AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಒಂದು ವಿಚಾರದಲ್ಲಿ ಮಾಜಿ ಪತಿ ಧನುಷ್​ಗೆ ಸಂಪೂರ್ಣ ಕ್ರೆಡಿಟ್ ಕೊಟ್ಟ ಐಶ್ವರ್ಯಾ ರಜನಿಕಾಂತ್

‘ವೈ ದಿಸ್ ಕೊಲವೆರಿ’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡು ಅಂದಿನಕಾಲದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ನಂತರ ಧನುಷ್ ಹಾಗೂ ಅನಿರುದ್ಧ್ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದರು. ನಂತರ ಏಳು ವರ್ಷ ಇಬ್ಬರೂ ಒಂದಾಗಿರಲಿಲ್ಲ. 2022ರಲ್ಲಿ ಸೇರಿ ಮತ್ತೆ ಒಟ್ಟಾಗಿ ಕೆಲಸ ಮಾಡಿದರು.

ಆ ಒಂದು ವಿಚಾರದಲ್ಲಿ ಮಾಜಿ ಪತಿ ಧನುಷ್​ಗೆ ಸಂಪೂರ್ಣ ಕ್ರೆಡಿಟ್ ಕೊಟ್ಟ ಐಶ್ವರ್ಯಾ ರಜನಿಕಾಂತ್
ಐಶ್ವರ್ಯಾ-ಧನುಷ್
ರಾಜೇಶ್ ದುಗ್ಗುಮನೆ
|

Updated on:Mar 14, 2024 | 7:52 AM

Share

ಐಶ್ವರ್ಯಾ ರಜನಿಕಾಂತ್ ಹಾಗೂ ಧನುಷ್ (Danush) ವಿಚ್ಛೇದನ ಪಡೆದು ಬಹಳ ಸಮಯ ಕಳೆದಿದೆ. ಇವರು ಬೇರೆ ಆಗಬಹುದು ಎಂದು ಯಾರೂ ಊಹಿಸಿರಲಿಲ್ಲ. ವಿಚ್ಛೇದನದ ಬಳಿಕ ಒಬ್ಬರ ಮುಖವನ್ನು ಒಬ್ಬರು ನೋಡಿಕೊಂಡಿಲ್ಲ. ಈಗ ಅವರು ಮಾಜಿ ಪತಿ ಬಗ್ಗೆ ಮಾತನಾಡಿದ್ದಾರೆ. ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್​ ಅವರನ್ನು ಪರಿಚಯಿಸಿದ ಸಂಪೂರ್ಣ ಕ್ರೆಡಿಟ್​ನ ಅವರು ಧನುಷ್​ಗೆ ನೀಡಿದ್ದಾರೆ. ಅನಿರುದ್ಧ್​, ಧನುಷ್ ಹಾಗೂ ಐಶ್ವರ್ಯಾ ‘3’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು.

ಅನಿರುದ್ಧ ಅವರ ಯಶಸ್ಸಿನ ಜರ್ನಿ ಬಗ್ಗೆ ಐಶ್ವರ್ಯಾ ಮಾತನಾಡಿದ್ದಾರೆ. ‘ನನಗೆ ಅವರ ಬಗ್ಗೆ ಬಹಳ ಖುಷಿ ಇದೆ. ಆದರೆ, ಅವರನ್ನು ಮ್ಯೂಸಿಕ್ ಡೈರೆಕ್ಟರ್​ ಆಗಿ ಮಾಡಿದ್ದರಲ್ಲಿ ನನ್ನ ಕೊಡುಗೆ ಏನೂ ಇಲ್ಲ. ಧನುಷ್ ಅವರಿಂದ ಅನಿರುದ್ಧ್ ಸಿನಿಮಾ ಜಗತ್ತಿಗೆ ಕಾಲಿಟ್ಟರು. ಅನಿರುದ್ಧ್​ ಪಾಲಕರು ಅನಿರುದ್ಧ್​​ನ ಸಿಂಗಾಪೂರ್​ಗೆ ಕಳುಹಿಸಿ ಎಂಬಿಎ ಓದಿಸುವವರಿದ್ದರು. ಆದರೆ, ಇದಕ್ಕೆ ಧನುಷ್ ಅವಕಾಶ ನೀಡಲಿಲ್ಲ. ಅವರ ಕುಟುಂಬದವರಿಗೆ ಅನಿರುದ್ಧ್​ ಕಲೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಅವರಿಗೆ ಕೀಬೋರ್ಡ್ ಖರೀದಿಸಿಕೊಟ್ಟರು. ಈ ಮೂಲಕ ಅವರನ್ನು ಕಂಪೋಸರ್ ಆಗಿ ಮಾಡಿದರು. ಧನುಷ್ ಅವರ ಸಹಾಯ ಹಾಗೂ ತಮ್ಮ ಪರಿಶ್ರಮದಿಂದ ಅನಿರುದ್ಧ್ ಇಲ್ಲಿಯವರೆಗೆ ಬಂದಿದ್ದಾರೆ’ ಎಂದಿದ್ದಾರೆ ಐಶ್ವರ್ಯಾ.

‘ವೈ ದಿಸ್ ಕೊಲವೆರಿ’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡು ಅಂದಿನಕಾಲದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ನಂತರ ಧನುಷ್ ಹಾಗೂ ಅನಿರುದ್ಧ್ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದರು. ನಂತರ ಏಳು ವರ್ಷ ಇಬ್ಬರೂ ಒಂದಾಗಿರಲಿಲ್ಲ. ‘ತಿರುಚಿತ್ರಂಬಳಂ’ ಸಿನಿಮಾದಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದರು. ಇದು ಸೂಪರ್ ಹಿಟ್ ಆಯಿತು.

ಇದನ್ನೂ ಓದಿ: ಆ ಒಂದು ವಿಚಾರದಲ್ಲಿ ಮಾಜಿ ಪತಿ ಧನುಷ್​ಗೆ ಸಂಪೂರ್ಣ ಕ್ರೆಡಿಟ್ ಕೊಟ್ಟ ಐಶ್ವರ್ಯಾ ರಜನಿಕಾಂತ್

ಅನಿರುದ್ಧ್​ ಅವರು ‘ಜೈಲರ್’, ‘ಜವಾನ್’ ಅಂಥ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಅವರ ಖ್ಯಾತಿ ಹೆಚ್ಚಿದೆ. ಸದ್ಯ ರಜನಿಕಾಂತ್ ನಟನೆಯ ‘ವೆಟ್ಟೈಯನ್’, ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’, ಜೂನಿಯರ್ ಎನ್​ಟಿಆರ್ ಅಭಿನಯದ ‘ದೇವರ’ ಮೊದಲಾದ ಬಿಗ್ ಬಜೆಟ್ ಚಿತ್ರಗಳಿಗೆ ಅವರು ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Thu, 14 March 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!