AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಷ್, ಕೊರಿಯನ್, ಚೈನೀಸ್​ ಸೇರಿ ಹಲವು ಭಾಷೆಗಳಿಗೆ ರಿಮೇಕ್ ಆಗಲಿದೆ ‘ದೃಶ್ಯಂ’ ಸಿನಿಮಾ

ಮೂಲ ಚಿತ್ರದಲ್ಲಿ ಮೋಹನ್​​ಲಾಲ್, ಜೀತು ಜೊಸೆಫ್​, ಮೀನಾ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ಜೀತು ಜೊಸೆಫ್ ನಿರ್ದೇಶನ ಮಾಡಿದ್ದರು.

ಇಂಗ್ಲಿಷ್, ಕೊರಿಯನ್, ಚೈನೀಸ್​ ಸೇರಿ ಹಲವು ಭಾಷೆಗಳಿಗೆ ರಿಮೇಕ್ ಆಗಲಿದೆ ‘ದೃಶ್ಯಂ’ ಸಿನಿಮಾ
ದೃಶ್ಯಂ 2 ಚಿತ್ರದಲ್ಲಿ ಮೋಹನ್​ಲಾಲ್
ರಾಜೇಶ್ ದುಗ್ಗುಮನೆ
|

Updated on: Feb 09, 2023 | 7:14 AM

Share

ಮಲಯಾಳಂನ ‘ದೃಶ್ಯಂ’ (Drishyam) ಹಾಗೂ ‘ದೃಶ್ಯಂ 2’ ಸಿನಿಮಾಗಳು ಸೂಪರ್ ಹಿಟ್ ಆದವು. ಕನ್ನಡ, ಹಿಂದಿ ಮೊದಲಾದ ಭಾಷೆಗಳಿಗೆ ಈ ಸಿನಿಮಾನ ರಿಮೇಕ್ ಮಾಡಲಾಯಿತು. ಅಲ್ಲಿಯೂ ಸಿನಿಮಾ ಹಿಟ್ ಆದವು. ಹಿಂದಿಯಲ್ಲಿ ಈ ಚಿತ್ರವನ್ನು ರಿಮೇಕ್ ಮಾಡುವ ಹಕ್ಕನ್ನು ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾಷನಲ್ ಪಡೆದುಕೊಂಡಿತ್ತು. ಈಗ ಇವರು ವಿದೇಶಿ ಭಾಷೆಗಳ ರಿಮೇಕ್ ಹಕ್ಕನ್ನು ಪಡೆದಿದ್ದಾರೆ. ಈ ಮೂಲಕ ಚೈನೀಸ್ (Chinees) ಮೊದಲಾದ ಭಾಷೆಗಳಿಗೆ ಈ ಸಿನಿಮಾನ ರಿಮೇಕ್ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾನಲ್ ಕಡೆಯಿಂದಲೇ ಮಾಹಿತಿ ಸಿಕ್ಕಿದೆ. ‘ಹಿಂದಿಯಲ್ಲಿ ದೃಶ್ಯಂ 2 ಯಶಸ್ಸು ಕಂಡಿತು. ಈ ಬೆನ್ನಲ್ಲೇ ನಾವು ಇಂಗ್ಲಿಷ್ ಸೇರಿದಂತೆ ಎಲ್ಲಾ ಭಾಷೆಗಳ ರಿಮೇಕ್ ಹಕ್ಕನ್ನು ಪಡೆದಿದ್ದೇವೆ. ಸದ್ಯ ನಾವು ಕೊರಿಯನ್, ಜಪಾನೀಸ್ ಹಾಗೂ ಹಾಲಿವುಡ್​​ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುವ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ’ ಎಂದು ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾಷನಲ್ ತಿಳಿಸಿದೆ.

ಮೂಲ ಚಿತ್ರದಲ್ಲಿ ಮೋಹನ್​​ಲಾಲ್, ಜೀತು ಜೊಸೆಫ್​, ಮೀನಾ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ಜೀತು ಜೊಸೆಫ್ ನಿರ್ದೇಶನ ಮಾಡಿದ್ದರು. ಕಿರುಕುಳ ಕೊಡುತ್ತಿರುವ ವ್ಯಕ್ತಿಯನ್ನು ಕಥಾನಾಯಕನ ಕುಟುಂಬದವರು ಹತ್ಯೆ ಮಾಡುತ್ತಾರೆ. ಆ ಹೆಣವನ್ನು ನಿರ್ಮಾಣ ಆಗುತ್ತಿರುವ ಪೊಲೀಸ್ ಠಾಣೆ ಒಳಗೆ ಹುಗಿದು ಹಾಕುತ್ತಾನೆ. ಈ ಪ್ರಕರಣದಿಂದ ಆತ ಹೇಗೆ ತಪ್ಪಿಸಿಕೊಳ್ಳುತ್ತಾನೆ ಅನ್ನೋದು ಸಿನಿಮಾದ ಕಥೆ.

‘ದೃಶ್ಯಂ 2’ ಚಿತ್ರದಲ್ಲಿ ಪೊಲೀಸ್ ಠಾಣೆ ಅಡಿಯಲ್ಲಿ ಮೂಳೆಗಳು ಇವೆ ಎಂಬ ವಿಚಾರ ರಿವೀಲ್ ಆಗುತ್ತದೆ. ಇದರಿಂದಲೂ ಕಥಾನಾಯಕ ತಪ್ಪಿಸಿಕೊಳ್ಳುತ್ತಾನೆ. ಅದು ‘ದೃಶ್ಯಂ 2’ನ ಸಸ್ಪೆನ್ಸ್​. ಕನ್ನಡದಲ್ಲಿ ರವಿಚಂದ್ರನ್ ಅವರು ಮುಖ್ಯ ಪಾತ್ರ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್