AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಷ್, ಕೊರಿಯನ್, ಚೈನೀಸ್​ ಸೇರಿ ಹಲವು ಭಾಷೆಗಳಿಗೆ ರಿಮೇಕ್ ಆಗಲಿದೆ ‘ದೃಶ್ಯಂ’ ಸಿನಿಮಾ

ಮೂಲ ಚಿತ್ರದಲ್ಲಿ ಮೋಹನ್​​ಲಾಲ್, ಜೀತು ಜೊಸೆಫ್​, ಮೀನಾ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ಜೀತು ಜೊಸೆಫ್ ನಿರ್ದೇಶನ ಮಾಡಿದ್ದರು.

ಇಂಗ್ಲಿಷ್, ಕೊರಿಯನ್, ಚೈನೀಸ್​ ಸೇರಿ ಹಲವು ಭಾಷೆಗಳಿಗೆ ರಿಮೇಕ್ ಆಗಲಿದೆ ‘ದೃಶ್ಯಂ’ ಸಿನಿಮಾ
ದೃಶ್ಯಂ 2 ಚಿತ್ರದಲ್ಲಿ ಮೋಹನ್​ಲಾಲ್
ರಾಜೇಶ್ ದುಗ್ಗುಮನೆ
|

Updated on: Feb 09, 2023 | 7:14 AM

Share

ಮಲಯಾಳಂನ ‘ದೃಶ್ಯಂ’ (Drishyam) ಹಾಗೂ ‘ದೃಶ್ಯಂ 2’ ಸಿನಿಮಾಗಳು ಸೂಪರ್ ಹಿಟ್ ಆದವು. ಕನ್ನಡ, ಹಿಂದಿ ಮೊದಲಾದ ಭಾಷೆಗಳಿಗೆ ಈ ಸಿನಿಮಾನ ರಿಮೇಕ್ ಮಾಡಲಾಯಿತು. ಅಲ್ಲಿಯೂ ಸಿನಿಮಾ ಹಿಟ್ ಆದವು. ಹಿಂದಿಯಲ್ಲಿ ಈ ಚಿತ್ರವನ್ನು ರಿಮೇಕ್ ಮಾಡುವ ಹಕ್ಕನ್ನು ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾಷನಲ್ ಪಡೆದುಕೊಂಡಿತ್ತು. ಈಗ ಇವರು ವಿದೇಶಿ ಭಾಷೆಗಳ ರಿಮೇಕ್ ಹಕ್ಕನ್ನು ಪಡೆದಿದ್ದಾರೆ. ಈ ಮೂಲಕ ಚೈನೀಸ್ (Chinees) ಮೊದಲಾದ ಭಾಷೆಗಳಿಗೆ ಈ ಸಿನಿಮಾನ ರಿಮೇಕ್ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾನಲ್ ಕಡೆಯಿಂದಲೇ ಮಾಹಿತಿ ಸಿಕ್ಕಿದೆ. ‘ಹಿಂದಿಯಲ್ಲಿ ದೃಶ್ಯಂ 2 ಯಶಸ್ಸು ಕಂಡಿತು. ಈ ಬೆನ್ನಲ್ಲೇ ನಾವು ಇಂಗ್ಲಿಷ್ ಸೇರಿದಂತೆ ಎಲ್ಲಾ ಭಾಷೆಗಳ ರಿಮೇಕ್ ಹಕ್ಕನ್ನು ಪಡೆದಿದ್ದೇವೆ. ಸದ್ಯ ನಾವು ಕೊರಿಯನ್, ಜಪಾನೀಸ್ ಹಾಗೂ ಹಾಲಿವುಡ್​​ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುವ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ’ ಎಂದು ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾಷನಲ್ ತಿಳಿಸಿದೆ.

ಮೂಲ ಚಿತ್ರದಲ್ಲಿ ಮೋಹನ್​​ಲಾಲ್, ಜೀತು ಜೊಸೆಫ್​, ಮೀನಾ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ಜೀತು ಜೊಸೆಫ್ ನಿರ್ದೇಶನ ಮಾಡಿದ್ದರು. ಕಿರುಕುಳ ಕೊಡುತ್ತಿರುವ ವ್ಯಕ್ತಿಯನ್ನು ಕಥಾನಾಯಕನ ಕುಟುಂಬದವರು ಹತ್ಯೆ ಮಾಡುತ್ತಾರೆ. ಆ ಹೆಣವನ್ನು ನಿರ್ಮಾಣ ಆಗುತ್ತಿರುವ ಪೊಲೀಸ್ ಠಾಣೆ ಒಳಗೆ ಹುಗಿದು ಹಾಕುತ್ತಾನೆ. ಈ ಪ್ರಕರಣದಿಂದ ಆತ ಹೇಗೆ ತಪ್ಪಿಸಿಕೊಳ್ಳುತ್ತಾನೆ ಅನ್ನೋದು ಸಿನಿಮಾದ ಕಥೆ.

‘ದೃಶ್ಯಂ 2’ ಚಿತ್ರದಲ್ಲಿ ಪೊಲೀಸ್ ಠಾಣೆ ಅಡಿಯಲ್ಲಿ ಮೂಳೆಗಳು ಇವೆ ಎಂಬ ವಿಚಾರ ರಿವೀಲ್ ಆಗುತ್ತದೆ. ಇದರಿಂದಲೂ ಕಥಾನಾಯಕ ತಪ್ಪಿಸಿಕೊಳ್ಳುತ್ತಾನೆ. ಅದು ‘ದೃಶ್ಯಂ 2’ನ ಸಸ್ಪೆನ್ಸ್​. ಕನ್ನಡದಲ್ಲಿ ರವಿಚಂದ್ರನ್ ಅವರು ಮುಖ್ಯ ಪಾತ್ರ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ