AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಷ್, ಕೊರಿಯನ್, ಚೈನೀಸ್​ ಸೇರಿ ಹಲವು ಭಾಷೆಗಳಿಗೆ ರಿಮೇಕ್ ಆಗಲಿದೆ ‘ದೃಶ್ಯಂ’ ಸಿನಿಮಾ

ಮೂಲ ಚಿತ್ರದಲ್ಲಿ ಮೋಹನ್​​ಲಾಲ್, ಜೀತು ಜೊಸೆಫ್​, ಮೀನಾ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ಜೀತು ಜೊಸೆಫ್ ನಿರ್ದೇಶನ ಮಾಡಿದ್ದರು.

ಇಂಗ್ಲಿಷ್, ಕೊರಿಯನ್, ಚೈನೀಸ್​ ಸೇರಿ ಹಲವು ಭಾಷೆಗಳಿಗೆ ರಿಮೇಕ್ ಆಗಲಿದೆ ‘ದೃಶ್ಯಂ’ ಸಿನಿಮಾ
ದೃಶ್ಯಂ 2 ಚಿತ್ರದಲ್ಲಿ ಮೋಹನ್​ಲಾಲ್
ರಾಜೇಶ್ ದುಗ್ಗುಮನೆ
|

Updated on: Feb 09, 2023 | 7:14 AM

Share

ಮಲಯಾಳಂನ ‘ದೃಶ್ಯಂ’ (Drishyam) ಹಾಗೂ ‘ದೃಶ್ಯಂ 2’ ಸಿನಿಮಾಗಳು ಸೂಪರ್ ಹಿಟ್ ಆದವು. ಕನ್ನಡ, ಹಿಂದಿ ಮೊದಲಾದ ಭಾಷೆಗಳಿಗೆ ಈ ಸಿನಿಮಾನ ರಿಮೇಕ್ ಮಾಡಲಾಯಿತು. ಅಲ್ಲಿಯೂ ಸಿನಿಮಾ ಹಿಟ್ ಆದವು. ಹಿಂದಿಯಲ್ಲಿ ಈ ಚಿತ್ರವನ್ನು ರಿಮೇಕ್ ಮಾಡುವ ಹಕ್ಕನ್ನು ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾಷನಲ್ ಪಡೆದುಕೊಂಡಿತ್ತು. ಈಗ ಇವರು ವಿದೇಶಿ ಭಾಷೆಗಳ ರಿಮೇಕ್ ಹಕ್ಕನ್ನು ಪಡೆದಿದ್ದಾರೆ. ಈ ಮೂಲಕ ಚೈನೀಸ್ (Chinees) ಮೊದಲಾದ ಭಾಷೆಗಳಿಗೆ ಈ ಸಿನಿಮಾನ ರಿಮೇಕ್ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾನಲ್ ಕಡೆಯಿಂದಲೇ ಮಾಹಿತಿ ಸಿಕ್ಕಿದೆ. ‘ಹಿಂದಿಯಲ್ಲಿ ದೃಶ್ಯಂ 2 ಯಶಸ್ಸು ಕಂಡಿತು. ಈ ಬೆನ್ನಲ್ಲೇ ನಾವು ಇಂಗ್ಲಿಷ್ ಸೇರಿದಂತೆ ಎಲ್ಲಾ ಭಾಷೆಗಳ ರಿಮೇಕ್ ಹಕ್ಕನ್ನು ಪಡೆದಿದ್ದೇವೆ. ಸದ್ಯ ನಾವು ಕೊರಿಯನ್, ಜಪಾನೀಸ್ ಹಾಗೂ ಹಾಲಿವುಡ್​​ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುವ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ’ ಎಂದು ಪನೋರಮ ಸ್ಟುಡಿಯೋಸ್ ಇಂಟರ್​ನ್ಯಾಷನಲ್ ತಿಳಿಸಿದೆ.

ಮೂಲ ಚಿತ್ರದಲ್ಲಿ ಮೋಹನ್​​ಲಾಲ್, ಜೀತು ಜೊಸೆಫ್​, ಮೀನಾ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ಜೀತು ಜೊಸೆಫ್ ನಿರ್ದೇಶನ ಮಾಡಿದ್ದರು. ಕಿರುಕುಳ ಕೊಡುತ್ತಿರುವ ವ್ಯಕ್ತಿಯನ್ನು ಕಥಾನಾಯಕನ ಕುಟುಂಬದವರು ಹತ್ಯೆ ಮಾಡುತ್ತಾರೆ. ಆ ಹೆಣವನ್ನು ನಿರ್ಮಾಣ ಆಗುತ್ತಿರುವ ಪೊಲೀಸ್ ಠಾಣೆ ಒಳಗೆ ಹುಗಿದು ಹಾಕುತ್ತಾನೆ. ಈ ಪ್ರಕರಣದಿಂದ ಆತ ಹೇಗೆ ತಪ್ಪಿಸಿಕೊಳ್ಳುತ್ತಾನೆ ಅನ್ನೋದು ಸಿನಿಮಾದ ಕಥೆ.

‘ದೃಶ್ಯಂ 2’ ಚಿತ್ರದಲ್ಲಿ ಪೊಲೀಸ್ ಠಾಣೆ ಅಡಿಯಲ್ಲಿ ಮೂಳೆಗಳು ಇವೆ ಎಂಬ ವಿಚಾರ ರಿವೀಲ್ ಆಗುತ್ತದೆ. ಇದರಿಂದಲೂ ಕಥಾನಾಯಕ ತಪ್ಪಿಸಿಕೊಳ್ಳುತ್ತಾನೆ. ಅದು ‘ದೃಶ್ಯಂ 2’ನ ಸಸ್ಪೆನ್ಸ್​. ಕನ್ನಡದಲ್ಲಿ ರವಿಚಂದ್ರನ್ ಅವರು ಮುಖ್ಯ ಪಾತ್ರ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!