AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಪೋಸಾನಿ ಕೃಷ್ಣ ಮುರಳಿ ಬಂಧನ, ಪವನ್ ಕಲ್ಯಾಣ್ ಕೈವಾಡ?

Posani Krishna Murali: ತೆಲುಗು ಚಿತ್ರರಂಗದ ಜನಪ್ರಿಯ ಪೋಷಕ ನಟ, ಚಿತ್ರಕತೆಗಾರ ಪೋಸಾನಿ ಕೃಷ್ಣ ಮುರಳಿಯನ್ನು ಆಂಧ್ರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಡಿಸಿಎಂ ಪವನ್ ಕಲ್ಯಾಣ್, ಸಿಎಂ ಚಂದ್ರಬಾಬು ನಾಯ್ಡು ಇನ್ನೂ ಕೆಲ ನಾಯಕರ ವಿರುದ್ಧ ಕೀಳು ಹೇಳಿಕೆಗಳನ್ನು ಪೋಸಾನಿ ಕೃಷ್ಣ ಮುರಳಿ ನೀಡಿದ್ದರು. ಜಾತಿ ನಿಂದನೆ ಪ್ರಕರಣವನ್ನು ಸಹ ನಟನ ವಿರುದ್ಧ ಹೇರಲಾಗಿದೆ.

ನಟ ಪೋಸಾನಿ ಕೃಷ್ಣ ಮುರಳಿ ಬಂಧನ, ಪವನ್ ಕಲ್ಯಾಣ್ ಕೈವಾಡ?
Pawan Kalyan
ಮಂಜುನಾಥ ಸಿ.
|

Updated on: Feb 27, 2025 | 10:50 AM

Share

ಜನಪ್ರಿಯ ತೆಲುಗು ನಟ ನಟ ಪೋಸಾನಿ ಕೃಷ್ಣ ಮುರಳಿಯನ್ನು ಆಂಧ್ರ ಪ್ರದೇಶ ಪೊಲೀಸರು ನಿನ್ನೆ (ಫೆಬ್ರವರಿ 26) ರಾತ್ರಿ ಅವರ ನಿವಾಸದಿಂದ ಬಂಧಿಸಿ ಕರೆದೊಯ್ದಿದ್ದಾರೆ. ಪೋಸಾನಿ ಕೃಷ್ಣ ಮುರಳಿ, ತೆಲುಗು ಚಿತ್ರರಂಗದ ಜನಪ್ರಿಯ ನಟರಾಗಿರುವ ಜೊತೆಗೆ ವೈಸಿಆರ್ ಪಕ್ಷದ ಮುಖಂಡರೂ ಆಗಿದ್ದಾರೆ. ಕೃಷ್ಣ ಮುರಳಿಯನ್ನು ಪವನ್ ಕಲ್ಯಾಣ್ ಸೇರಿದಂತೆ ಇತರೆ ಕೆಲ ನಾಯಕರ ಬಗ್ಗೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಂಧನ ಮಾಡಲಾಗಿದೆ.

ಪೋಸಾನಿ ಕೃಷ್ಣ ಮುರಳಿ ಈ ಹಿಂದೆ ಹಲವು ಬಾರಿ ನಟ ಪವನ್ ಕಲ್ಯಾಣ್ ಬಗ್ಗೆ ಅತ್ಯಂತ ನೀಚವಾಗಿ ಮಾತನಾಡಿದ್ದರು. ಪವನ್ ಕಲ್ಯಾಣ್ ಪತ್ನಿಯ ಬಗ್ಗೆಯೂ ಬಹಳ ನೀಚವಾಗಿ ಮಾತನಾಡಿದ್ದರು. ಪವನ್ ಕಲ್ಯಾಣ್ ಪತ್ನಿಗೆ ಕೆಲಸದವರ ಜೊತೆ ಅಕ್ರಮ ಸಂಬಂಧ ಇದೆ, ಆಕೆ ವೇಶ್ಯೆ ಎಂದೆಲ್ಲ ಮಾಧ್ಯಮಗಳ ಮುಂದೆ ಬಾಯಿಗೆ ಬಂದಂತೆ ಮುರಳಿ ಮಾತನಾಡಿದ್ದರು. ಆಗೆಲ್ಲ ಜನಸೇನಾ ಕಾರ್ಯಕರ್ತರು ಮುರಳಿ ವಿರುದ್ಧ ದಾಳಿಗಳನ್ನು ಸಹ ಮಾಡಿದ್ದರು. ಇತ್ತೀಚೆಗೆ ಸಹ ಮುರಳಿ, ಪವನ್ ವಿರುದ್ಧ ವಾಗ್ದಾಳಿ ಮಾಡಿದ್ದರು ಎನ್ನಲಾಗುತ್ತಿದೆ.

ಹೈದರಾಬಾದ್​ನ ಯೆಲ್ಲರೆಡ್ಡಿ ಗುಡಾನಲ್ಲಿನ ನ್ಯೂ ಸೈನ್ಸ್ ಕಾಲೊನಿಯಲ್ಲಿ ವಾಸವಿರುವ ಮುರಳಿ ಮನೆಗೆ ಫೆಬ್ರವರಿ 26ರ ರಾತ್ರಿ ದಾಳಿ ನಡೆಸಿದ ಅನ್ನಮಯ ಜಿಲ್ಲೆ ಎಸ್​ಪಿ ಬಿ ಕೃಷ್ಣ ರಾವ್, ಮುರಳಿಯವರನ್ನು ಬಂಧಿಸಿದ್ದಾರೆ. ಈ ವೇಳೆ ನಟ ಮುರಳಿ, ಪೊಲೀಸರೊಟ್ಟಿಗೆ ವಾಗ್ವಾದ ಸಹ ಮಾಡಿದ್ದಾರೆ. ‘ನಾನು ಬರುವುದಿಲ್ಲ, ನನಗೆ ಆಪರೇಷನ್ ಆಗಿದೆ. ಚಿಕಿತ್ಸೆ ಪಡೆದುಕೊಂಡು ಬರುತ್ತೇನೆ. ಆಂಧ್ರ ಪೊಲೀಸರು ಹೈದರಾಬಾದ್​ಗೆ ಬಂದು ಏಕೆ ಬಂಧಿಸುತ್ತಿದ್ದೀರಿ?’ ಎಂದೆಲ್ಲ ಪ್ರಶ್ನೆ ಮಾಡಿದ್ದಾರೆ. ಆದರೆ ಮುರಳಿ ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿದ ಪೊಲೀಸ್ ಅಧಿಕಾರಿ, ಮುರಳಿಯವರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ:ತಮ್ಮದೇ ಸಿನಿಮಾ ಸೀನ್ ವಿವರಿಸಿದ ಪವನ್ ಕಲ್ಯಾಣ್, ನಕ್ಕು ಸುಸ್ತಾದ ಸಚಿವರು

ಮುರಳಿ ಬಂಧನದ ಬಳಿಕ ಅವರ ಪತ್ನಿಗೆ ನೀಡಿರುವ ನೊಟೀಸ್​ನ ಪ್ರಕಾರ, ಮುರಳಿಯವರ ಮೇಲೆ ಬಿಎನ್​ಎಸ್ ಸೆಕ್ಷನ್ 196, 111, ಬಿಎನ್​ಎಸ್​ಎಸ್ 47 (1), (2) ಪ್ರಕರಣಗಳನ್ನು ದಾಖಲಿಸಲಾಗಿದೆ. ‘ಆರೋಪಿಯ ಮೇಲಿನ ಆರೋಪಗಳು ಜಾಮೀನುರಹಿತವಾಗಿದ್ದು, ಆರೋಪಿಯನ್ನು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗುವುದು’ ಎಂದಿದೆ.

ಕೆಲ ದಿನಗಳ ಹಿಂದಷ್ಟೆ ಗನ್ನವರಂ ಮಾಜಿ ಶಾಸಕ, ವೈಎಸ್​ಆರ್​ಸಿ ಪಕ್ಷದ ಮುಖಂಡ ವಲ್ಲಭನೇನಿ ವಂಶಿಯನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಸಹ ಚುನಾವಣೆಗೆ ಮುಂಚೆ ಪವನ್ ಕಲ್ಯಾಣ್, ಚಂದ್ರಬಾಬು ನಾಯ್ಡು ಹಾಗೂ ಇತರೆ ಕೆಲವು ಟಿಡಿಪಿ ನಾಯಕರ ವಿರುದ್ಧ ಅತ್ಯಂತ ಕೀಳು ಭಾಷೆಗಳನ್ನು ಬಳಸಿ ಬೆದರಿಕೆ ಒಡ್ಡಿದ್ದ. ಚುನಾವಣೆ ಪ್ರಚಾರದ ಸಮಯದಲ್ಲಿ ಮಾತನಾಡಿದ್ದ ಪವನ್ ಕಲ್ಯಾಣ್, ಇಂದು ಯಾರು ಯಾರು ನನ್ನ ಬಗ್ಗೆ, ನನ್ನ ಕುಟುಂಬದ ಬಗ್ಗೆ ಗೆಳೆಯರ ಬಗ್ಗೆ ಮಾತನಾಡುತ್ತಿದ್ದೀರೋ ನನಗೆ ಗೊತ್ತಿದೆ, ಅವರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಎಚ್ಚರಿಕೆ ನೀಡಿದ್ದರು. ಅಂತೆಯೇ ಇದೀಗ ಒಬ್ಬೊಬ್ಬರಾಗಿ ಪೊಲೀಸರ ಅತಿಥಿಗಳಾಗುತ್ತಿದ್ದಾರೆ. ಮಾಜಿ ಶಾಸಕ ಕೊಡಲಿ ನಾನಿ, ನಟಿ ರೋಜಾ ಇನ್ನೂ ಕೆಲವರ ಬಂಧನ ಸಹ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ