AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗಕ್ಕೆ ಶಾಪವಾದ ಕೊರೊನಾ; ಬಾಲಿವುಡ್​ನ ಖ್ಯಾತ ನಟ ಕೊವಿಡ್​​ಗೆ ಬಲಿ

ಚಿತ್ರರಂಗದ ಸಾಲು ಸಾಲು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಬಾಲಿವುಡ್​, ಕಾಲಿವುಡ್​ ಹಾಗೂ ಸ್ಯಾಂಡಲ್​ವುಡ್​ನ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಕೊರೊನಾದಿಂದ ಮೃತಪಡುತ್ತಿದ್ದಾರೆ.

ಚಿತ್ರರಂಗಕ್ಕೆ ಶಾಪವಾದ ಕೊರೊನಾ; ಬಾಲಿವುಡ್​ನ ಖ್ಯಾತ ನಟ ಕೊವಿಡ್​​ಗೆ ಬಲಿ
ನಟ ಬಿಕ್ರಮ್​ಜೀತ್​
ರಾಜೇಶ್ ದುಗ್ಗುಮನೆ
|

Updated on: May 01, 2021 | 3:24 PM

Share

ಹಿಂದಿಯ ಪ್ರಮುಖ​ ಸಿನಿಮಾ, ಟಿವಿ ಶೋ ಹಾಗೂ ವೆಬ್​ ಸೀರಿಸ್​​ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್​ ಬಿಕ್ರಮ್‌ಜೀತ್ ಕನ್ವರ್‌ಪಾಲ್ ಕೊವಿಡ್​ಗೆ ಬಲಿಯಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಈ ಮೂಲಕ ಭಾರತ ಚಿತ್ರರಂಗ ಮತ್ತೋರ್ವ ಕಲಾವಿದನನ್ನು ಕಳೆದುಕೊಂಡಂತಾಗಿದೆ.

ಬಿಕ್ರಮ್‌ಜೀತ್ ಕನ್ವರ್‌ಪಾಲ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ಅಂಟಿರುವ ವಿಚಾರ ದೃಢವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಬಿಕ್ರಮ್‌ಜೀತ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಬಿಕ್ರಮ್​ಜೀತ್​ ಸಾವು ಬಾಲಿವುಡ್​ಗೆ ಶಾಕ್​ ನೀಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಫಿಲ್ಮ್​​ಮೇಕರ್​ ಅಶೋಕ್​ ಪಂಡಿತ್​, ಬಿಕ್ರಮ್​ಜೀತ್​ ಕೊವಿಡ್​ಗೆ ಬಲಿಯಾಗಿದ್ದಾರೆ. ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಚಿತ್ರರಂಗಕ್ಕೆ ಬಂದು ಸಾಕಷ್ಟು ಪೋಷಕ ಪಾತ್ರ ನಿರ್ವಹಿಸಿದ್ದರು. ಅವರ ಕುಟುಂದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.

ಬಿಕ್ರಮ್​ಜೀತ್ ಸೇನೆಯಲ್ಲಿ ಸೇವೆಸಲ್ಲಿಸಿ ಬಂದ ನಂತರ 2003ರಲ್ಲಿ ನಟನೆ ಆರಂಭಿಸಿದರು. ಪೇಜ್​ 3, ರಾಕೆಟ್​ ಸಿಂಗ್​, ಆರಕ್ಷಕನ್​, ಮರ್ಡರ್​ 2, 2 ಸ್ಟೇಟ್ಸ್​, ಘಾಜಿ ಅಟ್ಯಾಕ್​, ರಹಸ್ಯ ಸೇರಿ ಸಾಕಷ್ಟು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಇವರು ಕೊನೆಯಾದಾಗಿ ಕಾಣಿಸಿಕೊಂಡಿದ್ದು ಹಾಟ್​ ಸ್ಟಾರ್​ನ Special Ops ವೆಬ್​ ಸೀರಿಸ್​ನಲ್ಲಿ.

ಚಿತ್ರರಂಗದ ಸಾಲು ಸಾಲು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಬಾಲಿವುಡ್​, ಕಾಲಿವುಡ್​ ಹಾಗೂ ಸ್ಯಾಂಡಲ್​ವುಡ್​ನ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಕೊರೊನಾದಿಂದ ಮೃತಪಡುತ್ತಿದ್ದಾರೆ. ಯುವ ನಟ-ನಿರ್ಮಾಪಕ ಡಿ.ಎಸ್. ಮಂಜುನಾಥ್, ಪೆಟ್ರೋಮ್ಯಾಕ್ಸ್ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ರಾಜಶೇಖರ್ ಅವರನ್ನು ಕೊರೊನಾ ಬಲಿ ತೆಗೆದುಕೊಂಡಿದೆ.

ಇದನ್ನೂ ಓದಿ: Corona Death: ಪೆಟ್ರೋಮ್ಯಾಕ್ಸ್ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ರಾಜು ನಿಧನ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ