ಚಿತ್ರರಂಗಕ್ಕೆ ಶಾಪವಾದ ಕೊರೊನಾ; ಬಾಲಿವುಡ್​ನ ಖ್ಯಾತ ನಟ ಕೊವಿಡ್​​ಗೆ ಬಲಿ

ಚಿತ್ರರಂಗದ ಸಾಲು ಸಾಲು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಬಾಲಿವುಡ್​, ಕಾಲಿವುಡ್​ ಹಾಗೂ ಸ್ಯಾಂಡಲ್​ವುಡ್​ನ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಕೊರೊನಾದಿಂದ ಮೃತಪಡುತ್ತಿದ್ದಾರೆ.

ಚಿತ್ರರಂಗಕ್ಕೆ ಶಾಪವಾದ ಕೊರೊನಾ; ಬಾಲಿವುಡ್​ನ ಖ್ಯಾತ ನಟ ಕೊವಿಡ್​​ಗೆ ಬಲಿ
ನಟ ಬಿಕ್ರಮ್​ಜೀತ್​
Follow us
|

Updated on: May 01, 2021 | 3:24 PM

ಹಿಂದಿಯ ಪ್ರಮುಖ​ ಸಿನಿಮಾ, ಟಿವಿ ಶೋ ಹಾಗೂ ವೆಬ್​ ಸೀರಿಸ್​​ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್​ ಬಿಕ್ರಮ್‌ಜೀತ್ ಕನ್ವರ್‌ಪಾಲ್ ಕೊವಿಡ್​ಗೆ ಬಲಿಯಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಈ ಮೂಲಕ ಭಾರತ ಚಿತ್ರರಂಗ ಮತ್ತೋರ್ವ ಕಲಾವಿದನನ್ನು ಕಳೆದುಕೊಂಡಂತಾಗಿದೆ.

ಬಿಕ್ರಮ್‌ಜೀತ್ ಕನ್ವರ್‌ಪಾಲ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ಅಂಟಿರುವ ವಿಚಾರ ದೃಢವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಬಿಕ್ರಮ್‌ಜೀತ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಬಿಕ್ರಮ್​ಜೀತ್​ ಸಾವು ಬಾಲಿವುಡ್​ಗೆ ಶಾಕ್​ ನೀಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಫಿಲ್ಮ್​​ಮೇಕರ್​ ಅಶೋಕ್​ ಪಂಡಿತ್​, ಬಿಕ್ರಮ್​ಜೀತ್​ ಕೊವಿಡ್​ಗೆ ಬಲಿಯಾಗಿದ್ದಾರೆ. ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಚಿತ್ರರಂಗಕ್ಕೆ ಬಂದು ಸಾಕಷ್ಟು ಪೋಷಕ ಪಾತ್ರ ನಿರ್ವಹಿಸಿದ್ದರು. ಅವರ ಕುಟುಂದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.

ಬಿಕ್ರಮ್​ಜೀತ್ ಸೇನೆಯಲ್ಲಿ ಸೇವೆಸಲ್ಲಿಸಿ ಬಂದ ನಂತರ 2003ರಲ್ಲಿ ನಟನೆ ಆರಂಭಿಸಿದರು. ಪೇಜ್​ 3, ರಾಕೆಟ್​ ಸಿಂಗ್​, ಆರಕ್ಷಕನ್​, ಮರ್ಡರ್​ 2, 2 ಸ್ಟೇಟ್ಸ್​, ಘಾಜಿ ಅಟ್ಯಾಕ್​, ರಹಸ್ಯ ಸೇರಿ ಸಾಕಷ್ಟು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಇವರು ಕೊನೆಯಾದಾಗಿ ಕಾಣಿಸಿಕೊಂಡಿದ್ದು ಹಾಟ್​ ಸ್ಟಾರ್​ನ Special Ops ವೆಬ್​ ಸೀರಿಸ್​ನಲ್ಲಿ.

ಚಿತ್ರರಂಗದ ಸಾಲು ಸಾಲು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಬಾಲಿವುಡ್​, ಕಾಲಿವುಡ್​ ಹಾಗೂ ಸ್ಯಾಂಡಲ್​ವುಡ್​ನ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಕೊರೊನಾದಿಂದ ಮೃತಪಡುತ್ತಿದ್ದಾರೆ. ಯುವ ನಟ-ನಿರ್ಮಾಪಕ ಡಿ.ಎಸ್. ಮಂಜುನಾಥ್, ಪೆಟ್ರೋಮ್ಯಾಕ್ಸ್ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ರಾಜಶೇಖರ್ ಅವರನ್ನು ಕೊರೊನಾ ಬಲಿ ತೆಗೆದುಕೊಂಡಿದೆ.

ಇದನ್ನೂ ಓದಿ: Corona Death: ಪೆಟ್ರೋಮ್ಯಾಕ್ಸ್ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ರಾಜು ನಿಧನ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ