AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಿ ನಟನೆಯ ‘ದಸರಾ’ ತಂಡಕ್ಕೆ ಬಂಪರ್ ಗಿಫ್ಟ್​; ಸಿಕ್ತು ಬಿಎಂಡಬ್ಲ್ಯೂ ಕಾರ್, ಚಿನ್ನದ ನಾಣ್ಯ

Dasara Movie Collection: ‘ದಸರಾ’ ಸಿನಿಮಾ ರಾಮ ನವಮಿ ಪ್ರಯುಕ್ತ ಮಾರ್ಚ್ 30ರಂದು ರಿಲೀಸ್ ಆಯಿತು. ಚಿತ್ರಕ್ಕೆ ರಾಮನ ಆಶೀರ್ವಾದ ಸಿಕ್ಕಿದೆ. ಸಿನಿಮಾ ಎಲ್ಲ ಕಡೆಗಳಲ್ಲಿ ಅಬ್ಬರಿಸುತ್ತಿದೆ.

ನಾನಿ ನಟನೆಯ ‘ದಸರಾ’ ತಂಡಕ್ಕೆ ಬಂಪರ್ ಗಿಫ್ಟ್​; ಸಿಕ್ತು ಬಿಎಂಡಬ್ಲ್ಯೂ ಕಾರ್, ಚಿನ್ನದ ನಾಣ್ಯ
ನಾನಿ
Follow us
ರಾಜೇಶ್ ದುಗ್ಗುಮನೆ
|

Updated on:Apr 04, 2023 | 7:55 AM

ನಾನಿ ನಟನೆಯ ‘ದಸರಾ’ ಸಿನಿಮಾದ (Dasara Movie) ಕಲೆಕ್ಷನ್ ನೋಡಿ ಅನೇಕರು ಅಚ್ಚರಿಗೊಂಡಿದ್ದಾರೆ. ಮಹೇಶ್ ಬಾಬು, ಅಲ್ಲು ಅರ್ಜುನ್​, ರಾಮ್​ ಚರಣ್ (Ram Charan) ಮೊದಲಾದ ಸ್ಟಾರ್ ಹೀರೋಗಳ ಸಿನಿಮಾ ರೀತಿಯಲ್ಲೇ ಈ ಚಿತ್ರ ಕಲೆಕ್ಷನ್ ಮಾಡುತ್ತಿದೆ. ರೊಮ್ಯಾಂಟಿಕ್​, ಕಾಮಿಡಿ ಸಿನಿಮಾಗಳನ್ನು ಮಾಡಿ ಫೇಮಸ್ ಆದ ನಾನಿ ಹೊಸ ಪ್ರಯತ್ನಕ್ಕೆ ಮುಂದಾದರು. ಈ ಪ್ರಯತ್ನ ಯಶಸ್ಸು ಕೊಟ್ಟಿದೆ. ಸಾಕಷ್ಟು ಶ್ರಮ ಹಾಕಿ ಮಾಡಿದ ಸಿನಿಮಾ ‘ದಸರಾ’ ಹಿಟ್ ಆಗಿದೆ. ನಾಲ್ಕೇ ದಿನಕ್ಕೆ ಚಿತ್ರದ ಗಳಿಕೆ 87 ಕೋಟಿ ರೂಪಾಯಿ ದಾಟಿದೆ. ಇದು ಸಿನಿಮಾ ತಂಡದ ಖುಷಿ ಹೆಚ್ಚಿಸಿದೆ. ಇದೇ ಖುಷಿಯಲ್ಲಿ ನಿರ್ಮಾಪಕರು ತಂಡದವರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ.

‘ದಸರಾ’ ಸಿನಿಮಾ ರಾಮ ನವಮಿ ಪ್ರಯುಕ್ತ ಮಾರ್ಚ್ 30ರಂದು ರಿಲೀಸ್ ಆಯಿತು. ಚಿತ್ರಕ್ಕೆ ರಾಮನ ಆಶೀರ್ವಾದ ಸಿಕ್ಕಿದೆ. ಸಿನಿಮಾ ಎಲ್ಲ ಕಡೆಗಳಲ್ಲಿ ಅಬ್ಬರಿಸುತ್ತಿದೆ. ಸಿನಿಮಾದ ಮೇಕಿಂಗ್ ಹಾಗೂ ನಾನಿ ಆ್ಯಕ್ಷನ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ಚಿತ್ರಕ್ಕೆ ಬಾಯಿ ಮಾತಿನ ಪ್ರಚಾರ ಕೂಡ ಜೋರಾಗಿ ಸಿಗುತ್ತಿದೆ. ಈ ಎಲ್ಲ ಕಾರಣದಿಂದ ಜನರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ವೀಕೆಂಡ್​ನಲ್ಲಿ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗಿದೆ.

ಇದನ್ನೂ ಓದಿ: ನಾಲ್ಕನೇ ದಿನವೂ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ನಾನಿಯ ದಸರಾ

ಚಿತ್ರದ ನಿರ್ಮಾಪಕ ಸುಧಾಕರ್ ಚೆರಕೂರಿ ಅವರು ಸುಮಾರು 80 ಲಕ್ಷ ರೂಪಾಯಿ ಬೆಲೆಯ ಬಿಎಂಡಬ್ಲ್ಯೂ ಕಾರನ್ನು ‘ದಸರಾ’ ನಿರ್ದೇಶಕ ಶ್ರೀಕಾಂತ್ ಒಡೆಲಾಗೆ ಗಿಫ್ಟ್ ನೀಡಿದ್ದಾರೆ. ಪ್ರಮುಖ ತಂತ್ರಜ್ಞರಿಗೆ 10 ಗ್ರಾಂ ಚಿನ್ನದ ಗಟ್ಟಿಯನ್ನು ನೀಡಿದ್ದಾರೆ. ಇದರಿಂದ ಚಿತ್ರದ ತಾಂತ್ರಿಕ ವರ್ಗ ಸಖತ್ ಖುಷಿಪಟ್ಟಿದೆ. ನಿರ್ಮಾಪಕ ಸುಧಾಕರ್ ಅವರ ನಿರ್ಧಾರದ ಬಗ್ಗೆ ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ. ಉಡುಗೊರೆ ಸ್ವೀಕರಿಸಲು ನಿರ್ದೇಶಕರು ಹಾಗೂ ತಾಂತ್ರಿಕ ವರ್ಗ ಅರ್ಹವಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಅಬ್ಬರದ ಓಪನಿಂಗ್ ಪಡೆದ ನಾನಿ ನಟನೆಯ ‘ದಸರಾ’; ಆದರೂ, ‘ಕಬ್ಜ’ ದಾಖಲೆ ಮುರಿಯಲಿಲ್ಲ

ಮಾರ್ಚ್ 30 ರಂದು ‘ದಸರಾ’ ಬಿಡುಗಡೆ ಆಯಿತು. ರಿಲೀಸ್​ಗೂ ಮೊದಲೇ ಸಿನಿಮಾದ ಟ್ರೇಲರ್ ಹೈಪ್ ಸೃಷ್ಟಿ ಮಾಡಿತ್ತು. ಇದರ ಜೊತೆಗೆ ನಾನಿ ಅಬ್ಬರದ ಪ್ರಚಾರ ಮಾಡಿದರು. ಮೊದಲ ದಿನ ಸಿನಿಮಾ 38 ಕೋಟಿ ರೂಪಾಯಿ ಗಳಿಸಿ ಭರ್ಜರಿ ಓಪನಿಂಗ್ ಪಡೆದುಕೊಂಡಿತು. ಅದಾದ ಬಳಿಕ ಎರಡನೇ ದಿನ 15 ಕೋಟಿ ರೂಪಾಯಿಗೂ ಹೆಚ್ಚು ಹಣ ಗಳಿಸಿ ತನ್ನ ಓಟ ಮುಂದುವರಿಸಿತು. ನಾಲ್ಕನೇ ದಿನದ ಅಂತ್ಯಕ್ಕೆ ಸಿನಿಮಾ ವಿಶ್ವದಾದ್ಯಂತ 87 ಕೋಟಿ ರೂಪಾಯಿ ಗಳಿಸಿದೆ. ಸೋಮವಾರ (ಏಪ್ರಿಲ್ 3) ಚಿತ್ರದ ಗಳಿಕೆ ಎಷ್ಟಾಗಲಿದೆ ಅನ್ನೋದು ಸದ್ಯದ ಕುತೂಹಲ. ಆಂಧ್ರ-ತೆಲಂಗಾಣ ಮಾತ್ರವಲ್ಲದೆ ತಮಿಳುನಾಡು, ಕರ್ನಾಟಕದಲ್ಲೂ ಚಿತ್ರಕ್ಕೆ ಉತ್ತಮ ಗಳಿಕೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Tue, 4 April 23

ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ