AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಿರಣ್​ ರಾಜ್​ ಪರಿಚಯಿಸಿದ್ರು ಹೊಸ ಬಟ್ಟೆ ಬ್ರ್ಯಾಂಡ್​; ಇದರ ಹಿಂದಿದೆ ಒಂದೊಳ್ಳೆಯ ಉದ್ದೇಶ

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಜನರು ಕೆಲಸ ಕಳೆದುಕೊಂಡಿದ್ದಾರೆ. ಈಗ ಆರಂಭಿಸಿರೋ ಬಟ್ಟೆ ಬ್ರ್ಯಾಂಡ್​ನಿಂದ ಒಂದಷ್ಟು ಜನರಿಗೆ ಉದ್ಯೋಗ ಸಿಗಲಿದೆ ಅನ್ನೋದು ಕಿರಣ್​ ರಾಜ್​ ಅಭಿಪ್ರಾಯ.

ನಟ ಕಿರಣ್​ ರಾಜ್​ ಪರಿಚಯಿಸಿದ್ರು ಹೊಸ ಬಟ್ಟೆ ಬ್ರ್ಯಾಂಡ್​; ಇದರ ಹಿಂದಿದೆ ಒಂದೊಳ್ಳೆಯ ಉದ್ದೇಶ
ಕಿರಣ್​ ರಾಜ್​
Follow us
ರಾಜೇಶ್ ದುಗ್ಗುಮನೆ
|

Updated on:Jul 05, 2021 | 3:06 PM

ಧಾರಾವಾಹಿ ಮೂಲಕ ಚಿರಪರಿಚಿತರಾಗಿರುವ ಕಿರಣ್​ ರಾಜ್ ಈಗ KINGS RAMPAGE ಹೆಸರಿನ ಬಟ್ಟೆ ಬ್ರ್ಯಾಂಡ್ ಪರಿಚಯಿಸಿದ್ದಾರೆ. ಇಂದು (ಜುಲೈ 5) ಕಿರಣ್​ ರಾಜ್​ ಜನ್ಮದಿನ. ಈ ವಿಶೇಷ ದಿನದಂದು KINGS RAMPAGE ಬಟ್ಟೆ ಬ್ರ್ಯಾಂಡ್ ಅನಾವರಣಗೊಂಡಿದೆ​. ಕಿರಣ್​ ರಾಜ್​ ಅವರ ವೆಬ್​ ಸೈಟ್​ನಲ್ಲೇ ಈ ಬ್ರ್ಯಾಂಡ್  ಬಟ್ಟೆ ಖರೀದಿಸಬಹುದು. ಅಂದಹಾಗೆ, ಈ ಬ್ರ್ಯಾಂಡ್​ ಪರಿಚಯಿಸುವುದರ ಹಿಂದೆ ಒಂದು ಒಳ್ಳೆಯ ಉದ್ದೇಶವಿದೆ.

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಜನರು ಕೆಲಸ ಕಳೆದುಕೊಂಡಿದ್ದಾರೆ. ಈಗ ಆರಂಭಿಸಿರೋ ಬಟ್ಟೆ ಬ್ರ್ಯಾಂಡ್​ನಿಂದ ಒಂದಷ್ಟು ಜನರಿಗೆ ಉದ್ಯೋಗ ಸಿಗಲಿದೆ ಅನ್ನೋದು ಕಿರಣ್​ ರಾಜ್​ ಅಭಿಪ್ರಾಯ. ‘ಕೊರೊನಾ​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಜನರು ಕೆಲಸ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಯಾರಿಗಾದರೂ ಕೆಲಸ ಕೊಡಿಸಿದರೆ ಅದಕ್ಕಿಂತ ದೊಡ್ಡ ಸಹಾಯ ಮತ್ತೊಂದಿಲ್ಲ. ಅನೇಕರು ನಮಗೆ ಫುಡ್​ಕಿಟ್​ ಬೇಡ ಕೆಲಸ ಕೊಡಿಸಿ ಎಂದು ಕೇಳುತ್ತಾರೆ. KINGS RAMPAGE ಬ್ರ್ಯಾಂಡ್​ನಿಂದ ಒಂದಷ್ಟು ಜನರಿಗೆ ಉದ್ಯೋಗ ದೊರೆಯುತ್ತಿದೆ’ ಎನ್ನುತ್ತಾರೆ ಕಿರಣ್​ ರಾಜ್​.

‘ನಾವು ಒಂದಷ್ಟು ಶಾಲೆಗಳ ಜತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಪ್ರತಿ ಬಟ್ಟೆ ಖರೀದಿಗೆ ನಾವು ನಿಗದಿಪಡಿಸಿದ ಶಾಲೆಯ ಮಕ್ಕಳಿಗೆ ಒಂದು ಪೆನ್​ ಹಾಗೂ ಬುಕ್​ ಗಿಫ್ಟ್​ ಸಿಗಲಿದೆ. ಈ ಬಟ್ಟೆಯ ಬ್ರ್ಯಾಂಡ್​ನಿಂದ ಬಂದ ಲಾಭ ಸಂಪೂರ್ಣವಾಗಿ ಚ್ಯಾರಿಟಿಗೆ ಹೋಗಲಿದೆ’ ಎನ್ನುತ್ತಾರೆ ಅವರು.

View this post on Instagram

A post shared by Kiran Raj (@itskiranraj)

ಕಿರಣ್ ರಾಜ್ ಜನ್ಮದಿನದ ನಿಮಿತ್ತ ಅವರ ನಟನೆಯ ‘ಬಹದ್ದೂರ್ ಗಂಡು’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್​​​ನಲ್ಲಿ ಕಿರಣ್ ಆ್ಯಕ್ಷನ್ ದೃಶ್ಯಗಳ ಮೂಲಕ ಮಿಂಚಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಪ್ರಸಿದ್ಧ್ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಯಶಾ ಶಿವಕುಮಾರ್ ಚಿತ್ರದ ನಾಯಕಿ. ಕಿಟ್ಟಿ ಕೌಶಿಕ್ ಛಾಯಾಗ್ರಹಣ ಈ ಸಿನಿಮಾಗಿದೆ. ಪ್ರಸಿದ್ಧ್ ಸಿನಿಮಾಸ್ ಹಾಗೂ ರಮೇಶ್ ರೆಡ್ಡಿ ಬಹದ್ದೂರ್ ಗಂಡು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ: ಅಮ್ಮನ ಮಾತು ಕೇಳಿ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ‘ಕನ್ನಡತಿ’ ಹೀರೋ ಕಿರಣ್​ ರಾಜ್​!

Happy Birthday Kiran Raj: ಸಖತ್​ ಆ್ಯಕ್ಷನ್​ನಲ್ಲಿ ಮಿಂಚುತ್ತಿದ್ದಾರೆ ಕಿರಣ್​ ರಾಜ್; ಇದಕ್ಕಾಗಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ

(Actor Kiran Raj Introduce KINGS RAMPAGE Cloth Brand for a good Reason)

Published On - 1:02 pm, Mon, 5 July 21

ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ