ಶಿವರಾತ್ರಿ ದಿನ ‘ಪ್ರಾಜೆಕ್ಟ್​ ಕೆ’ ರಿಲೀಸ್ ದಿನಾಂಕ ರಿವೀಲ್​; ಪರ್ಫೆಕ್ಟ್ ದಿನ ಎಂದ ಫ್ಯಾನ್ಸ್

Project K Release Date: ಇಂದು (ಫೆಬ್ರವರಿ 18) ಶಿವರಾತ್ರಿ. ಸಾಮಾನ್ಯವಾಗಿ ಹಬ್ಬದ ಸಮಯದಲ್ಲಿ ಚಿತ್ರದ ಪೋಸ್ಟರ್, ಟೈಟಲ್, ಟೀಸರ್ ಹಾಗೂ ಟ್ರೇಲರ್​ಗಳು ರಿಲೀಸ್ ಆಗುತ್ತವೆ. ಈ ವಿಶೇಷ ದಿನದಂದು ‘ಪ್ರಾಜೆಕ್ಟ್​ ಕೆ’ ತಂಡದವರು ರಿಲೀಸ್ ದಿನಾಂಕ ರಿವೀಲ್ ಮಾಡಿದ್ದಾರೆ.

ಶಿವರಾತ್ರಿ ದಿನ ‘ಪ್ರಾಜೆಕ್ಟ್​ ಕೆ’ ರಿಲೀಸ್ ದಿನಾಂಕ ರಿವೀಲ್​; ಪರ್ಫೆಕ್ಟ್ ದಿನ ಎಂದ ಫ್ಯಾನ್ಸ್
ಪ್ರಭಾಸ್
Follow us
|

Updated on: Feb 18, 2023 | 12:40 PM

ಪ್ರಭಾಸ್ (Prabhas) ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಪ್ರಾಜೆಕ್ಟ್​ ಕೆ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ಈವರೆಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಖ್ಯಾತ ನಿರ್ದೇಶಕ ನಾಗ್​ ಅಶ್ವಿನ್​ (Nag Ashwin) ಅವರು ಇದಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸೈನ್ಸ್​ ಫಿಕ್ಷನ್​ ಕಥೆಯನ್ನು ಸಿನಿಮಾ ಹೊಂದಿದೆ. ಈ ಸಿನಿಮಾಗೆ ಇನ್ನೂ ಅಧಿಕೃತವಾಗಿ ಟೈಟಲ್ ಫಿಕ್ಸ್ ಆಗಿಲ್ಲ. ಹೀಗಿರುವಾಗಲೇ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಸಿನಿಮಾ 2024ರಲ್ಲಿ ತೆರೆಗೆ ಬರಲಿದೆ.

ಇಂದು (ಫೆಬ್ರವರಿ 18) ಶಿವರಾತ್ರಿ. ಸಾಮಾನ್ಯವಾಗಿ ಹಬ್ಬದ ಸಮಯದಲ್ಲಿ ಚಿತ್ರದ ಪೋಸ್ಟರ್, ಟೈಟಲ್, ಟೀಸರ್ ಹಾಗೂ ಟ್ರೇಲರ್​ಗಳು ರಿಲೀಸ್ ಆಗುತ್ತವೆ. ಈ ವಿಶೇಷ ದಿನದಂದು ‘ಪ್ರಾಜೆಕ್ಟ್​ ಕೆ’ ತಂಡದವರು ರಿಲೀಸ್ ದಿನಾಂಕ ರಿವೀಲ್ ಮಾಡಿದ್ದಾರೆ. ಸಂಕ್ರಾಂತಿ ಪ್ರಯುಕ್ತ 2024ರ ಜನವರಿ 12ರಂದು ಸಿನಿಮಾ ರಿಲೀಸ್ ಆಗಲಿದೆ. ಸದ್ಯ ಈ ವಿಚಾರ ತಿಳಿದು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸಂಕ್ರಾಂತಿ ಸಮಯದಂದು ಹಲವು ದೊಡ್ಡ ಪ್ರಾಜೆಕ್ಟ್​ಗಳು ತೆರೆಗೆ ಬರುತ್ತವೆ. ಹೀಗಾಗಿ, ‘ಪ್ರಾಜೆಕ್ಟ್ ಕೆ’ ಎದುರು ಯಾವೆಲ್ಲ ಸಿನಿಮಾಗಳು ಸ್ಪರ್ಧೆಗೆ ಇಳಿಯಲಿವೆ ಎಂಬುದನ್ನು ಕಾದು ನೋಡಬೇಕಿದೆ.

ಎರಡು ಪಾರ್ಟ್​​ನಲ್ಲಿ ‘ಪ್ರಾಜೆಕ್ಟ್​ ಕೆ’?

ಇತ್ತೀಚೆಗೆ ಸಿನಿಮಾಗಳು ಎರಡು ಪಾರ್ಟ್​ನಲ್ಲಿ ರಿಲೀಸ್ ಮಾಡುವ ಟ್ರೆಂಡ್ ಜೋರಾಗಿದೆ. ‘ಪ್ರಾಜೆಕ್ಟ್​ ಕೆ’ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ಬರುತ್ತಿದೆ. ಚಿತ್ರದ ಕಥೆ ಬಹಳ ದೊಡ್ಡದಾಗಿದೆ. ಹೀಗಾಗಿ ಅದನ್ನು ಎರಡು ಪಾರ್ಟ್​ಗಳಲ್ಲಿ ತರಲು ನಾಗ್ ಅಶ್ವಿನ್ ನಿರ್ಧರಿಸಿದ್ದಾರೆ.

ಸಲಾರ್-ಆದಿ ಪುರುಷ್ ಚಿತ್ರದ ಬಗ್ಗೆ ನಿರೀಕ್ಷೆ

ಪ್ರಭಾಸ್​ ಅವರು ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ‘ಕೆಜಿಎಫ್’ ಯಶಸ್ಸಿನ ಬಳಿಕ ಪ್ರಶಾಂತ್​ ನೀಲ್​ ಕೈಗೆತ್ತಿಕೊಂಡ ಚಿತ್ರವಾದ್ದರಿಂದ ಹೈಪ್​ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ.

‘ಸಲಾರ್​’ ಚಿತ್ರಕ್ಕಿಂತಲೂ ಮುನ್ನ ‘ಆದಿ ಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ರಾಮಾಯಣದ ಕಥೆಯನ್ನು ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಜೂನ್ 16ರಂದು ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ