Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ ಪ್ರಭಾಸ್; ತಿಂಗಳಿಗೆ ಇದರಿಂದ ಬರುವ ಆದಾಯ ಇಷ್ಟೊಂದಾ?

ಪ್ರಭಾಸ್ ಕೂಡ ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ. ಇದು ಸಾಕಷ್ಟು ಐಷಾರಾಮಿ ಆಗಿದ್ದು, ಇದರಿಂದ ಅವರಿಗೆ ತಿಂಗಳಿಗೆ ಬಹುದೊಡ್ಡ ಹಣ ಬರುತ್ತಿದೆ.

ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ ಪ್ರಭಾಸ್; ತಿಂಗಳಿಗೆ ಇದರಿಂದ ಬರುವ ಆದಾಯ ಇಷ್ಟೊಂದಾ?
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Jun 24, 2023 | 8:56 AM

ಪ್ರಭಾಸ್ (Prabhas) ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಫೇಮಸ್ ಆಗಿದ್ದಾರೆ. ‘ಬಾಹುಬಲಿ 2’ ಬಳಿಕ ತೆರೆಗೆ ಬಂದ ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ (Adipurush Movie) ಸಿನಿಮಾಗಳು ಕೆಟ್ಟ ವಿಮರ್ಶೆ ಪಡೆದವು. ಆದರೂ ಪ್ರಭಾಸ್​ಗೆ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಈ ಮಧ್ಯೆ ಅಚ್ಚರಿಯ ವಿಚಾರ ಒಂದು ಹೊರ ಬಿದ್ದಿದೆ. ಪ್ರಭಾಸ್ ಅವರು ದೂರದ ಇಟಲಿಯಲ್ಲಿ ಐಷಾರಾಮಿ ವಿಲ್ಲಾ ಹೊಂದಿದ್ದಾರಂತೆ. ಇದರಿಂದ ಪ್ರಭಾಸ್​ಗೆ ಭರ್ಜರಿ ಬಾಡಿಗೆ ಬರುತ್ತಿದೆ. ಬಾಡಿಗೆಯ ಮೊತ್ತ ಕೇಳಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ.

ಸ್ಟಾರ್ ಹೀರೋಗಳು ಆಗಾಗ ವಿದೇಶ ಪ್ರಯಾಣ ಮಾಡುತ್ತಾರೆ. ಕೆಲ ಹೀರೋಗಳಿಗೆ ಫೇವರಿಟ್ ಜಾಗ ಇರುತ್ತದೆ. ಅಲ್ಲಿ ಪದೇ ಪದೇ ಭೇಟಿ ನೀಡುತ್ತಾರೆ. ಈ ಕಾರಣಕ್ಕೆ ಅಲ್ಲಿ ಮನೆ ಅಥವಾ ವಿಲ್ಲಾ ಖರೀದಿ ಮಾಡಿರುತ್ತಾರೆ. ಅದೇ ರೀತಿ ಪ್ರಭಾಸ್ ಕೂಡ ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ. ಇದು ಸಾಕಷ್ಟು ಐಷಾರಾಮಿ ಆಗಿದ್ದು, ಇದರಿಂದ ಅವರಿಗೆ ತಿಂಗಳಿಗೆ ಬರೋಬ್ಬರಿ 40 ಲಕ್ಷ ರೂಪಾಯಿ ಬಾಡಿಗೆ ಬರುತ್ತದೆ.

ಪ್ರಭಾಸ್ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಪ್ರತಿ ಚಿತ್ರಕ್ಕೆ ದೊಡ್ಡ ಸಂಭಾವನೆ ಪಡೆಯುತ್ತಾರೆ. ತಮ್ಮ ಸೇವಿಂಗ್ಸ್​ನಲ್ಲಿ ಸ್ವಲ್ಪ ಹಣವನ್ನು ಅವರು ಇದರ ಮೇಲೆ ಹೂಡಿಕೆ ಮಾಡಿದ್ದಾರೆ. ಈ ವಿಲ್ಲಾನ ಅವರು ಕೆಲ ವರ್ಷಗಳ ಹಿಂದೆಯೇ ಖರೀದಿ ಮಾಡಿದ್ದರು. ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಾಗ ಅವರು ಇಟಲಿಗೆ ಭೇಟಿ ನೀಡುತ್ತಾರೆ. ಆಗ ಅವರು ಇಲ್ಲಿ ಉಳಿದುಕೊಳ್ಳುತ್ತಾರಂತೆ.

ಇದನ್ನೂ ಓದಿ: ‘ಆದಿಪುರುಷ್’ ಸಿನಿಮಾ ನೋಡಲು 5,500 ಕಿಮೀ ಪ್ರಯಾಣಿಸಿದ ಪ್ರಭಾಸ್ ಮಹಿಳಾ ಅಭಿಮಾನಿ

ಪ್ರಭಾಸ್ ಇಲ್ಲದ ಸಮಯದಲ್ಲಿ ಈ ವಿಲ್ಲಾವನ್ನು ಅಲ್ಲಿಗೆ ಬರುವ ಪ್ರವಾಸಿಗರಿಗೆ ಬಾಡಿಗೆಗೆ ನೀಡಲಾಗುತ್ತದೆ. ಇದಕ್ಕಾಗಿ ಅವರು ದೊಡ್ಡ ಮೊತ್ತದ ಚಾರ್ಜ್ ಮಾಡುತ್ತಾರೆ. ತಿಂಗಳಿಗೆ ಸರಾಸರಿ 40 ಲಕ್ಷ ರೂಪಾಯಿ ಆದಾಯ ಇದರಿಂದ ಬರುತ್ತಿದೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ಸದ್ಯ ಪ್ರಭಾಸ್ ಅವರು ‘ಆದಿಪುರುಷ್’ ಸೋಲಿನ ಬೇಸರದಲ್ಲಿದ್ದಾರೆ. ‘ಸಲಾರ್’ ಸಿನಿಮಾ ಸೆಪ್ಟೆಂಬರ್​ನಲ್ಲಿ ತೆರೆಗೆ ಬರುತ್ತಿದ್ದು ಈ ಚಿತ್ರದ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ