ್ಕಾರ ಪರ ವಕೀಲರಾದ ಪ್ರಸನ್ನ ಅವರು ವಾದ ಮಾಡುತ್ತಿದ್ದಾರೆ. ಇಂದು ಕೂಡ ಅವರು ತಮ್ಮ ವಾದಮಂಡನೆ ಮುಂದುವರಿಸಲಿದ್ದಾರೆ. ‘ಕೋರ್ಟ್ ದಿಕ್ಕು ತಪ್ಪಿಸಲು ಸರ್ಜರಿ ಕಾರಣ ನೀಡಿದ್ದಾರೆ. ಬಿಪಿ ಏರಿಳಿತ ಸರಿಪಡಿಸಲು ಎರಡೂಕಾಲು ರೂಪಾಯಿಯ ಮಾತ್ರೆ ಸಾಕು’ ಎಂದಿರುವ ಪ್ರಸನ್ನ ಕುಮಾರ್, ಸರ್ಜರಿ ಮುಂದೂಡಿಕೆಗೆ ಆಕ್ಷೇಪ ಹೊರಹಾಕಿದ್ದಾರೆ. ಅವರ ಜಾಮೀನು ಅರ್ಜಿ ವಜಾಕ್ಕೂ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ‘ಪೌಡರ್ ಹಾಕ್ಕೊಳಿ, ತಲೆ ಬಾಚ್ಕೊಳಿ’: ದರ್ಶನ್ ಪರ ವಕೀಲರ ತರಾಟೆಗೆ ತೆಗೆದುಕೊಂಡ ಎಸ್​ಪಿಪಿ

ರೇಣುಕಾಸ್ವಾಮಿಯ ಅಪಹರಣವೇ ಆಗಿಲ್ಲ ಎಂದು ಸಿವಿ ನಾಗೇಶ್ ಹೇಳಿದ್ದರು. ಆದರೆ, ಇದನ್ನು ಪ್ರಸನ್ನ ಕುಮಾರ್ ತಳ್ಳಿ ಹಾಕಿದ್ದಾರೆ. ರೇಣುಕಾ ಸ್ವಾಮಿಯನ್ನು ಮೋಸದಿಂದ ಅಪಹರಿಸಿದ್ದಾರೆಂದು ವಾದ ಮಾಡಿದ್ದಾರೆ. ‘ಅಶ್ಲೀಲ ಮೆಸೇಜ್ ಬಂದಾಗ ಬ್ಲಾಕ್ ಮಾಡಬಹುದಿತ್ತು. ಆದರೆ ಪವಿತ್ರಾಗೌಡ ಹೆಸರಲ್ಲಿ ಪವನ್ ಚಾಟ್ ಮಾಡಿದ್ದಾನೆ. ಪವಿತ್ರಾಗೌಡ ಸೂಚನೆ ಮೇರೆಗೆ ಹಿಂಬಾಲಿಸಿದ್ದಾರೆ. ಶೆಡ್​​ಗೆ ಕರೆತಂದು ಹಲ್ಲೆ ನಡೆಸಿದಾಗ ನಟ ದರ್ಶನ್ ಅಲ್ಲಿದ್ದರು. ದರ್ಶನ್ ಸೇರಿ ಆರೋಪಿಗಳು ಸ್ಥಳದಲ್ಲಿ ಇದ್ದಿದ್ದಕ್ಕೆ ತಾಂತ್ರಿಕ ಸಾಕ್ಷಿಗಳು ಇವೆ’ ಎಂದಿದ್ದಾರೆ ಪ್ರಸನ್ನ ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:35 am, Mon, 9 December 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್