AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​ ನಟಿಯರಿಗೆ ಕಿಸ್​ ಮಾಡಿ ತೊಂದರೆಗೆ ಸಿಲುಕಿದ್ದ ಇಮ್ರಾನ್​ ಹಷ್ಮಿ! ತಪ್ಪು ಒಪ್ಪಿಕೊಂಡ ನಟ

ಬೋಲ್ಡ್​​ ಪಾತ್ರಗಳಿಂದ ನನಗೆ ಒಂದೇ ರೀತಿಯ ಅವಕಾಶಗಳು ಹರಿದುಬಂದವು. ಆವರೆಗೂ ಕೇಳಿರದ ಬೋಲ್ಡ್​ ಕಥೆಗಳನ್ನು ತೆರೆಗೆ ತರಲು ಸಾಧ್ಯವಾಯಿತು. ಅದರ ಜೊತೆಗೆ ತೊಂದರೆ ಕೂಡ ಆಯಿತು ಎಂದು ಇಮ್ರಾನ್​ ಹಷ್ಮಿ ಈಗ ಬಾಯಿ ಬಿಟ್ಟಿದ್ದಾರೆ.

ಸ್ಟಾರ್​ ನಟಿಯರಿಗೆ ಕಿಸ್​ ಮಾಡಿ ತೊಂದರೆಗೆ ಸಿಲುಕಿದ್ದ ಇಮ್ರಾನ್​ ಹಷ್ಮಿ! ತಪ್ಪು ಒಪ್ಪಿಕೊಂಡ ನಟ
ಇಮ್ರಾನ್​ ಹಷ್ಮಿ
ಮದನ್​ ಕುಮಾರ್​
| Edited By: |

Updated on: Mar 22, 2021 | 5:56 PM

Share

ಬಾಲಿವುಡ್​ ಸಿನಿಮಾಗಳಲ್ಲಿ ನಟ ಇಮ್ರಾನ್​ ಹಷ್ಮಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಬೋಲ್ಡ್​ ಪಾತ್ರಗಳ ಮೂಲಕ ಗುರುತಿಸಿಕೊಂಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಲಕ್ಷಾಂತರ ಮಹಿಳಾ ಅಭಿಮಾನಿಗಳಿಗೂ ಇಮ್ರಾನ್​ ಹಷ್ಮಿ ಫೇವರಿಟ್​. ಆದರೆ ತಾವು ಬದುಕಿನಲ್ಲಿ ಮಾಡಿದ ಚುಂಬನದ ತಪ್ಪಿನ ಬಗ್ಗೆ ಈಗ ಅವರು ಬಾಯಿ ಬಿಟ್ಟಿದ್ದಾರೆ.

ಮರ್ಡರ್​ ಸಿನಿಮಾ ಮೂಲಕ ಇಮ್ರಾನ್​ ಹಷ್ಮಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಅದರಲ್ಲಿ ಅವರು ನಟಿ ಮಲ್ಲಿಕಾ ಶೆರಾವತ್​ ಜೊತೆ ತುಂಬಾ ಆಪ್ತವಾಗಿ ಕಾಣಿಸಿಕೊಂಡಿದ್ದರು. ಕಿಸ್ಸಿಂಗ್​ ದೃಶ್ಯಗಳಲ್ಲಿ ಮೈಚಳಿ ಬಿಟ್ಟು ನಟಿಸಿದರು. ನಂತರ ಬಂದ ‘ಆಶಿಕ್​ ಬನಾಯಾ ಆಪ್ನೆ’ ಸಿನಿಮಾದಲ್ಲಿಯೂ ಅವರು ತನುಶ್ರೀ ದತ್ತ ಜೊತೆ ಸಿಕ್ಕಾಪಟ್ಟೆ ಬೋಲ್ಡ್​ ಆಗಿ ರೊಮ್ಯಾನ್ಸ್​ ಮಾಡಿದರು.

ಬಳಿಕ ಬಿಡುಗಡೆ ಆದ ‘ಅಕ್ಸರ್​’ ಸಿನಿಮಾದಲ್ಲಿ ಉದಿತಾ ಗೋಸ್ವಾಮಿ ಜೊತೆ ಕೂಡ ಇಮ್ರಾನ್​ ಹಷ್ಮಿ ಬಹಳ ಇಂಟಿಮೇಟ್​ ಆಗಿ ಕಾಣಿಸಿಕೊಂಡರು. ಈ ಎಲ್ಲ ಕಾರಣಗಳಿಗಾಗಿ ಇಮ್ರಾನ್​ ಹಷ್ಮಿಗೆ ಸೀರಿಯಲ್​ ಕಿಸ್ಸರ್​ ಎಂಬ ಬಿರುದು ಬಂತು. ಆದರೆ ಅದರಿಂದ ತಮ್ಮ ವೃತ್ತಿಜೀವನದ ಮೇಲೆ ಆದ ಪರಿಣಾಮ ಏನು ಎಂಬುದನ್ನು ಈಗ ಇಮ್ರಾನ್​ ಹಷ್ಮಿ ಒಪ್ಪಿಕೊಂಡಿದ್ದಾರೆ.

‘ಅಂಥ ಪಾತ್ರಗಳಿಂದ ನನಗೆ ಸೀರಿಯಲ್​ ಕಿಸ್ಸರ್​ ಇಮೇಜ್​ ಬಂತು. ಅದರಿಂದ ನನಗೆ ಇದೇ ರೀತಿಯ ಅವಕಾಶಗಳು ಹರಿದುಬಂದವು. ಆವರೆಗೂ ಕೇಳಿರದ ಬೋಲ್ಡ್​ ಕಥೆಗಳನ್ನು ತೆರೆಗೆ ತರಲು ಸಾಧ್ಯವಾಯಿತು. ಅದರ ಜೊತೆಗೆ ತೊಂದರೆ ಕೂಡ ಆಯಿತು’ ಎಂದು ಇಮ್ರಾನ್​ ಹಷ್ಮಿ ಈಗ ಬಾಯಿ ಬಿಟ್ಟಿದ್ದಾರೆ. ಯಾಕೆಂದರೆ ಒಂದೇ ರೀತಿಯ ಪಾತ್ರಗಳಿಗೆ ಅವರನ್ನು ಬ್ರ್ಯಾಂಡ್​ ಮಾಡಲಾಯಿತು. ಅವರಿಗೆ ಬೇರೆ ರೀತಿಯ ಪಾತ್ರಗಳನ್ನು ಮಾಡುವ ಸಾಮರ್ಥ್ಯ ಇದ್ದರೂ ಕೂಡ ಅವಕಾಶಗಳು ಸಿಗಲಿಲ್ಲ.

ಆ ಬಳಿಕ ತಮ್ಮ ಇಮೇಜ್​ ಬದಲಾಯಿಸಿಕೊಳ್ಳಲು ಇಮ್ರಾನ್​ ಹಷ್ಮಿ ಹಲವು ಬಗೆಯಲ್ಲಿ ಪ್ರಯತ್ನಿಸಿದರು. ಸೀರಿಯಲ್​ ಕಿಸ್ಸರ್​, ಲವರ್​ ಬಾಯ್​ ಇಮೇಜ್​ ಬದಿಗಿಟ್ಟು ಬೇರೆ ಬೇರೆ ಪಾತ್ರಗಳನ್ನು ಮಾಡಲು ಪ್ರಯತ್ನಿಸಿದರು. 2019ರಲ್ಲಿ ರಿಲೀಸ್​ ಆದ ಬಾರ್ಡ್​ ಆಫ್​ ಬ್ಲಡ್​ ವೆಬ್​ ಸೀರಿಸ್​ ಮೂಲಕ ತಮ್ಮ ಇಮೇಜ್​ಅನ್ನು ಸಂಪೂರ್ಣವಾಗಿ ಬದಲಾಯಿಸಿಕೊಂಡರು. ಸದ್ಯ ಇಮ್ರಾನ್​ ಹಷ್ಮಿ ನಟನೆಯ ‘ಮುಂಬೈ ಸಾಗಾ’ ಸಿನಿಮಾ ಬಿಡುಗಡೆ ಆಗಿದ್ದು, ಈ ಚಿತ್ರದ ಪ್ರಚಾರದ ಸಲುವಾಗಿ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ವಿಚಾರಗಳ ಬಗ್ಗೆ ಅವರು ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಮರಳಿದ ರಿಯಾ ಚಕ್ರವರ್ತಿ; ರಿಲೀಸ್ ಆಯ್ತು ಹೊಸ ಸಿನಿಮಾದ ಟ್ರೇಲರ್

ಈದ್​ಗೆ ಬಾಲಿವುಡ್​ನಲ್ಲಿ ಬಿಗ್​ ಕ್ಲ್ಯಾಶ್​; ಜಾನ್​-ಸಲ್ಲು ಚಿತ್ರಗಳು ಮುಖಾಮುಖಿ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!