AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಷ್, ಕೊರಿಯನ್, ಚೈನೀಸ್​ ಸೇರಿ ಹಲವು ಭಾಷೆಗಳಿಗೆ ರಿಮೇಕ್ ಆಗಲಿದೆ ‘ದೃಶ್ಯಂ’ ಸಿನಿಮಾ

ಮೂಲ ಚಿತ್ರದಲ್ಲಿ ಮೋಹನ್​​ಲಾಲ್, ಜೀತು ಜೊಸೆಫ್​, ಮೀನಾ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ಜೀತು ಜೊಸೆಫ್ ನಿರ್ದೇಶನ ಮಾಡಿದ್ದರು.

ಇಂಗ್ಲಿಷ್, ಕೊರಿಯನ್, ಚೈನೀಸ್​ ಸೇರಿ ಹಲವು ಭಾಷೆಗಳಿಗೆ ರಿಮೇಕ್ ಆಗಲಿದೆ ‘ದೃಶ್ಯಂ’ ಸಿನಿಮಾ
ದೃಶ್ಯಂ 2 ಚಿತ್ರದಲ್ಲಿ ಮೋಹನ್​ಲಾಲ್
ರಾಜೇಶ್ ದುಗ್ಗುಮನೆ
|

Updated on: Feb 09, 2023 | 7:14 AM

Share

ಮಲಯಾಳಂನ ‘ದೃಶ್ಯಂ’ (Drishyam) ಹಾಗೂ ‘ದೃಶ್ಯಂ 2’ ಸಿನಿಮಾಗಳು ಸೂಪರ್ ಹಿಟ್ ಆದವು. ಕನ್ನಡ, ಹಿಂದಿ ಮೊದಲಾದ ಭಾಷೆಗಳಿಗೆ ಈ ಸಿನಿಮಾನ ರಿಮೇಕ್ ಮಾಡಲಾಯಿತು. ಅಲ್ಲಿಯೂ ಸಿನಿಮಾ ಹಿಟ್ ಆದವು. ಹಿಂದಿಯಲ್ಲಿ ಈ ಚಿತ್ರವನ್ನು ರಿಮೇಕ್ ಮಾಡುವ ಹಕ್ಕನ್ನು ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾಷನಲ್ ಪಡೆದುಕೊಂಡಿತ್ತು. ಈಗ ಇವರು ವಿದೇಶಿ ಭಾಷೆಗಳ ರಿಮೇಕ್ ಹಕ್ಕನ್ನು ಪಡೆದಿದ್ದಾರೆ. ಈ ಮೂಲಕ ಚೈನೀಸ್ (Chinees) ಮೊದಲಾದ ಭಾಷೆಗಳಿಗೆ ಈ ಸಿನಿಮಾನ ರಿಮೇಕ್ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾನಲ್ ಕಡೆಯಿಂದಲೇ ಮಾಹಿತಿ ಸಿಕ್ಕಿದೆ. ‘ಹಿಂದಿಯಲ್ಲಿ ದೃಶ್ಯಂ 2 ಯಶಸ್ಸು ಕಂಡಿತು. ಈ ಬೆನ್ನಲ್ಲೇ ನಾವು ಇಂಗ್ಲಿಷ್ ಸೇರಿದಂತೆ ಎಲ್ಲಾ ಭಾಷೆಗಳ ರಿಮೇಕ್ ಹಕ್ಕನ್ನು ಪಡೆದಿದ್ದೇವೆ. ಸದ್ಯ ನಾವು ಕೊರಿಯನ್, ಜಪಾನೀಸ್ ಹಾಗೂ ಹಾಲಿವುಡ್​​ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುವ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ’ ಎಂದು ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾಷನಲ್ ತಿಳಿಸಿದೆ.

ಮೂಲ ಚಿತ್ರದಲ್ಲಿ ಮೋಹನ್​​ಲಾಲ್, ಜೀತು ಜೊಸೆಫ್​, ಮೀನಾ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ಜೀತು ಜೊಸೆಫ್ ನಿರ್ದೇಶನ ಮಾಡಿದ್ದರು. ಕಿರುಕುಳ ಕೊಡುತ್ತಿರುವ ವ್ಯಕ್ತಿಯನ್ನು ಕಥಾನಾಯಕನ ಕುಟುಂಬದವರು ಹತ್ಯೆ ಮಾಡುತ್ತಾರೆ. ಆ ಹೆಣವನ್ನು ನಿರ್ಮಾಣ ಆಗುತ್ತಿರುವ ಪೊಲೀಸ್ ಠಾಣೆ ಒಳಗೆ ಹುಗಿದು ಹಾಕುತ್ತಾನೆ. ಈ ಪ್ರಕರಣದಿಂದ ಆತ ಹೇಗೆ ತಪ್ಪಿಸಿಕೊಳ್ಳುತ್ತಾನೆ ಅನ್ನೋದು ಸಿನಿಮಾದ ಕಥೆ.

‘ದೃಶ್ಯಂ 2’ ಚಿತ್ರದಲ್ಲಿ ಪೊಲೀಸ್ ಠಾಣೆ ಅಡಿಯಲ್ಲಿ ಮೂಳೆಗಳು ಇವೆ ಎಂಬ ವಿಚಾರ ರಿವೀಲ್ ಆಗುತ್ತದೆ. ಇದರಿಂದಲೂ ಕಥಾನಾಯಕ ತಪ್ಪಿಸಿಕೊಳ್ಳುತ್ತಾನೆ. ಅದು ‘ದೃಶ್ಯಂ 2’ನ ಸಸ್ಪೆನ್ಸ್​. ಕನ್ನಡದಲ್ಲಿ ರವಿಚಂದ್ರನ್ ಅವರು ಮುಖ್ಯ ಪಾತ್ರ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ