AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಧ್ರುವ ಸರ್ಜಾರಿಂದ ಉಧೋ ಉಧೋ ಹುಲಿಗೆಮ್ಮ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ

ಉಧೋ ಉಧೋ ಹುಲಗೆಮ್ಮ ಎಂಬ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಹುಲಗೆಮ್ಮನ ಸನ್ನಿಧಾನದಲ್ಲಿಯೇ ನಟ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಈ ವೇಳೆ ಕೆ.ಮಂಜು, ನಾಯಕ ನಟ ಶ್ರೇಯಸ್, ನಿರ್ದೇಶಕ ನಂದಕಿಶೋರ್ ಉಪಸ್ಥಿತರಿದ್ದರು. ವಿಡಿಯೋ ಸಾಂಗ್ ಬಿಡುಗಡೆಗೂ ಮುನ್ನ ಧ್ರುವ ಸರ್ಜಾ ಹುಲಗೆಮ್ಮ ದೇವಿಯ ದರ್ಶನ ಪಡೆದಿದ್ದಾರೆ.

ನಟ ಧ್ರುವ ಸರ್ಜಾರಿಂದ ಉಧೋ ಉಧೋ ಹುಲಿಗೆಮ್ಮ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
TV9 Web
| Edited By: |

Updated on: Dec 15, 2021 | 12:45 PM

Share

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನ ಐತಿಹಾಸಿಕ ಕ್ಷೇತ್ರ. ಇಲ್ಲಿಗೆ ರಾಜ್ಯದ ನಾನಾ ಭಾಗದಿಂದ ಭಕ್ತರು ಬರುತ್ತಾರೆ. ಅಷ್ಟೇ ಅಲ್ಲದೇ ಸಿನಿಮಾ ಮಂದಿಗೂ ಹುಲಿಗೆಮ್ಮನ ಸನ್ನಿಧಾನ ಅಚ್ಚು ಮೆಚ್ಚು. ಇದೀಗ ಈ ಸನ್ನಿಧಾನದಲ್ಲಿ ಇದೇ ದೇವಿಯ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಆಗಿದೆ. ಈ ವಿಡಿಯೋ ಸಾಂಗ್ ಬಿಡುಗಡೆ ಮಾಡಿದ್ದು, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ( Dhruva Sarja). ಕೊಪ್ಪಳ ತಾಲೂಕಿನ ಹುಲಗಿಯ ಹುಲಿಗೆಮ್ಮ ದೇವಸ್ಥಾನದಲ್ಲಿ ನಿನ್ನೆ (ಡಿಸೆಂಬರ್ 15) ಎಲ್ಲಿ ನೋಡಿದರಲ್ಲಿ ಜನವೋ ಜನ. ಇದಕ್ಕೆಲ್ಲ ಕಾರಣ ರಾಣಾ ಸಿನಿಮಾ. ನಂದಕಿಶೋರ್ ನಿರ್ದೇಶನ ಹಾಗೂ ಕೆ.ಮಂಜು ಪುತ್ರ ಶ್ರೇಯಸ್ ಅಭಿನಯದ ರಾಣಾ ಚಿತ್ರದ ಲಿರಿಕಲ್ ವಿಡಿಯೋ ನಿನ್ನೆ ಹುಲಗಿಯಲ್ಲಿ ಬಿಡುಗಡೆ ಮಾಡಲಾಯಿತು.

ಉಧೋ ಉಧೋ ಹುಲಿಗೆಮ್ಮ ಎಂಬ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಹುಲಿಗೆಮ್ಮನ ಸನ್ನಿಧಾನದಲ್ಲಿಯೇ ನಟ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಈ ವೇಳೆ ಕೆ.ಮಂಜು, ನಾಯಕ ನಟ ಶ್ರೇಯಸ್, ನಿರ್ದೇಶಕ ನಂದಕಿಶೋರ್ ಉಪಸ್ಥಿತರಿದ್ದರು. ವಿಡಿಯೋ ಸಾಂಗ್ ಬಿಡುಗಡೆಗೂ ಮುನ್ನ ಧ್ರುವ ಸರ್ಜಾ ಹುಲಿಗೆಮ್ಮ ದೇವಿಯ ದರ್ಶನ ಪಡೆದಿದ್ದಾರೆ.

ಹುಲಿಗೆಮ್ಮನ ಮೇಲೆ ಇರುವ ಹಾಡನ್ನು ತಾಯಿ ಸನ್ನಿಧಾನದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರದ ನಿರ್ಮಾಪಕ ಪುರಷೋತ್ತಮ ಗುಜ್ಜಲ್ ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದರು. ಲಿರಿಕಲ್ ವಿಡಿಯೋ ಬಿಡುಗಡೆ ಮಾಡುವ‌ ಮೊದಲು ಅಗಲಿದ ಪುನೀತ್ ರಾಜ್​ಕುಮಾರ್​ ಅವರಿಗೆ ಚಿತ್ರ ತಂಡ ಮೌನಾಚಾರಣೆ ಮೂಲಕ ನಮನ ಸಲ್ಲಿಸಿತು.

ಇನ್ನು ಧ್ರುವ ಸರ್ಜಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ನೆಚ್ಚಿನ ನಾಯಕ ನಟನನ್ನು ನೋಡುವುದಕ್ಕೆ ಬಂದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ಕೂಡಾ ತೋರಸಿದರು. ಕೊನೆಗೆ ಧ್ರುವ ಸರ್ಜಾ ತಾವೇ ಸೆಲ್ಫಿ ಕ್ಲಿಕ್ಕಿಸಿ ಅಭಿಮಾನಿಗಳಿಗೆ ಖುಷಿಪಡಿಸಿದ್ದಾರೆ. ಅಂತಿಮವಾಗಿ ಈ ಲಿರಿಕಲ್ ವಿಡಿಯೋ ಸಾಂಗ್ ನಿಮ್ಮೂರ ಸಾಂಗ್ ನೀವೇ ಇದನ್ನ ಕಾಪಾಡಬೇಕೆಂದು ನಿರ್ದೇಶಕ ನಂದಕಿಶೋರ್ ಜನರಲ್ಲಿ ಮನವಿ ಮಾಡಿಕೊಂಡರು.

ವರದಿ : ಶಿವಕುಮಾರ್

ಇದನ್ನೂ ಓದಿ: ‘ಅಪ್ಪು ಮಾಮನ ನೆನಪಲ್ಲಿ ‘ಮದಗಜ’ ಸಾಂಗ್​ ರಿಲೀಸ್​ ಮಾಡಿದೀವಿ’; ಸುದ್ದಿಗೋಷ್ಠಿಯಲ್ಲಿ ಶ್ರೀಮುರಳಿ ಮಾತು

ಮೈಸೂರಿನಲ್ಲಿ ಡಾ.ಬಿ.ಆರ್​. ಅಂಬೇಡ್ಕರ್​ ಜೀವನ ಚರಿತ್ರೆ ಆಧಾರಿತ ಆಲ್ಬಮ್ ಸಾಂಗ್​ ಬಿಡುಗಡೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್