AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಧ್ರುವ ಸರ್ಜಾರಿಂದ ಉಧೋ ಉಧೋ ಹುಲಿಗೆಮ್ಮ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ

ಉಧೋ ಉಧೋ ಹುಲಗೆಮ್ಮ ಎಂಬ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಹುಲಗೆಮ್ಮನ ಸನ್ನಿಧಾನದಲ್ಲಿಯೇ ನಟ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಈ ವೇಳೆ ಕೆ.ಮಂಜು, ನಾಯಕ ನಟ ಶ್ರೇಯಸ್, ನಿರ್ದೇಶಕ ನಂದಕಿಶೋರ್ ಉಪಸ್ಥಿತರಿದ್ದರು. ವಿಡಿಯೋ ಸಾಂಗ್ ಬಿಡುಗಡೆಗೂ ಮುನ್ನ ಧ್ರುವ ಸರ್ಜಾ ಹುಲಗೆಮ್ಮ ದೇವಿಯ ದರ್ಶನ ಪಡೆದಿದ್ದಾರೆ.

ನಟ ಧ್ರುವ ಸರ್ಜಾರಿಂದ ಉಧೋ ಉಧೋ ಹುಲಿಗೆಮ್ಮ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
Follow us
TV9 Web
| Updated By: preethi shettigar

Updated on: Dec 15, 2021 | 12:45 PM

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನ ಐತಿಹಾಸಿಕ ಕ್ಷೇತ್ರ. ಇಲ್ಲಿಗೆ ರಾಜ್ಯದ ನಾನಾ ಭಾಗದಿಂದ ಭಕ್ತರು ಬರುತ್ತಾರೆ. ಅಷ್ಟೇ ಅಲ್ಲದೇ ಸಿನಿಮಾ ಮಂದಿಗೂ ಹುಲಿಗೆಮ್ಮನ ಸನ್ನಿಧಾನ ಅಚ್ಚು ಮೆಚ್ಚು. ಇದೀಗ ಈ ಸನ್ನಿಧಾನದಲ್ಲಿ ಇದೇ ದೇವಿಯ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಆಗಿದೆ. ಈ ವಿಡಿಯೋ ಸಾಂಗ್ ಬಿಡುಗಡೆ ಮಾಡಿದ್ದು, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ( Dhruva Sarja). ಕೊಪ್ಪಳ ತಾಲೂಕಿನ ಹುಲಗಿಯ ಹುಲಿಗೆಮ್ಮ ದೇವಸ್ಥಾನದಲ್ಲಿ ನಿನ್ನೆ (ಡಿಸೆಂಬರ್ 15) ಎಲ್ಲಿ ನೋಡಿದರಲ್ಲಿ ಜನವೋ ಜನ. ಇದಕ್ಕೆಲ್ಲ ಕಾರಣ ರಾಣಾ ಸಿನಿಮಾ. ನಂದಕಿಶೋರ್ ನಿರ್ದೇಶನ ಹಾಗೂ ಕೆ.ಮಂಜು ಪುತ್ರ ಶ್ರೇಯಸ್ ಅಭಿನಯದ ರಾಣಾ ಚಿತ್ರದ ಲಿರಿಕಲ್ ವಿಡಿಯೋ ನಿನ್ನೆ ಹುಲಗಿಯಲ್ಲಿ ಬಿಡುಗಡೆ ಮಾಡಲಾಯಿತು.

ಉಧೋ ಉಧೋ ಹುಲಿಗೆಮ್ಮ ಎಂಬ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಹುಲಿಗೆಮ್ಮನ ಸನ್ನಿಧಾನದಲ್ಲಿಯೇ ನಟ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಈ ವೇಳೆ ಕೆ.ಮಂಜು, ನಾಯಕ ನಟ ಶ್ರೇಯಸ್, ನಿರ್ದೇಶಕ ನಂದಕಿಶೋರ್ ಉಪಸ್ಥಿತರಿದ್ದರು. ವಿಡಿಯೋ ಸಾಂಗ್ ಬಿಡುಗಡೆಗೂ ಮುನ್ನ ಧ್ರುವ ಸರ್ಜಾ ಹುಲಿಗೆಮ್ಮ ದೇವಿಯ ದರ್ಶನ ಪಡೆದಿದ್ದಾರೆ.

ಹುಲಿಗೆಮ್ಮನ ಮೇಲೆ ಇರುವ ಹಾಡನ್ನು ತಾಯಿ ಸನ್ನಿಧಾನದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರದ ನಿರ್ಮಾಪಕ ಪುರಷೋತ್ತಮ ಗುಜ್ಜಲ್ ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದರು. ಲಿರಿಕಲ್ ವಿಡಿಯೋ ಬಿಡುಗಡೆ ಮಾಡುವ‌ ಮೊದಲು ಅಗಲಿದ ಪುನೀತ್ ರಾಜ್​ಕುಮಾರ್​ ಅವರಿಗೆ ಚಿತ್ರ ತಂಡ ಮೌನಾಚಾರಣೆ ಮೂಲಕ ನಮನ ಸಲ್ಲಿಸಿತು.

ಇನ್ನು ಧ್ರುವ ಸರ್ಜಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ನೆಚ್ಚಿನ ನಾಯಕ ನಟನನ್ನು ನೋಡುವುದಕ್ಕೆ ಬಂದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ಕೂಡಾ ತೋರಸಿದರು. ಕೊನೆಗೆ ಧ್ರುವ ಸರ್ಜಾ ತಾವೇ ಸೆಲ್ಫಿ ಕ್ಲಿಕ್ಕಿಸಿ ಅಭಿಮಾನಿಗಳಿಗೆ ಖುಷಿಪಡಿಸಿದ್ದಾರೆ. ಅಂತಿಮವಾಗಿ ಈ ಲಿರಿಕಲ್ ವಿಡಿಯೋ ಸಾಂಗ್ ನಿಮ್ಮೂರ ಸಾಂಗ್ ನೀವೇ ಇದನ್ನ ಕಾಪಾಡಬೇಕೆಂದು ನಿರ್ದೇಶಕ ನಂದಕಿಶೋರ್ ಜನರಲ್ಲಿ ಮನವಿ ಮಾಡಿಕೊಂಡರು.

ವರದಿ : ಶಿವಕುಮಾರ್

ಇದನ್ನೂ ಓದಿ: ‘ಅಪ್ಪು ಮಾಮನ ನೆನಪಲ್ಲಿ ‘ಮದಗಜ’ ಸಾಂಗ್​ ರಿಲೀಸ್​ ಮಾಡಿದೀವಿ’; ಸುದ್ದಿಗೋಷ್ಠಿಯಲ್ಲಿ ಶ್ರೀಮುರಳಿ ಮಾತು

ಮೈಸೂರಿನಲ್ಲಿ ಡಾ.ಬಿ.ಆರ್​. ಅಂಬೇಡ್ಕರ್​ ಜೀವನ ಚರಿತ್ರೆ ಆಧಾರಿತ ಆಲ್ಬಮ್ ಸಾಂಗ್​ ಬಿಡುಗಡೆ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್