AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದ ಮಧ್ಯೆಯೂ ಅಭಿಮಾನ ತೋರಲು ಬಂದ ಫ್ಯಾನ್; ಸಿಟ್ಟಾದ ಹೀರೋ ಮಾಡಿದ್ದೇನು ನೋಡಿ

ಜೀವ ಅವರು ಕಾರು ಹೈವೇಲಿ ಸಾಗುತ್ತಿತ್ತು. ಈ ವೇಳೆ ಬೈಕ್ ಅಡ್ಡ ಬಂದಿದೆ. ನಂತರ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಭಿಮಾನಿಯೋರ್ವ ಜೀವ ಅವರನ್ನು ಟಚ್ ಮಾಡಲು ಬಂದಿದ್ದಾರೆ. ಇದರಿಂದ ಜೀವ ಅವರು ಸಿಟ್ಟಾಗಿದ್ದಾರೆ. ‘ನನಗೆ ಅಪಘಾತ ಆಗಿದೆ.

ಅಪಘಾತದ ಮಧ್ಯೆಯೂ ಅಭಿಮಾನ ತೋರಲು ಬಂದ ಫ್ಯಾನ್; ಸಿಟ್ಟಾದ ಹೀರೋ ಮಾಡಿದ್ದೇನು ನೋಡಿ
ಜೀವ
ರಾಜೇಶ್ ದುಗ್ಗುಮನೆ
|

Updated on: Sep 12, 2024 | 3:01 PM

Share

ತಮಿಳು ನಟ ಜೀವ ಹಾಗೂ ಅವರ ಪತ್ನಿ ಸುಪ್ರಿಯಾ ಅವರು ಅಪಘಾತಕ್ಕೆ ಒಳಗಾಗಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸೇಲಂನಿಂದ ಚೆನ್ನೈಗೆ ತೆರಳುವಾಗ ಕಲ್ಲಕುರಿಚಿಯಲ್ಲಿ ಈ ಅಪಘಾತ ನಡೆದಿತ್ತು. ಇದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ಹೀರೋ ಜೀವ ಸಿಟ್ಟಾದ ವಿಡಿಯೋ ಕೂಡ ಇದೆ. ಅಷ್ಟಕ್ಕೂ ಆ ಸ್ಥಳದಲ್ಲಿ ನಡೆದಿದ್ದು ಏನು ಎಂಬ ಬಗ್ಗೆ ಇಲ್ಲಿದೆ ವಿವರ.

ಜೀವ ಅವರು ಕಾರು ಹೈವೇಲಿ ಸಾಗುತ್ತಿತ್ತು. ಈ ವೇಳೆ ಬೈಕ್ ಅಡ್ಡ ಬಂದಿದೆ. ನಂತರ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಭಿಮಾನಿಯೋರ್ವ ಜೀವ ಅವರನ್ನು ಟಚ್ ಮಾಡಲು ಬಂದಿದ್ದಾರೆ. ಇದರಿಂದ ಜೀವ ಅವರು ಸಿಟ್ಟಾಗಿದ್ದಾರೆ. ‘ನನಗೆ ಅಪಘಾತ ಆಗಿದೆ. ನೀವೇನು ಮಾಡುತ್ತಿದ್ದೀರಾ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಅದೃಷ್ಟವಶಾತ್ ಜೀವ ಅವರಿಗೆ ಯಾವುದೇ ಅಪಾಯ ಆಗಿಲ್ಲ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ನಂತರ ಅವರು ಬೇರೆ ಕಾರಿನಲ್ಲಿ ಚೆನ್ನೈ ತೆರಳಿದ್ದಾರೆ. ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ಹೇಮಾ ಸಮಿತಿ ವರದಿಗೆ ಸಂಬಂಧಿಸಿದಂತೆ ಅವರು ದೂರು ನೀಡಿದ್ದರು. ‘ಮಲಯಾಳಂ ಫಿಲ್ಮ್​ ಸೆಟ್​ನಲ್ಲಿ ಹಿಡನ್ ಕ್ಯಾಮೆರಾ ಇಡಲಾಗುತ್ತಿದೆ ಎಂದು ಕೇಳಿದ್ದೇನೆ. ಅದು ತಪ್ಪು. ತಮಿಳು ಚಿತ್ರರಂಗದಲ್ಲಿ ಅದು ಇಲ್ಲ. ಕೇರಳ ಚಿತ್ರರಂಗಕ್ಕೆ ಮಾತ್ರ ಇದು ಸೀಮಿತವಾಗಿದೆ’ ಎಂದಿದ್ದರು ಅವರು.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಅಪಘಾತ; ಕ್ಷಣಿಕ ಜೀವನದ ಬಗ್ಗೆ ಮಾತನಾಡಿದ ‘ಪುಷ್ಪ 2’ ನಟಿ

‘MeToo ಪ್ರಕರಣದ ಪಾರ್ಟ್​ 1 ಬಂದಿದೆ. ಪಾರ್ಟ್ 2 ಇನ್ನಷ್ಟೇ ಬರಬೇಕಿದೆ. ಜನರು ಓಪನ್ ಆಗಿ ಕಿರುಕುಳ ನೀಡಿದವರ ಹೆಸರನ್ನು ಹೇಳುತ್ತಿದ್ದಾರೆ. ಅದು ತಪ್ಪು. ಚಿತ್ರರಂಗದಲ್ಲಿ ಒಳ್ಳೆಯ ವಾತಾವರಣ ಇರಬೇಕು. ಲೈಂಗಿಕ ಕಿರುಕುಳ ತಮಿಳು ಚಿತ್ರರಂಗದಲ್ಲಿ ಇಲ್ಲ’ ಎಂದು ಅವರು ಹೇಳಿದ್ದರು. ಜೀವ ಅವರು ಕೊನೆಯದಾಗಿ ‘ಯಾತ್ರಾ 2’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!