AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ನಟ ಕಿಶೋರ್ ರಾಯಭಾರಿ

ನಟ ಕಿಶೋರ್​ ಅವರಿಗೆ ಇರುವ ಜನಪ್ರಿಯತೆ ಅಪಾರ. ಜಾಗತಿಕ ಮನ್ನಣೆ ಪಡೆದಿರುವ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಕಿಶೋರ್​ ಅವರು ಈ ವರ್ಷದ ಪ್ರಚಾರ ರಾಯಭಾರಿಯಾಗಿ ನೇಮಕ ಆಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪೋಸ್ಟ್​ ಮಾಡಿದ್ದು, ಕಿಶೋರ್​ಗೆ ಅಭಿನಂದನೆ ತಿಳಿಸಿದ್ದಾರೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ನಟ ಕಿಶೋರ್ ರಾಯಭಾರಿ
Kishore
ಮದನ್​ ಕುಮಾರ್​
|

Updated on: Jan 09, 2025 | 6:44 PM

Share

​ದಕ್ಷಿಣ ಭಾರತ ಮತ್ತು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ಖ್ಯಾತ ನಟ ಕಿಶೋರ್ ಕುಮಾರ್ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ​ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. 2024-2025ನೇ ಸಾಲಿನ 16ನೇ ಬೆಂಗಳೂರು ಇಂಟರ್​ನ್ಯಾಷನಲ್​ ಫಿಲ್ಮ್​ ಫೆಸ್ಟಿವಲ್​ ಮಾರ್ಚ್ 1ರಿಂದ 8ರ ತನಕ ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿದೆ. ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರದ ಸಲುವಾಗಿ ಕಿಶೋರ್ ಅವರನ್ನು ರಾಯಭಾರಿಯನ್ನಾಗಿ ಮಾಡಲಾಗಿದೆ.

ಕಿಶೋರ್​ ಅವರಿಗೆ ದೇಶಾದ್ಯಂತ ಖ್ಯಾತಿ ಇದೆ. ಅಭಿನಯದ ಮೂಲಕ ಅವರು ಅಪಾರ ಜನಪ್ರಿಯತೆ ಹೊಂದಿದ್ದಾರೆ. ಕನ್ನಡ ಮಾತ್ರವಲ್ಲದೇ ದಕ್ಷಿಣದ ಇತರೆ ಭಾಷೆಯ ಸಿನಿಮಾಗಳಲ್ಲಿ ಹಾಗೂ ಹಿಂದಿ ಸಿನಿಮಾಗಳಲ್ಲಿ ಕೂಡ ಅವರು ಅಭಿನಯಿಸಿ ಮನೆಮಾತಾಗಿದ್ದಾರೆ. ಅವರನ್ನು ಬೆಂಗಳೂರು ಫಿಲ್ಮ್​ ಫೆಸ್ಟಿವಲ್​ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದೆ. 8 ದಿನಗಳ ಕಾಲ ನಡೆಯುವ ಈ ಸಿನಿಮೋತ್ಸವದಲ್ಲಿ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುತ್ತಮ ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಅಲ್ಲದೇ, ಸಿನಿಮಾಗಳಿಗೆ ಸಂಬಂಧಿಸಿದ ಕಾರ್ಯಾಗಾರಗಳು, ವಿಚಾರ ಸಂಕಿರಣಗಳು ಕೂಡ ಇರಲಿವೆ. ಸಿನಿಮಾಸಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಹಾಲಿವುಡ್​ಗೆ ಬಿತ್ತು ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಊರು ಬಿಟ್ಟ ಸೆಲೆಬ್ರಿಟಿಗಳು

​16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಸಭೆ ನಡೆಸಿ, ಸಿನಿಮೋತ್ಸವದ ದಿನಾಂಕ ಘೋಷಿಸಿದರು. ಬಳಿಕ ಮಾತನಾಡಿ, ‘ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಶೀರ್ಷಿಕೆಯಡಿ ಸಿನಿಮೋತ್ಸವ ನಡೆಯಲಿದೆ. ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಸಿನಿಮಾಗಳನ್ನು ತರುವ ಕುರಿತು ಮತ್ತು ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತಿಗಣ್ಯರು ಚಿತ್ರೋತ್ಸವದಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು