AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್​ ಮುಂದಿನ ಚಿತ್ರ ಘೋಷಣೆ; ಟಾಲಿವುಡ್​ಗೆ ಕಾಲಿಡೋಕೆ ಮುಂದಾದ ತಮಿಳಿನ ಸ್ಟಾರ್​ ನಟ

ತಮಿಳು ಹಾಗೂ ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ತಮಿಳಿನಲ್ಲಿ ‘ವಾತಿ’ ಹಾಗೂ ತೆಲುಗಿನಲ್ಲಿ ‘ಸರ್’ ಎಂದು ಹೆಸರಿಡಲಾಗಿದೆ. ಪೋಸ್ಟರ್​ಗಳನ್ನು ಹಂಚಿಕೊಳ್ಳುವ ಮೂಲಕ ಧನುಷ್​ ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ.

ಧನುಷ್​ ಮುಂದಿನ ಚಿತ್ರ ಘೋಷಣೆ; ಟಾಲಿವುಡ್​ಗೆ ಕಾಲಿಡೋಕೆ ಮುಂದಾದ ತಮಿಳಿನ ಸ್ಟಾರ್​ ನಟ
TV9 Web
| Edited By: |

Updated on: Dec 23, 2021 | 4:02 PM

Share

ಧನುಷ್​ (Actor Dhanush) ಈಗಾಗಲೇ ತಮಿಳು, ಇಂಗ್ಲಿಷ್, ಮಲಯಾಳಂ​ ಸಿನಿಮಾಗಳಲ್ಲಿ ನಟಿಸಿ ಭೇಷ್​ ಎನಿಸಿಕೊಂಡಿದ್ದಾರೆ. ‘ಅತ್ರಂಗಿ ರೇ’ ಸಿನಿಮಾ ಮೂಲಕ ಅವರು ಮತ್ತೆ ಬಾಲಿವುಡ್​ಗೆ ಮರಳುತ್ತಿದ್ದಾರೆ. ಇದಲ್ಲದೆ, ಹಲವು ಸಿನಿಮಾಗಳು ಅವರ ಕೈಯಲ್ಲಿವೆ. ಈಗ ಧನುಷ್​ ತೆಲುಗು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಚಿತ್ರದ ಟೈಟಲ್​ ಇಂದು ಘೋಷಣೆ ಆಗಿದೆ. ಈ ಮೂಲಕ ಅವರ ಮುಂದಿನ ಚಿತ್ರ ಯಾವುದು ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ.

ತಮಿಳು ಹಾಗೂ ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ತಮಿಳಿನಲ್ಲಿ ‘ವಾತಿ’ ಹಾಗೂ ತೆಲುಗಿನಲ್ಲಿ ‘ಸರ್’ ಎಂದು ಹೆಸರಿಡಲಾಗಿದೆ. ಪೋಸ್ಟರ್​ಗಳನ್ನು ಹಂಚಿಕೊಳ್ಳುವ ಮೂಲಕ ಧನುಷ್​ ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಅವರಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳ ಕಡೆಯಿಂದ ಶುಭಾಶಯಗಳು ಬಂದಿವೆ. ​

ಸಿತಾರಾ ಎಂಟರ್​ಟೇನ್​ಮೆಂಟ್​​ನ​ ಸೂರ್ಯದೇವ ನಾಗ ವಂಶಿ ಹಾಗೂ ಫಾರ್ಚೂನ್ ಫೋರ್​ ಸಿನೇಮಾಸ್​​ನ ಸಾಯಿ ಸೌಜನ್ಯ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ರಂಗ್​ ದೇ’ ಖ್ಯಾತಿಯ ವೆಂಕಿ ಅಟ್ಲುರಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಸಾಮಾನ್ಯ ವ್ಯಕ್ತಿಯ ಮಹತ್ವಾಕಾಂಕ್ಷೆಯ ಮತ್ತು ಹೃದಯಕ್ಕೆ ಹತ್ತಿರ ಆಗುವಂತಹ ಪ್ರಯಾಣ’ ಎಂದು ನಾಗ ವಂಶಿ ಬರೆದುಕೊಂಡಿದ್ದಾರೆ.

ಜ್ಯೂನಿಯರ್​ ಕಾಲೇಜ್​ನ ಉಪನ್ಯಾಸಕರಾಗಿ ಧನುಷ್​ ಕಾಣಿಸಿಕೊಳ್ಳುತ್ತಿದ್ದಾರೆ. ಸಂಯುಕ್ತಾ ಮೆನನ್​ ಅವರು ಈ ಸಿನಿಮಾದಲ್ಲಿ ಧನುಷ್​ಗೆ ಜತೆಯಾಗಿ ಕಾಣಸಿಕೊಳ್ಳುತ್ತಿದ್ದಾರೆ. ಸಾಯಿ ಕುಮಾರ್​ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜಿವಿ ಪ್ರಕಾಶ್​ ಕುಮಾರ್​ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ದಿನೇಶ್​ ಕೃಷ್ಣನ್​ ಛಾಯಾಗ್ರಾಹಣ ಚಿತ್ರಕ್ಕಿದೆ. ಜನವರಿಯಲ್ಲಿ ಸಿನಿಮಾದ ಶೂಟಿಂಗ್​ ಆರಂಭವಾಗಲಿದೆ.

ಧನುಷ್ ​ ‘ಅತರಂಗಿ ರೇ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್​ನಲ್ಲಿ ಧನುಷ್ ಪರ್ಫಾರ್ಮೆನ್ಸ್​ ನೋಡಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಅಕ್ಷಯ್​ ಕುಮಾರ್​, ಸಾರಾ ಅಲಿ ಖಾನ್​ ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಆನಂದ್​ ಎಲ್​. ರಾಯ್​ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಕ್ರಿಸ್​ಮಸ್​ ಪ್ರಯುಕ್ತ ಈ ಚಿತ್ರ ಡಿಸೆಂಬರ್ 24ರಂದು ರಿಲೀಸ್​ ಆಗುತ್ತಿದೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತಂಡ ಬ್ಯುಸಿ ಆಗಿದೆ.

ಇದನ್ನೂ ಓದಿ: ಒಟಿಟಿಯಲ್ಲೂ ಸ್ಟಾರ್​ ವಾರ್​; ಅಕ್ಷಯ್​ ಕುಮಾರ್​ ಮತ್ತು ಸಲ್ಮಾನ್​ ಖಾನ್​ ಚಿತ್ರಗಳ ಮುಖಾಮುಖಿ​

ಕತ್ರಿನಾ ಕೈಫ್​ ಮದುವೆ ವಿಚಾರದಲ್ಲಿ ಜೋಕ್​ ಮಾಡಿದ ಅಕ್ಷಯ್​ ಕುಮಾರ್​

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು