AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ-ಕಾಲೇಜು ಪ್ರವೇಶ​ ಶುಲ್ಕ ಇಳಿಸಿ ಎಂಬ ಕೂಗಿಗೆ ಧ್ವನಿಯಾದ ಕಿರಣ್​ ರಾಜ್​; ಸಿಎಂ ಯಡಿಯೂರಪ್ಪಗೆ ಪತ್ರ

Kiran Raj: ಮಕ್ಕಳು ಆನ್​ಲೈನ್ ಮೂಲಕ​ ಶಿಕ್ಷಣ ಪಡೆಯುತ್ತಿದ್ದಾರೆ. ಕಲಿಕೆ ಎಲ್ಲವೂ ಆನ್​ಲೈನ್​ನಲ್ಲೇ ಆಗುವಾಗ ಶಾಲೆಯ ಆಡಳಿತ ಮಂಡಳಿ ಸಂಪೂರ್ಣ ಫೀ ನೀಡುವಂತೆ ಕೇಳುತ್ತಿರುವುದು ಏಕೆ ಎಂಬುದು ಕೆಲವರ ಪ್ರಶ್ನೆಯಾಗಿತ್ತು.

ಶಾಲಾ-ಕಾಲೇಜು ಪ್ರವೇಶ​ ಶುಲ್ಕ ಇಳಿಸಿ ಎಂಬ ಕೂಗಿಗೆ ಧ್ವನಿಯಾದ ಕಿರಣ್​ ರಾಜ್​; ಸಿಎಂ ಯಡಿಯೂರಪ್ಪಗೆ ಪತ್ರ
ಶಾಲಾ-ಕಾಲೇಜು ಪ್ರವೇಶ​ ಶುಲ್ಕ ಇಳಿಸಿ ಎಂಬ ಕೂಗಿಗೆ ಕಿರಣ್​ ರಾಜ್​ ಧ್ವನಿಯಾಗಿದ್ದಾರೆ
ರಾಜೇಶ್ ದುಗ್ಗುಮನೆ
|

Updated on:May 21, 2021 | 7:58 PM

Share

ಕೊವಿಡ್​ ಮೊದಲನೇ ಅಲೆ ತಣ್ಣಗಾಯಿತು ಎನ್ನುವಾಗಲೇ ಎರಡನೇ ಅಲೆ ಕಾಣಿಸಿಕೊಂಡಿದೆ. ಹೀಗಾಗಿ, ಶಾಲಾ-ಕಾಲೇಜುಗಳನ್ನು ಮತ್ತೆ ಮುಚ್ಚಲಾಗಿದ್ದು, ಆನ್​ಲೈನ್​ ಮೂಲಕ ತರಗತಿ ನಡೆಸಲಾಗುತ್ತಿದೆ. ಆದರೆ, ಅನೇಕ ಶಾಲೆಗಳಲ್ಲಿ ಮಕ್ಕಳ ಪ್ರವೇಶ ಶುಲ್ಕ ಮಾತ್ರ ಕಡಿಮೆ ಮಾಡಿಲ್ಲ. ಇದು ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕ ಪಾಲಕರು ರಸ್ತೆಗೆ ಇಳಿದು ಇದನ್ನು ವಿರೋಧಿಸಿದ್ದಾರೆ. ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಆಕ್ರೋಶ ಹೊರ ಹಾಕಿದ್ದರು. ಈಗ ಇದಕ್ಕೆ ಕಿರುತೆರೆ ನಟ ಕಿರಣ್​ ರಾಜ್​ ಕೂಡ ಧ್ವನಿಗೂಡಿಸಿದ್ದಾರೆ.

ಮಕ್ಕಳು ಆನ್​ಲೈನ್ ಮೂಲಕ​ ಶಿಕ್ಷಣ ಪಡೆಯುತ್ತಿದ್ದಾರೆ. ಕಲಿಕೆ ಎಲ್ಲವೂ ಆನ್​ಲೈನ್​ನಲ್ಲೇ ಆಗುವಾಗ ಶಾಲೆಯ ಆಡಳಿತ ಮಂಡಳಿ ಸಂಪೂರ್ಣ ಫೀ ನೀಡುವಂತೆ ಕೇಳುತ್ತಿರುವುದು ಏಕೆ ಎಂಬುದು ಕೆಲವರ ಪ್ರಶ್ನೆಯಾಗಿತ್ತು. ಇನ್ನು, ಈ ಸಂಕಷ್ಟದ ಸಮಯದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಹೀಗಾಗಿ, ಮಕ್ಕಳ ಶಾಲಾ ಫೀಸ್​ ಕಟ್ಟಲು ಆಗುತ್ತಿಲ್ಲ. ಈ ಕಷ್ಟದ ಪರಿಸ್ಥಿತಿಯಲ್ಲಿ ಕಿರಣ್​ ರಾಜ್​ ಕೂಡ ಈ ಬಗ್ಗೆ ಧ್ವನಿ ಎತ್ತುವ ಕೆಲಸ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರೂಪ್ಪ ಹಾಗೂ ಶಿಕ್ಷಣ ಸಚಿವರಿಗೆ ಓಪನ್​ ಲೆಟರ್​ ಬರೆದಿರುವ ಅವರು,  ಜಗತ್ತಿನೆಲ್ಲೆಡೆ ಕೊವಿಡ್​ 19 ವ್ಯಾಪಕವಾಗಿ ಹರಡುತ್ತಿದ್ದು, ಸಾಮಾನ್ಯ ಜನರ ಬದುಕು ಅಲ್ಲೋಲ ಕಲ್ಲೋಲವಾಗಿದೆ. ಇನ್ನು, ಮಕ್ಕಳು ಶಾಲಾ ಕಾಲೇಜು ಇಲ್ಲದೆ ಆನ್​ಲೈನ್​ ಶಿಕ್ಷಣಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲಿ ಶಾಲಾ-ಕಾಲೇಜು ಶುಲ್ಕ ಸ್ವಲ್ಪವೂ ಇಳಿದಿಲ್ಲ. ದಯವಿಟ್ಟು ಶಾಲಾ ಕಾಲೇಜುಗಳ ಶುಲ್ಕದಲ್ಲಿ ರಿಯಾಯಿತಿ ನೀಡಬೇಕೆಂದು ಈ ಮೂಲಕ ನಿಮ್ಮಲ್ಲಿ ಎಲ್ಲಾ ಪೋಷಕರ ಪರವಾಗಿ ವಿನಂತಿಸಿಕೊಳ್ಳುತ್ತಿದ್ದೇನೆ. ನಮ್ಮ ಈ ವಿನಂತಿ ಪರಿಗಣಿಸಿ ಪರಿಶೀಲಿಸಿ ಜನರ ಬೆನ್ನೆಲುವಾಗಿ ನಿಲ್ಲುವಿರೆನ್ನುವ ವಿಶ್ವಾಸವಿದೆ ಎಂದು ಕಿರಣ್​ ರಾಜ್​ ಬರೆದುಕೊಂಡಿದ್ದಾರೆ.

View this post on Instagram

A post shared by Kiran Raj (@itskiranraj)

ಕೊವಿಡ್​ ಸಂಕಷ್ಟದ ಸಮಯದಲ್ಲಿ ಕಿರಣ್​ ರಾಜ್​ ಸುಮ್ಮನೆ ಕೂತಿಲ್ಲ. ಸಂಕಷ್ಟದಲ್ಲಿರುವ ಸಾಕಷ್ಟು ಜನರಿಗೆ ಊಟ ಹಂಚುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಿತ್ಯ ಸುಮಾರು ಒಂದು ಸಾವಿರ ಜನರಿಗೆ ಅವರು ಊಟ ನೀಡುತ್ತಿದ್ದಾರೆ. ಇದಲ್ಲದೆ ದಿನಸಿ ಕಿಟ್​ಗಳನ್ನು ಕೂಡ ವಿತರಿಸುತ್ತಿದ್ದಾರೆ. ಕಿರಣ್​ ರಾಜ್​ ಫೌಂಡೇಷನ್​ ಅಡಿಯಲ್ಲಿ ಅವರು ಮಾಡುತ್ತಿರುವ ಕಾರ್ಯಕ್ಕೆ ಎಲ್ಲಾ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಅನೇಕರು ಕಿರಣ್​ ರಾಜ್​ಗೆ ಬೆಂಬಲವಾಗಿ ನಿಂತಿದ್ದಾರೆ.

ಇದನ್ನೂ ಓದಿ: Kiran Raj: ಕೊರೊನಾ ಸಂಕಷ್ಟದಲ್ಲಿ ಪ್ರತಿದಿನ ಸಾವಿರ ಜನರಿಗೆ ಊಟ ಹಾಕುತ್ತಿರುವ ‘ಕನ್ನಡತಿ’ ಕಿರಣ್ ರಾಜ್

‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

Published On - 7:55 pm, Fri, 21 May 21

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ