AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ ಪ್ರಭಾಸ್; ತಿಂಗಳಿಗೆ ಇದರಿಂದ ಬರುವ ಆದಾಯ ಇಷ್ಟೊಂದಾ?

ಪ್ರಭಾಸ್ ಕೂಡ ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ. ಇದು ಸಾಕಷ್ಟು ಐಷಾರಾಮಿ ಆಗಿದ್ದು, ಇದರಿಂದ ಅವರಿಗೆ ತಿಂಗಳಿಗೆ ಬಹುದೊಡ್ಡ ಹಣ ಬರುತ್ತಿದೆ.

ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ ಪ್ರಭಾಸ್; ತಿಂಗಳಿಗೆ ಇದರಿಂದ ಬರುವ ಆದಾಯ ಇಷ್ಟೊಂದಾ?
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jun 24, 2023 | 8:56 AM

Share

ಪ್ರಭಾಸ್ (Prabhas) ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಫೇಮಸ್ ಆಗಿದ್ದಾರೆ. ‘ಬಾಹುಬಲಿ 2’ ಬಳಿಕ ತೆರೆಗೆ ಬಂದ ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ (Adipurush Movie) ಸಿನಿಮಾಗಳು ಕೆಟ್ಟ ವಿಮರ್ಶೆ ಪಡೆದವು. ಆದರೂ ಪ್ರಭಾಸ್​ಗೆ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಈ ಮಧ್ಯೆ ಅಚ್ಚರಿಯ ವಿಚಾರ ಒಂದು ಹೊರ ಬಿದ್ದಿದೆ. ಪ್ರಭಾಸ್ ಅವರು ದೂರದ ಇಟಲಿಯಲ್ಲಿ ಐಷಾರಾಮಿ ವಿಲ್ಲಾ ಹೊಂದಿದ್ದಾರಂತೆ. ಇದರಿಂದ ಪ್ರಭಾಸ್​ಗೆ ಭರ್ಜರಿ ಬಾಡಿಗೆ ಬರುತ್ತಿದೆ. ಬಾಡಿಗೆಯ ಮೊತ್ತ ಕೇಳಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ.

ಸ್ಟಾರ್ ಹೀರೋಗಳು ಆಗಾಗ ವಿದೇಶ ಪ್ರಯಾಣ ಮಾಡುತ್ತಾರೆ. ಕೆಲ ಹೀರೋಗಳಿಗೆ ಫೇವರಿಟ್ ಜಾಗ ಇರುತ್ತದೆ. ಅಲ್ಲಿ ಪದೇ ಪದೇ ಭೇಟಿ ನೀಡುತ್ತಾರೆ. ಈ ಕಾರಣಕ್ಕೆ ಅಲ್ಲಿ ಮನೆ ಅಥವಾ ವಿಲ್ಲಾ ಖರೀದಿ ಮಾಡಿರುತ್ತಾರೆ. ಅದೇ ರೀತಿ ಪ್ರಭಾಸ್ ಕೂಡ ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ. ಇದು ಸಾಕಷ್ಟು ಐಷಾರಾಮಿ ಆಗಿದ್ದು, ಇದರಿಂದ ಅವರಿಗೆ ತಿಂಗಳಿಗೆ ಬರೋಬ್ಬರಿ 40 ಲಕ್ಷ ರೂಪಾಯಿ ಬಾಡಿಗೆ ಬರುತ್ತದೆ.

ಪ್ರಭಾಸ್ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಪ್ರತಿ ಚಿತ್ರಕ್ಕೆ ದೊಡ್ಡ ಸಂಭಾವನೆ ಪಡೆಯುತ್ತಾರೆ. ತಮ್ಮ ಸೇವಿಂಗ್ಸ್​ನಲ್ಲಿ ಸ್ವಲ್ಪ ಹಣವನ್ನು ಅವರು ಇದರ ಮೇಲೆ ಹೂಡಿಕೆ ಮಾಡಿದ್ದಾರೆ. ಈ ವಿಲ್ಲಾನ ಅವರು ಕೆಲ ವರ್ಷಗಳ ಹಿಂದೆಯೇ ಖರೀದಿ ಮಾಡಿದ್ದರು. ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಾಗ ಅವರು ಇಟಲಿಗೆ ಭೇಟಿ ನೀಡುತ್ತಾರೆ. ಆಗ ಅವರು ಇಲ್ಲಿ ಉಳಿದುಕೊಳ್ಳುತ್ತಾರಂತೆ.

ಇದನ್ನೂ ಓದಿ: ‘ಆದಿಪುರುಷ್’ ಸಿನಿಮಾ ನೋಡಲು 5,500 ಕಿಮೀ ಪ್ರಯಾಣಿಸಿದ ಪ್ರಭಾಸ್ ಮಹಿಳಾ ಅಭಿಮಾನಿ

ಪ್ರಭಾಸ್ ಇಲ್ಲದ ಸಮಯದಲ್ಲಿ ಈ ವಿಲ್ಲಾವನ್ನು ಅಲ್ಲಿಗೆ ಬರುವ ಪ್ರವಾಸಿಗರಿಗೆ ಬಾಡಿಗೆಗೆ ನೀಡಲಾಗುತ್ತದೆ. ಇದಕ್ಕಾಗಿ ಅವರು ದೊಡ್ಡ ಮೊತ್ತದ ಚಾರ್ಜ್ ಮಾಡುತ್ತಾರೆ. ತಿಂಗಳಿಗೆ ಸರಾಸರಿ 40 ಲಕ್ಷ ರೂಪಾಯಿ ಆದಾಯ ಇದರಿಂದ ಬರುತ್ತಿದೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಸದ್ಯ ಪ್ರಭಾಸ್ ಅವರು ‘ಆದಿಪುರುಷ್’ ಸೋಲಿನ ಬೇಸರದಲ್ಲಿದ್ದಾರೆ. ‘ಸಲಾರ್’ ಸಿನಿಮಾ ಸೆಪ್ಟೆಂಬರ್​ನಲ್ಲಿ ತೆರೆಗೆ ಬರುತ್ತಿದ್ದು ಈ ಚಿತ್ರದ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ