AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 11ಕ್ಕೆ ದರ್ಶನ್ ಮಧ್ಯಂತರ ಜಾಮೀನು ಅವಧಿ ಅಂತ್ಯ; ಮತ್ತೆ ಜೈಲು ಸೇರ್ತಾರಾ ಡಿ ಬಾಸ್?

ಇಂದು (ಡಿಸೆಂಬರ್ 9) ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಲಿದೆ. ಈ ವೇಳೆ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ಮಧ್ಯಂತರ ಜಾಮೀನು ಅವಧಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ. ದರ್ಶನ್ ಜಾಮೀನು ಅರ್ಜಿ ವಿರೋಧಿಸಿ SPP ಪ್ರಸನ್ನ ಕುಮಾರ್ ವಾದ ಮಂಡಿಸಲಿದ್ದಾರೆ.

ಡಿಸೆಂಬರ್ 11ಕ್ಕೆ ದರ್ಶನ್ ಮಧ್ಯಂತರ ಜಾಮೀನು ಅವಧಿ ಅಂತ್ಯ; ಮತ್ತೆ ಜೈಲು ಸೇರ್ತಾರಾ ಡಿ ಬಾಸ್?
ದರ್ಶನ್
Ramesha M
| Edited By: |

Updated on:Dec 09, 2024 | 10:36 AM

Share

ನಟ ದರ್ಶನ್ ಅವರು ಮಧ್ಯಂತರ ಜಾಮೀನು ಅರ್ಜಿ ಪಡೆದು ಒಂದೂವರೆ ತಿಂಗಳು ಕಳೆಯುತ್ತಾ ಬಂದಿದೆ. ಅವರ ಮಧ್ಯಂತರ ಜಾಮೀನು ಅವಧಿ ಡಿಸೆಂಬರ್ 11ರಂದು ಪೂರ್ಣಗೊಳ್ಳಲಿದೆ. ದರ್ಶನ್ ಅವರು ಶಸ್ತ್ರಚಿಕಿತ್ಸೆ ಮಾಡಿಸಲೆಂದೇ ಜಾಮೀನು ಪಡೆದವರು. ಆದರೆ, ಈವರೆಗೆ ಅದನ್ನು ಮಾಡಿಸಿಲ್ಲ. ಈ ಕಾರಣ ನೀಡಿ ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲು ಸರ್ಕಾರ ಪರ ವಕೀಲರು ಮನವಿ ಮಾಡಬಹುದು. ಹಾಗಾದಲ್ಲಿ, ಅವರು ಮತ್ತೆ ಬಳ್ಳಾರಿ ಜೈಲಿಗೆ ತೆರಳಬೇಕಾಗುತ್ತದೆ.

ಇಂದು (ಡಿಸೆಂಬರ್ 9) ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಲಿದೆ. ಈ ವೇಳೆ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ಮಧ್ಯಂತರ ಜಾಮೀನು ಅವಧಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ. ದರ್ಶನ್ ಜಾಮೀನು ಅರ್ಜಿ ವಿರೋಧಿಸಿ SPP ಪ್ರಸನ್ನ ಕುಮಾರ್ ವಾದ ಮಂಡಿಸಲಿದ್ದಾರೆ.

ಈಗಾಗಲೇ ಸರ್ಕಾರ ಪರ ವಕೀಲರಾದ ಪ್ರಸನ್ನ ಅವರು ವಾದ ಮಾಡುತ್ತಿದ್ದಾರೆ. ಇಂದು ಕೂಡ ಅವರು ತಮ್ಮ ವಾದಮಂಡನೆ ಮುಂದುವರಿಸಲಿದ್ದಾರೆ. ‘ಕೋರ್ಟ್ ದಿಕ್ಕು ತಪ್ಪಿಸಲು ಸರ್ಜರಿ ಕಾರಣ ನೀಡಿದ್ದಾರೆ. ಬಿಪಿ ಏರಿಳಿತ ಸರಿಪಡಿಸಲು ಎರಡೂಕಾಲು ರೂಪಾಯಿಯ ಮಾತ್ರೆ ಸಾಕು’ ಎಂದಿರುವ ಪ್ರಸನ್ನ ಕುಮಾರ್, ಸರ್ಜರಿ ಮುಂದೂಡಿಕೆಗೆ ಆಕ್ಷೇಪ ಹೊರಹಾಕಿದ್ದಾರೆ. ಅವರ ಜಾಮೀನು ಅರ್ಜಿ ವಜಾಕ್ಕೂ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ‘ಪೌಡರ್ ಹಾಕ್ಕೊಳಿ, ತಲೆ ಬಾಚ್ಕೊಳಿ’: ದರ್ಶನ್ ಪರ ವಕೀಲರ ತರಾಟೆಗೆ ತೆಗೆದುಕೊಂಡ ಎಸ್​ಪಿಪಿ

ರೇಣುಕಾಸ್ವಾಮಿಯ ಅಪಹರಣವೇ ಆಗಿಲ್ಲ ಎಂದು ಸಿವಿ ನಾಗೇಶ್ ಹೇಳಿದ್ದರು. ಆದರೆ, ಇದನ್ನು ಪ್ರಸನ್ನ ಕುಮಾರ್ ತಳ್ಳಿ ಹಾಕಿದ್ದಾರೆ. ರೇಣುಕಾ ಸ್ವಾಮಿಯನ್ನು ಮೋಸದಿಂದ ಅಪಹರಿಸಿದ್ದಾರೆಂದು ವಾದ ಮಾಡಿದ್ದಾರೆ. ‘ಅಶ್ಲೀಲ ಮೆಸೇಜ್ ಬಂದಾಗ ಬ್ಲಾಕ್ ಮಾಡಬಹುದಿತ್ತು. ಆದರೆ ಪವಿತ್ರಾಗೌಡ ಹೆಸರಲ್ಲಿ ಪವನ್ ಚಾಟ್ ಮಾಡಿದ್ದಾನೆ. ಪವಿತ್ರಾಗೌಡ ಸೂಚನೆ ಮೇರೆಗೆ ಹಿಂಬಾಲಿಸಿದ್ದಾರೆ. ಶೆಡ್​​ಗೆ ಕರೆತಂದು ಹಲ್ಲೆ ನಡೆಸಿದಾಗ ನಟ ದರ್ಶನ್ ಅಲ್ಲಿದ್ದರು. ದರ್ಶನ್ ಸೇರಿ ಆರೋಪಿಗಳು ಸ್ಥಳದಲ್ಲಿ ಇದ್ದಿದ್ದಕ್ಕೆ ತಾಂತ್ರಿಕ ಸಾಕ್ಷಿಗಳು ಇವೆ’ ಎಂದಿದ್ದಾರೆ ಪ್ರಸನ್ನ ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:35 am, Mon, 9 December 24

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ