AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಪೋಸಾನಿ ಕೃಷ್ಣ ಮುರಳಿ ಬಂಧನ, ಪವನ್ ಕಲ್ಯಾಣ್ ಕೈವಾಡ?

Posani Krishna Murali: ತೆಲುಗು ಚಿತ್ರರಂಗದ ಜನಪ್ರಿಯ ಪೋಷಕ ನಟ, ಚಿತ್ರಕತೆಗಾರ ಪೋಸಾನಿ ಕೃಷ್ಣ ಮುರಳಿಯನ್ನು ಆಂಧ್ರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಡಿಸಿಎಂ ಪವನ್ ಕಲ್ಯಾಣ್, ಸಿಎಂ ಚಂದ್ರಬಾಬು ನಾಯ್ಡು ಇನ್ನೂ ಕೆಲ ನಾಯಕರ ವಿರುದ್ಧ ಕೀಳು ಹೇಳಿಕೆಗಳನ್ನು ಪೋಸಾನಿ ಕೃಷ್ಣ ಮುರಳಿ ನೀಡಿದ್ದರು. ಜಾತಿ ನಿಂದನೆ ಪ್ರಕರಣವನ್ನು ಸಹ ನಟನ ವಿರುದ್ಧ ಹೇರಲಾಗಿದೆ.

ನಟ ಪೋಸಾನಿ ಕೃಷ್ಣ ಮುರಳಿ ಬಂಧನ, ಪವನ್ ಕಲ್ಯಾಣ್ ಕೈವಾಡ?
Pawan Kalyan
ಮಂಜುನಾಥ ಸಿ.
|

Updated on: Feb 27, 2025 | 10:50 AM

Share

ಜನಪ್ರಿಯ ತೆಲುಗು ನಟ ನಟ ಪೋಸಾನಿ ಕೃಷ್ಣ ಮುರಳಿಯನ್ನು ಆಂಧ್ರ ಪ್ರದೇಶ ಪೊಲೀಸರು ನಿನ್ನೆ (ಫೆಬ್ರವರಿ 26) ರಾತ್ರಿ ಅವರ ನಿವಾಸದಿಂದ ಬಂಧಿಸಿ ಕರೆದೊಯ್ದಿದ್ದಾರೆ. ಪೋಸಾನಿ ಕೃಷ್ಣ ಮುರಳಿ, ತೆಲುಗು ಚಿತ್ರರಂಗದ ಜನಪ್ರಿಯ ನಟರಾಗಿರುವ ಜೊತೆಗೆ ವೈಸಿಆರ್ ಪಕ್ಷದ ಮುಖಂಡರೂ ಆಗಿದ್ದಾರೆ. ಕೃಷ್ಣ ಮುರಳಿಯನ್ನು ಪವನ್ ಕಲ್ಯಾಣ್ ಸೇರಿದಂತೆ ಇತರೆ ಕೆಲ ನಾಯಕರ ಬಗ್ಗೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಂಧನ ಮಾಡಲಾಗಿದೆ.

ಪೋಸಾನಿ ಕೃಷ್ಣ ಮುರಳಿ ಈ ಹಿಂದೆ ಹಲವು ಬಾರಿ ನಟ ಪವನ್ ಕಲ್ಯಾಣ್ ಬಗ್ಗೆ ಅತ್ಯಂತ ನೀಚವಾಗಿ ಮಾತನಾಡಿದ್ದರು. ಪವನ್ ಕಲ್ಯಾಣ್ ಪತ್ನಿಯ ಬಗ್ಗೆಯೂ ಬಹಳ ನೀಚವಾಗಿ ಮಾತನಾಡಿದ್ದರು. ಪವನ್ ಕಲ್ಯಾಣ್ ಪತ್ನಿಗೆ ಕೆಲಸದವರ ಜೊತೆ ಅಕ್ರಮ ಸಂಬಂಧ ಇದೆ, ಆಕೆ ವೇಶ್ಯೆ ಎಂದೆಲ್ಲ ಮಾಧ್ಯಮಗಳ ಮುಂದೆ ಬಾಯಿಗೆ ಬಂದಂತೆ ಮುರಳಿ ಮಾತನಾಡಿದ್ದರು. ಆಗೆಲ್ಲ ಜನಸೇನಾ ಕಾರ್ಯಕರ್ತರು ಮುರಳಿ ವಿರುದ್ಧ ದಾಳಿಗಳನ್ನು ಸಹ ಮಾಡಿದ್ದರು. ಇತ್ತೀಚೆಗೆ ಸಹ ಮುರಳಿ, ಪವನ್ ವಿರುದ್ಧ ವಾಗ್ದಾಳಿ ಮಾಡಿದ್ದರು ಎನ್ನಲಾಗುತ್ತಿದೆ.

ಹೈದರಾಬಾದ್​ನ ಯೆಲ್ಲರೆಡ್ಡಿ ಗುಡಾನಲ್ಲಿನ ನ್ಯೂ ಸೈನ್ಸ್ ಕಾಲೊನಿಯಲ್ಲಿ ವಾಸವಿರುವ ಮುರಳಿ ಮನೆಗೆ ಫೆಬ್ರವರಿ 26ರ ರಾತ್ರಿ ದಾಳಿ ನಡೆಸಿದ ಅನ್ನಮಯ ಜಿಲ್ಲೆ ಎಸ್​ಪಿ ಬಿ ಕೃಷ್ಣ ರಾವ್, ಮುರಳಿಯವರನ್ನು ಬಂಧಿಸಿದ್ದಾರೆ. ಈ ವೇಳೆ ನಟ ಮುರಳಿ, ಪೊಲೀಸರೊಟ್ಟಿಗೆ ವಾಗ್ವಾದ ಸಹ ಮಾಡಿದ್ದಾರೆ. ‘ನಾನು ಬರುವುದಿಲ್ಲ, ನನಗೆ ಆಪರೇಷನ್ ಆಗಿದೆ. ಚಿಕಿತ್ಸೆ ಪಡೆದುಕೊಂಡು ಬರುತ್ತೇನೆ. ಆಂಧ್ರ ಪೊಲೀಸರು ಹೈದರಾಬಾದ್​ಗೆ ಬಂದು ಏಕೆ ಬಂಧಿಸುತ್ತಿದ್ದೀರಿ?’ ಎಂದೆಲ್ಲ ಪ್ರಶ್ನೆ ಮಾಡಿದ್ದಾರೆ. ಆದರೆ ಮುರಳಿ ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿದ ಪೊಲೀಸ್ ಅಧಿಕಾರಿ, ಮುರಳಿಯವರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ:ತಮ್ಮದೇ ಸಿನಿಮಾ ಸೀನ್ ವಿವರಿಸಿದ ಪವನ್ ಕಲ್ಯಾಣ್, ನಕ್ಕು ಸುಸ್ತಾದ ಸಚಿವರು

ಮುರಳಿ ಬಂಧನದ ಬಳಿಕ ಅವರ ಪತ್ನಿಗೆ ನೀಡಿರುವ ನೊಟೀಸ್​ನ ಪ್ರಕಾರ, ಮುರಳಿಯವರ ಮೇಲೆ ಬಿಎನ್​ಎಸ್ ಸೆಕ್ಷನ್ 196, 111, ಬಿಎನ್​ಎಸ್​ಎಸ್ 47 (1), (2) ಪ್ರಕರಣಗಳನ್ನು ದಾಖಲಿಸಲಾಗಿದೆ. ‘ಆರೋಪಿಯ ಮೇಲಿನ ಆರೋಪಗಳು ಜಾಮೀನುರಹಿತವಾಗಿದ್ದು, ಆರೋಪಿಯನ್ನು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗುವುದು’ ಎಂದಿದೆ.

ಕೆಲ ದಿನಗಳ ಹಿಂದಷ್ಟೆ ಗನ್ನವರಂ ಮಾಜಿ ಶಾಸಕ, ವೈಎಸ್​ಆರ್​ಸಿ ಪಕ್ಷದ ಮುಖಂಡ ವಲ್ಲಭನೇನಿ ವಂಶಿಯನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಸಹ ಚುನಾವಣೆಗೆ ಮುಂಚೆ ಪವನ್ ಕಲ್ಯಾಣ್, ಚಂದ್ರಬಾಬು ನಾಯ್ಡು ಹಾಗೂ ಇತರೆ ಕೆಲವು ಟಿಡಿಪಿ ನಾಯಕರ ವಿರುದ್ಧ ಅತ್ಯಂತ ಕೀಳು ಭಾಷೆಗಳನ್ನು ಬಳಸಿ ಬೆದರಿಕೆ ಒಡ್ಡಿದ್ದ. ಚುನಾವಣೆ ಪ್ರಚಾರದ ಸಮಯದಲ್ಲಿ ಮಾತನಾಡಿದ್ದ ಪವನ್ ಕಲ್ಯಾಣ್, ಇಂದು ಯಾರು ಯಾರು ನನ್ನ ಬಗ್ಗೆ, ನನ್ನ ಕುಟುಂಬದ ಬಗ್ಗೆ ಗೆಳೆಯರ ಬಗ್ಗೆ ಮಾತನಾಡುತ್ತಿದ್ದೀರೋ ನನಗೆ ಗೊತ್ತಿದೆ, ಅವರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಎಚ್ಚರಿಕೆ ನೀಡಿದ್ದರು. ಅಂತೆಯೇ ಇದೀಗ ಒಬ್ಬೊಬ್ಬರಾಗಿ ಪೊಲೀಸರ ಅತಿಥಿಗಳಾಗುತ್ತಿದ್ದಾರೆ. ಮಾಜಿ ಶಾಸಕ ಕೊಡಲಿ ನಾನಿ, ನಟಿ ರೋಜಾ ಇನ್ನೂ ಕೆಲವರ ಬಂಧನ ಸಹ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ