AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಧರ್ಮಕ್ಕೆ ಮತಾಂತರಗೊಂಡರಾ ಗೋವಿಂದ್ ಸೊಸೆ? ಮೌನ ಮುರಿದ ನಟಿ ರಾಗಿಣಿ

‘ನಾನು ಇತ್ತೀಚೆಗೆ ಅಭಿಮಾನಿಗಳ ಪೋಸ್ಟ್​ಗಳನ್ನು ರೀಪೋಸ್ಟ್ ಮಾಡುತ್ತಿದ್ದೇನೆ. ನಾನು ಇಂದು ಈ ಹಂತಕ್ಕೆ ಬಂದಿದ್ದೇನೆ ಎಂದರೆ ಅದಕ್ಕೆ ಅಭಿಮಾನಿಗಳೇ ಕಾರಣ. ಆದರೆ, ಇದರಿಂದಲೇ ತೊಂದರೆ ಆಗುತ್ತದೆ ಎಂದು ನಾನು ಭಾವಿಸಿರಲಿಲ್ಲ. ನನ್ನ ಅಸ್ಮಿತತೆ ಬಗ್ಗೆಯೇ ಪ್ರಶ್ನೆ ಏಳುವಂತಾಗಿದೆ’ ಎಂದಿದ್ದಾರೆ ರಾಗಿಣಿ.

ಬೇರೆ ಧರ್ಮಕ್ಕೆ ಮತಾಂತರಗೊಂಡರಾ ಗೋವಿಂದ್ ಸೊಸೆ? ಮೌನ ಮುರಿದ ನಟಿ ರಾಗಿಣಿ
ರಾಗಿಣಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 04, 2024 | 11:16 AM

Share

ನಟಿ ರಾಗಿಣಿ ಖನ್ನಾ (Ragini Khanna) ಅವರು ‘ಸಸುರಾಲ್ ಗೇಂಡಾ ಫೂಲ್’ ಮತ್ತು ‘ಭಾಸ್ಕರ್ ಭಾರ್ತಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರು ಬಾಲಿವುಡ್​ನ ಖ್ಯಾತ ನಟ ಗೋವಿಂದ್ ಅವರ ಸೊಸೆ ಕೂಡ ಹೌದು. ಅವರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಇದನ್ನು ರಾಗಿಣಿ ಖನ್ನಾ ಸುಳ್ಳು ಎಂದಿದ್ದಾರೆ. ಈ ರೀತಿ ಆಗಲು ಅವರು ಮಾಡಿದ ಎಡವಟ್ಟು ಕಾರಣ ಎಂದು ಹೇಳಿದ್ದಾರೆ.

ದೈನಿಕ್ ಭಾಸ್ಕರ್​ಗೆ ನೀಡಿದ ಸಂದರ್ಶನ ಒಂದರಲ್ಲಿ ಅವರು ಮಾತನಾಡಿದ್ದಾರೆ. ‘ನಾವು ಕಲಾವಿದರಾಗಿರುವುದರಿಂದ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಆ ಒಂದು ಘಟನೆಯಿಂದ ನಾನು ಈ ವಿಚಾರ ಕಲಿತಿದ್ದೇನೆ. ನಾನು ಇತ್ತೀಚೆಗೆ ಅಭಿಮಾನಿಗಳ ಪೋಸ್ಟ್​ಗಳನ್ನು ರೀಪೋಸ್ಟ್ ಮಾಡುತ್ತಿದ್ದೇನೆ. ನಾನು ಇಂದು ಈ ಹಂತಕ್ಕೆ ಬಂದಿದ್ದೇನೆ ಎಂದರೆ ಅದಕ್ಕೆ ಅಭಿಮಾನಿಗಳೇ ಕಾರಣ. ಆದರೆ, ಇದರಿಂದಲೇ ತೊಂದರೆ ಆಗುತ್ತದೆ ಎಂದು ನಾನು ಭಾವಿಸಿರಲಿಲ್ಲ. ನನ್ನ ಅಸ್ಮಿತತೆ ಬಗ್ಗೆಯೇ ಪ್ರಶ್ನೆ ಏಳುವಂತಾಗಿದೆ’ ಎಂದಿದ್ದಾರೆ ಅವರು.

‘ನಾನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುತ್ತೇನೆ ಎನ್ನುವ ಫೇಕ್ ಪೋಸ್ಟ್​ನ ಅಭಿಮಾನಿಯೋರ್ವ ಪೋಸ್ಟ್ ಮಾಡಿದ್ದ. ಅಷ್ಟೇ ಅಲ್ಲ ಕೊಲಾಬರೇಷನ್​ಗೆ ರಿಕ್ವೆಸ್ಟ್ ಕೂಡ ಕಳುಹಿಸಿದ್ದ. ತಪ್ಪಾಗಿ ನಾನು ಅದನ್ನು ಅಸ್ಸೆಪ್ಟ್ ಮಾಡಿದೆ. ನಾನು ಮತಾಂತರಗೊಂಡ ಬಗ್ಗೆ ಮಾತನಾಡುತ್ತಿರುವ ಫೇಕ್ ಪೋಸ್ಟ್ ಮಾಡಿದ್ದ. ಇದು ಸಂಪೂರ್ಣವಾಗಿ ಸುಳ್ಳು. ನಾನು ಅದನ್ನು ರಿಪೋರ್ಟ್ ಮಾಡಿದ್ದೇನೆ’ ಎಂದಿದ್ದಾರೆ ಅವರು.

‘ನನಗೆ ಲಕ್ಷಾಂತರ ಅಭಿಮಾನಿಗಳು ಇದ್ದಾರೆ. ಯಾರೋ ಒಬ್ಬವನು ಮಾಡಿದ ತಪ್ಪಿನಿಂದ ನಾನು ನನ್ನ ಎಲ್ಲಾ ಅಭಿಮಾನಿಗಳನ್ನು ದೂಷಿಸಲಾರೆ. ನನ್ನ ಅಭಿಮಾನಿಗಳು ನನಗೆ ತುಂಬಾನೇ ನಿಷ್ಠಾವಂತರಾಗಿದ್ದಾರೆ. ಹೀಗಾಗಿ ನಾನು ಅವರನ್ನು ಗೌರವಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ರಾಗಿಣಿ ದ್ವಿವೇದಿ ಹೊಸ ಫೋಟೋ ಶೂಟ್​ಗೆ ಫಿದಾ ಆದ ಫ್ಯಾನ್ಸ್

ವಿಡಿಯೋದಲ್ಲಿ ಏನಿತ್ತು?

‘ನಾನು ರಾಗಿಣಿ ಖನ್ನಾ. ನಾನು ಹಿಂದೂ ಧರ್ಮವನ್ನು ತ್ಯಜಿಸಿ ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಿದ್ದೇನೆ. ಆದರೆ ಈಗ ನಾನು ಕಟ್ಟಾ ಹಿಂದೂ ಆಗಿಬಿಟ್ಟಿದ್ದೇನೆ. ನಾನು ಹಿಂದೂ ಸಂಪ್ರದಾಯಸ್ಥನಾಗುವತ್ತ ಸಾಗಿದ್ದೇನೆ’ ಎಂದು ಅವರು ಹೇಳಿದ್ದರು.

ಹಿರಿತೆರೆ..

ರಾಗಿಣಿ ಅವರು 2008ರಲ್ಲಿ ಕಿರುತೆರೆ ಪ್ರವೇಶಿಸಿದರು. ‘ರಾಧಾ ಕಿ ಬೇಟಿಯಾ ಕುಚ್ ಕರ್​ದಿಕಾಯೇಂಗಿ’ ಧಾರಾವಾಹಿ ಮೂಲಕ ಅವರು ಫೇಮಸ್ ಆದರು. ರಾಗಿಣಿ ಅವರು ‘ಸಸುರಾಲ್ ಗೇಂಡಾ ಫೂಲ್ 2’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಅವರು ಸುಹಾನಾ ಬಾಜ್​ಪಾಯಿ ಕಶ್ಯಪ್ ಪಾತ್ರ ಮಾಡುತ್ತಿದ್ದಾರೆ.  ಇತ್ತೀಚೆಗೆ ಅವರು ತಮ್ಮ ಸಂಬಂಧಿ ಆರ್ತಿ ಸಿಂಗ್ ಮದುವೆಯಲ್ಲಿ ಕಾಣಿಸಿಕೊಂಡಿದ್ದರು. ಅವರು ಕಿರುತೆರೆ ಜೊತೆ ಹಿರಿತೆರೆಯಲ್ಲೂ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್