AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್​ ಮುಂದಿನ ಚಿತ್ರ ಘೋಷಣೆ; ಟಾಲಿವುಡ್​ಗೆ ಕಾಲಿಡೋಕೆ ಮುಂದಾದ ತಮಿಳಿನ ಸ್ಟಾರ್​ ನಟ

ತಮಿಳು ಹಾಗೂ ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ತಮಿಳಿನಲ್ಲಿ ‘ವಾತಿ’ ಹಾಗೂ ತೆಲುಗಿನಲ್ಲಿ ‘ಸರ್’ ಎಂದು ಹೆಸರಿಡಲಾಗಿದೆ. ಪೋಸ್ಟರ್​ಗಳನ್ನು ಹಂಚಿಕೊಳ್ಳುವ ಮೂಲಕ ಧನುಷ್​ ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ.

ಧನುಷ್​ ಮುಂದಿನ ಚಿತ್ರ ಘೋಷಣೆ; ಟಾಲಿವುಡ್​ಗೆ ಕಾಲಿಡೋಕೆ ಮುಂದಾದ ತಮಿಳಿನ ಸ್ಟಾರ್​ ನಟ
TV9 Web
| Edited By: |

Updated on: Dec 23, 2021 | 4:02 PM

Share

ಧನುಷ್​ (Actor Dhanush) ಈಗಾಗಲೇ ತಮಿಳು, ಇಂಗ್ಲಿಷ್, ಮಲಯಾಳಂ​ ಸಿನಿಮಾಗಳಲ್ಲಿ ನಟಿಸಿ ಭೇಷ್​ ಎನಿಸಿಕೊಂಡಿದ್ದಾರೆ. ‘ಅತ್ರಂಗಿ ರೇ’ ಸಿನಿಮಾ ಮೂಲಕ ಅವರು ಮತ್ತೆ ಬಾಲಿವುಡ್​ಗೆ ಮರಳುತ್ತಿದ್ದಾರೆ. ಇದಲ್ಲದೆ, ಹಲವು ಸಿನಿಮಾಗಳು ಅವರ ಕೈಯಲ್ಲಿವೆ. ಈಗ ಧನುಷ್​ ತೆಲುಗು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಚಿತ್ರದ ಟೈಟಲ್​ ಇಂದು ಘೋಷಣೆ ಆಗಿದೆ. ಈ ಮೂಲಕ ಅವರ ಮುಂದಿನ ಚಿತ್ರ ಯಾವುದು ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ.

ತಮಿಳು ಹಾಗೂ ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ತಮಿಳಿನಲ್ಲಿ ‘ವಾತಿ’ ಹಾಗೂ ತೆಲುಗಿನಲ್ಲಿ ‘ಸರ್’ ಎಂದು ಹೆಸರಿಡಲಾಗಿದೆ. ಪೋಸ್ಟರ್​ಗಳನ್ನು ಹಂಚಿಕೊಳ್ಳುವ ಮೂಲಕ ಧನುಷ್​ ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಅವರಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳ ಕಡೆಯಿಂದ ಶುಭಾಶಯಗಳು ಬಂದಿವೆ. ​

ಸಿತಾರಾ ಎಂಟರ್​ಟೇನ್​ಮೆಂಟ್​​ನ​ ಸೂರ್ಯದೇವ ನಾಗ ವಂಶಿ ಹಾಗೂ ಫಾರ್ಚೂನ್ ಫೋರ್​ ಸಿನೇಮಾಸ್​​ನ ಸಾಯಿ ಸೌಜನ್ಯ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ರಂಗ್​ ದೇ’ ಖ್ಯಾತಿಯ ವೆಂಕಿ ಅಟ್ಲುರಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಸಾಮಾನ್ಯ ವ್ಯಕ್ತಿಯ ಮಹತ್ವಾಕಾಂಕ್ಷೆಯ ಮತ್ತು ಹೃದಯಕ್ಕೆ ಹತ್ತಿರ ಆಗುವಂತಹ ಪ್ರಯಾಣ’ ಎಂದು ನಾಗ ವಂಶಿ ಬರೆದುಕೊಂಡಿದ್ದಾರೆ.

ಜ್ಯೂನಿಯರ್​ ಕಾಲೇಜ್​ನ ಉಪನ್ಯಾಸಕರಾಗಿ ಧನುಷ್​ ಕಾಣಿಸಿಕೊಳ್ಳುತ್ತಿದ್ದಾರೆ. ಸಂಯುಕ್ತಾ ಮೆನನ್​ ಅವರು ಈ ಸಿನಿಮಾದಲ್ಲಿ ಧನುಷ್​ಗೆ ಜತೆಯಾಗಿ ಕಾಣಸಿಕೊಳ್ಳುತ್ತಿದ್ದಾರೆ. ಸಾಯಿ ಕುಮಾರ್​ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜಿವಿ ಪ್ರಕಾಶ್​ ಕುಮಾರ್​ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ದಿನೇಶ್​ ಕೃಷ್ಣನ್​ ಛಾಯಾಗ್ರಾಹಣ ಚಿತ್ರಕ್ಕಿದೆ. ಜನವರಿಯಲ್ಲಿ ಸಿನಿಮಾದ ಶೂಟಿಂಗ್​ ಆರಂಭವಾಗಲಿದೆ.

ಧನುಷ್ ​ ‘ಅತರಂಗಿ ರೇ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್​ನಲ್ಲಿ ಧನುಷ್ ಪರ್ಫಾರ್ಮೆನ್ಸ್​ ನೋಡಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಅಕ್ಷಯ್​ ಕುಮಾರ್​, ಸಾರಾ ಅಲಿ ಖಾನ್​ ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಆನಂದ್​ ಎಲ್​. ರಾಯ್​ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಕ್ರಿಸ್​ಮಸ್​ ಪ್ರಯುಕ್ತ ಈ ಚಿತ್ರ ಡಿಸೆಂಬರ್ 24ರಂದು ರಿಲೀಸ್​ ಆಗುತ್ತಿದೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತಂಡ ಬ್ಯುಸಿ ಆಗಿದೆ.

ಇದನ್ನೂ ಓದಿ: ಒಟಿಟಿಯಲ್ಲೂ ಸ್ಟಾರ್​ ವಾರ್​; ಅಕ್ಷಯ್​ ಕುಮಾರ್​ ಮತ್ತು ಸಲ್ಮಾನ್​ ಖಾನ್​ ಚಿತ್ರಗಳ ಮುಖಾಮುಖಿ​

ಕತ್ರಿನಾ ಕೈಫ್​ ಮದುವೆ ವಿಚಾರದಲ್ಲಿ ಜೋಕ್​ ಮಾಡಿದ ಅಕ್ಷಯ್​ ಕುಮಾರ್​

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್