AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Diganth: ದಿಗಂತ್​ ಈಗ ಹೇಗಿದ್ದಾರೆ? ಗಾಯದ ಬಗ್ಗೆ ವೈದ್ಯರು ಹೇಳಿದ್ದೇನು?

Actor Diganth injury update: ದಿಗಂತ್ ಸದ್ಯ ಗಾಳಿಪಟ-2 ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸಿರುವ ಈ ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಈ ಮೂಲಕ ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲೇ ಛಾಪು ಮೂಡಿಸುವ ವಿಶ್ವಾಸದಲ್ಲಿದ್ದಾರೆ.

Actor Diganth: ದಿಗಂತ್​ ಈಗ ಹೇಗಿದ್ದಾರೆ? ಗಾಯದ ಬಗ್ಗೆ ವೈದ್ಯರು ಹೇಳಿದ್ದೇನು?
Actor Diganth
TV9 Web
| Updated By: ಝಾಹಿರ್ ಯೂಸುಫ್|

Updated on: Jun 21, 2022 | 7:12 PM

Share

ಸ್ಯಾಂಡಲ್​ವುಡ್ ನಟ ದಿಗಂತ್ (Actor Diganth) ಆರೋಗ್ಯವಾಗಿದ್ದಾರೆ. ಹೀಗಾಗಿ ಯಾರು ಕೂಡ ಭಯಪಡುವ ಅಗತ್ಯವಿಲ್ಲ ಎಂದು ತಂದೆ ಕೃಷ್ಣಮೂರ್ತಿ ತಿಳಿಸಿದ್ದಾರೆ. ವೈದ್ಯರೊಂದಿಗೆ ಸಮಾಲೋಚಿಸಿದ ಬಳಿಕ ಮಾತನಾಡಿದ ಕೃಷ್ಣಮೂರ್ತಿಯವರು, ಒಂದು ಆಪರೇಷನ್ ಮಾಡಬೇಕು ಎಂದು ಡಾಕ್ಟರ್ ತಿಳಿಸಿದ್ದಾರೆ. ಇದಾಗಿ ಒಂದೆರೆಡು ದಿನಗಳಲ್ಲಿ ಅವರು ನಡೆಯಬಹುದು. ಅದರಂತೆ ಯಾರು ಕೂಡ ಚಿಂತಿಸುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಇನ್ನು ದಿಗಂತ್ ಅವರ ಕುತ್ತಿಗೆ ಭಾಗಕ್ಕೆ ಮಾತ್ರ ಗಾಯವಾಗಿದ್ದು, ಬೆನ್ನುಮೂಳೆಗೆ ಯಾವುದೇ ತೊಂದರೆಯಾಗಿಲ್ಲ ಎಂಬುದು ವೈದ್ಯಕೀಯ ಪರೀಕ್ಷೆಯಿಂದ ತಿಳಿದು ಬಂದಿದೆ. ಹೀಗಾಗಿ ದಿಗಂತ್​ಗೆ ಇನ್ಮುಂದೆ ನಡೆದಾಡಲು ಸಾಧ್ಯವಾಗುವುದಿಲ್ಲ. ಅಥವಾ ನಿಲ್ಲಲಾಗುವುದಿಲ್ಲ ಎಂಬಿತ್ಯಾದಿ ವದಂತಿಗಳಿಗೆ ಯಾರು ಕೂಡ ಕಿವಿಗೊಡಬೇಡಿ ಎಂದು ಇದೇ ವೇಳೆ ಕೃಷ್ಣಮೂರ್ತಿ ಅವರು ಮನವಿ ಮಾಡಿದರು.

ನಾವು ಕುಟುಂಬಸ್ಥರು ಕೂಡ ದಿಗಂತ್ ಅವರೊಂದಿಗೆ ಮಾತನಾಡಿದ್ದು, ಯಾವುದೇ ಭಯಪಡಬೇಡಿ ಎಂದು ಆತನೇ ಹೇಳಿದ್ದಾನೆ. ಅಲ್ಲದೆ ಮುನ್ನೆಚರಿಕೆಯ ಸಲುವಾಗಿ ಆಪರೇಷನ್ ಮಾಡಲು ಆತ ಕೂಡ ಒಪ್ಪಿಕೊಂಡಿದ್ದಾನೆ. ಇಂತಹ ಘಟನೆಗಳಾಗುವುದು ಸಹಜ. ಏನೂ ಮಾಡಕ್ಕಾಗುವುದಿಲ್ಲ. ಹೀಗಾಗಿ ದಿಗಂತ್ ಗಾಯದ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ ಎಂದು ಕೃಷ್ಣಮೂರ್ತಿ ಹೇಳಿದರು.

ಕೆಲ ದಿನಗಳ ಹಿಂದೆ ದಿಗಂತ್ ಹಾಗೂ ಪತ್ನಿ ಆಂದ್ರಿತಾ ರೇ ತಮ್ಮ ಆಪ್ತರೊಂದಿಗೆ ಗೋವಾಗೆ ಪ್ರವಾಸ ಹೋಗಿದ್ದರು. ಈ ವೇಳೆ ಟ್ರೆಕ್ಕಿಂಗ್ ಸೇರಿದಂತೆ ಅನೇಕ ಸಾಹಸ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲೂ ಗೋವಾ ಬೀಚ್​ನಲ್ಲಿ ಸಖತ್ ಮೋಜು ಮಸ್ತಿಯಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಸಮುದ್ರ ತಟದಲ್ಲಿ ಸಾಹಸ ಮಾಡುವುದು ಎಂದರೆ ದಿಗಂತ್​ಗೆ ಅಚ್ಚು ಮೆಚ್ಚು. ಹೀಗಾಗಿಯೇ ಅಲ್ಲೂ ಕೂಡ ಬ್ಯಾಕ್ ಫ್ಲಿಪ್ ಮಾಡಿದ್ದಾರೆ.

ಇದನ್ನೂ ಓದಿ
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!
Image
Rakshit Shetty: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ

ಆದರೆ ದುರಾದೃಷ್ಟವಶಾತ್ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ದಿಗಂತ್ ಅವರ ಕುತ್ತಿಗೆಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಅವರ ಆಪ್ತರು ಗೋವಾದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಏರ್​ ಆ್ಯಂಬುಲೆನ್ಸ್​ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ. ಅದರಂತೆ ಇದೀಗ ದಿಗಂತ್ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಿಗಂತ್ ಸದ್ಯ ಗಾಳಿಪಟ-2 ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸಿರುವ ಈ ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಈ ಮೂಲಕ ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲೇ ಛಾಪು ಮೂಡಿಸುವ ವಿಶ್ವಾಸದಲ್ಲಿದ್ದಾರೆ ದಿಗಂತ್. ಇದಲ್ಲದೆ, ಮ್ಯಾರಿಗೋಲ್ಡ್ ಎನ್ನುವ ಮತ್ತೊಂದು ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಹಾಗೆಯೇ ತೆಲುಗಿನ ಎವರು ಚಿತ್ರದ ಕನ್ನಡ ರಿಮೇಕ್​ನಲ್ಲಿ ದಿಗಂತ್ ನಟಿಸುತ್ತಿದ್ದಾರೆ. ಅಲ್ಲದೆ ಎಡಗೈಯೇ ಅಪಘಾತಕ್ಕೆ ಕಾರಣ ಹಾಗೂ ತಿಮ್ಮಯ್ಯ ಅ್ಯಂಡ್ ತಿಮ್ಮಯ್ಯ ಹೆಸರಿನ ಮತ್ತೆರಡು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ