Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ಯತಾಗೆ ಪ್ರಪೋಸ್ ಮಾಡೋ ವಿಡಿಯೋ ಹಂಚಿಕೊಂಡ ಡಾಲಿ ಧನಂಜಯ್

ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಈ ಜೋಡಿ ತಮ್ಮ ನಿಶ್ಚಿತಾರ್ಥದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕನ್ನಡ ಚಿತ್ರರಂಗದ ಹಾಗೂ ದಕ್ಷಿಣ ಭಾರತದ ಹಲವು ಗಣ್ಯರು ಈ ಮದುವೆಗೆ ಆಗಮಿಸುತ್ತಿದ್ದಾರೆ. ಧನಂಜಯ್ ಅವರ ಬ್ಯಾಚುಲರ್ ಜೀವನದಿಂದ ದಾಂಪತ್ಯ ಜೀವನಕ್ಕೆ ಪರಿವರ್ತನೆಯನ್ನು ತೋರಿಸುವ ವಿಡಿಯೋ ಸಾಕಷ್ಟು ಜನರ ಗಮನ ಸೆಳೆದಿದೆ.

ಧನ್ಯತಾಗೆ ಪ್ರಪೋಸ್ ಮಾಡೋ ವಿಡಿಯೋ ಹಂಚಿಕೊಂಡ ಡಾಲಿ ಧನಂಜಯ್
ಧನ್ಯತಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 09, 2025 | 6:30 AM

ಡಾಲಿ ಧನಂಜಯ್ ಅವರು ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಇದಕ್ಕಾಗಿ ವೇದಿಕೆ ಕೂಡ ಸಿದ್ಧವಾಗಿದೆ. ಮೈಸೂರಿನಲ್ಲಿ ಫೆಬ್ರವರಿ 16ರಂದು ಧನಂಜಯ್ ಅವರು ಮದುವೆ ಆಗುತ್ತಿದ್ದಾರೆ. ಧನ್ಯತಾ ಅವರು ವೃತ್ತಿಯಲ್ಲಿ ವೈದ್ಯೆ. ಧನಂಜಯ್ ಬಾಳಲ್ಲಿ ಡಾಕ್ಟರ್ ಆಗಮನ ಆಗಿರೋದು ಫ್ಯಾನ್ಸ್​ಗೆ ಖುಷಿ ಕೊಟ್ಟಿದೆ. ಧನಂಜಯ್ ಅಭಿಮಾನಿಗಳಿಗೆ ಆಮಂತ್ರಣ ನೀಡುತ್ತಿರುವ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಧನ್ಯತಾಗೆ ಉಂಗುರ ಕೂಡ ಹಾಕಿದ್ದಾರೆ.

ಧನಂಜಯ್ ಅವರು ಇಷ್ಟು ವರ್ಷ ಬ್ಯಾಚಲುರ್ ಆಗಿದ್ದರು. ಈಗ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಬಗ್ಗೆ ಧನ್ಯತಾ ಹಾಗೂ ಧನಂಜಯ್ ಅವರು ಇತ್ತೀಚೆಗೆ ಸುದ್ದಿಗೋಷ್ಠಿ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಧನಂಜಯ್ ವಿವಾಹ ಆಗುತ್ತಿದ್ದಾರೆ. ಈ ಮದುವೆಗೆ ಅನೇಕ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈಗ ಅವರು ಒಂದು ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಡಾಲಿ ಹಳೆಯ ಲವ್​ಸ್ಟೋರಿ ಕೇಳಿ ಧನ್ಯತಾ ರಿಯಾಕ್ಷನ್ ಹೇಗಿತ್ತು? ವಿವರಿಸಿದ ಧನಂಜಯ್

ಧನಂಜಯ್ ಅವರು ಇಷ್ಟು ದಿನ ಬ್ಯಾಚುಲರ್ ಆಗಿದ್ದರು. ಈಗ ಹಂಚಿಕೊಂಡಿರೋ ವಿಡಿಯೋದಲ್ಲಿ ಇದನ್ನು ತೋರಿಸಲಾಗಿದೆ. ಧನಂಜಯ್ ಆಪ್ತ ನಾಗಭೂಷಣ್ ಧ್ವನಿಯಲ್ಲಿ ವಿಡಿಯೋ ಮೂಡಿ ಬಂದಿದೆ. ಧನಂಜಯ್ ಬ್ಯಾಚುಲರ್ ಜೀವನ ಹೇಗಿತ್ತು ಎಂಬುದನ್ನು ವಿವರಿಸಿ, ನಂತರ ಅವರ ಬಾಳಲ್ಲಿ ಧನ್ಯತಾ ಎಂಟ್ರಿ ಕೊಟ್ಟರು ಎಂಬ ರೀತಿಯಲ್ಲಿ ತೋರಿಸಲಾಗಿದೆ. ಆ ಬಳಿಕ ಧನಂಜಯ್ ಅವರು ಜೀವನದಲ್ಲಿ ಸಂಗಾತಿ ಇದ್ದೇ ಇದೆ ಎಂದು ವಾದಿಸುತ್ತಾರೆ. ಇದರ ಜೊತೆಗೆ ಧನ್ಯತಾಗೆ ಉಂಗುರ ಹಾಕಿ ಗಮನ ಸೆಳೆಯುತ್ತಾರೆ.

ಡಾಲಿ ಧನಂಜಯ್ ಅವರು ಚಿತ್ರರಂಗದಲ್ಲಿ ಇರುವಾಗ ಧನ್ಯತಾ ಅವರು ಒಮ್ಮೆ ಅಭಿಮಾನಿಯಾಗಿ ಭೇಟಿ ಮಾಡಿದ್ದರು. ಆ ಬಳಿಕ ಧನಂಜಯ್ ಅವರನ್ನು ಇನ್​ಸ್ಟಾಗ್ರಾಮ್ ಮೂಲಕ ಸಂಪರ್ಕಿಸಿದರು ಧನ್ಯತಾ. ಸಿನಿಮಾ ಹಿಟ್ ಆದಾಗ ಅವರು ವಿಶ್ ಮಾಡುತ್ತಿದ್ದರಂತೆ. ಆ ಬಳಿಕ ಇಬ್ಬರೂ ಭೇಟಿ ಮಾಡಿ ಸುತ್ತಾಟ ನಡೆಸಿದರು. ಈಗ ಇವರು ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಈ ವಿವಾಹಕ್ಕೆ ಕನ್ನಡ ಚಿತ್ರರಂಗದವರಿಗೆ ಮಾತ್ರ ಅಲ್ಲದೆ, ‘ಪುಷ್ಪ 2’ ಚಿತ್ರದ ನಟ ಅಲ್ಲು ಅರ್ಜುನ್, ನಟಿ ರಶ್ಮಿಕಾ ಮಂದಣ್ಣ, ನಿರ್ದೇಶಕ ಸುಕುಮಾರ್​ ಅವರಿಗೂ ಆಹ್ವಾನ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್