AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಪ್ರಭಾಸ್ ಫೇವರಿಟ್ ಹೀರೋಯಿನ್ ಯಾರು? ಈ ವಿಡಿಯೋದಲ್ಲಿದೆ ಉತ್ತರ

ನಟ ಪ್ರಭಾಸ್ ‘ಸಲಾರ್’ ಸಿನಿಮಾದ ಮೂಲಕ ಸೆನ್ಸೇಷನಲ್ ಸಕ್ಸಸ್ ಕಂಡಿದ್ದಾರೆ. ಈ ಸಿನಿಮಾ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಪ್ರಭಾಸ್ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅವರ ಹಳೆಯ ವಿಡಿಯೋ ಒಂದು ಈಗ ವೈರಲ್ ಆಗಿದೆ. ಇದರಲ್ಲಿ ಅವರು ತಮ್ಮಿಷ್ಟದ ನಾಯಕಿಯ ಹೆಸರು ಹೇಳಿದ್ದಾರೆ.  

ನಟ ಪ್ರಭಾಸ್ ಫೇವರಿಟ್ ಹೀರೋಯಿನ್ ಯಾರು? ಈ ವಿಡಿಯೋದಲ್ಲಿದೆ ಉತ್ತರ
ಪ್ರಭಾಸ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 14, 2024 | 11:48 AM

Share

ಹಲವು ವರ್ಷಗಳ ನಂತರ ನಟ ಪ್ರಭಾಸ್​ಗೆ (Prabhas) ದೊಡ್ಡ ಗೆಲುವು ಸಿಕ್ಕಿದೆ. ಸತತ ಫ್ಲಾಪ್​​ಗಳಿಂದ ಬೇಸತ್ತಿದ್ದ ಅವರು ‘ಸಲಾರ್’ ಸಿನಿಮಾದ ಮೂಲಕ ಸೆನ್ಸೇಷನಲ್ ಸಕ್ಸಸ್ ಕಂಡಿದ್ದಾರೆ. ‘ಕೆಜಿಎಫ್’ (KGF) ಸರಣಿಯ ಮೂಲಕ ಗೆದ್ದು ಬೀಗಿದ್ದ ನಿರ್ದೇಶಕ ಪ್ರಶಾಂತ್ ನೀಲ್​ಗೆ ‘ಸಲಾರ್’ ಸಿನಿಮಾದಿಂದ ಮತ್ತೆ ಗೆಲುವು ಸಿಕ್ಕಿದೆ. ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಪ್ರಭಾಸ್ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ತಮ್ಮಿಷ್ಟದ ನಾಯಕಿಯ ಹೆಸರು ಹೇಳಿದ್ದಾರೆ.

ಪ್ರತೀ ಹೀರೋಗೆ ತಮ್ಮಿಷ್ಟದ ನಾಯಕಿ ಇರುತ್ತಾರೆ. ಪ್ರಭಾಸ್​ಗೆ ಸಾಯಿ ಪಲ್ಲವಿ ಎಂದರೆ ಸಖತ್ ಇಷ್ಟ. ಅವರ ನಟನೆಯನ್ನು ಪ್ರಭಾಸ್ ಮೆಚ್ಚಿಕೊಂಡಿದ್ದಾರೆ. ಪ್ರಭಾಸ್ ಮಾಡಿದ್ದ ಈ ಕಾಮೆಂಟ್‌ಗಳು ಈಗ ವೈರಲ್ ಆಗಿವೆ. ಸಂದರ್ಶನ ಒಂದರಲ್ಲಿ ಆ್ಯಂಕರ್ ‘ನಿಮಗೆ ಯಾವ ನಾಯಕಿಯ ಅಭಿನಯ ಇಷ್ಟ’ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಪ್ರಭಾಸ್, ‘ಸಾಯಿ ಪಲ್ಲವಿ ಅವರ ಅಭಿನಯ ಇಷ್ಟವಾಗುತ್ತದೆ. ಆದರೆ ನಮ್ಮಿಬ್ಬರಿಗೂ ಎತ್ತರದಲ್ಲಿ ವ್ಯತ್ಯಾಸವಿದೆ’ ಎಂದು ನಗುತ್ತಲೇ ಹೇಳಿದರು ಪ್ರಭಾಸ್.

ಪ್ರಭಾಸ್ ಅವರ ಈ ಕಾಮೆಂಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ನೀವಿಬ್ಬರೂ ಸೇರಿ ಒಂದು ಸಿನಿಮಾ ಮಾಡಬೇಕು’ ಎಂದು ಕೆಲವರು ಹೇಳಿದ್ದಾರೆ. ‘ಅವರ ಮುಂದಿನ ಚಿತ್ರಗಳಿಗೆ ಸಾಯಿ ಪಲ್ಲವಿಯನ್ನು ನಾಯಕಿಯಾಗಿ ಪರಿಗಣಿಸಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಸಾಯಿ ಪಲ್ಲವಿ ಇತ್ತೀಚೆಗೆ ಸಣ್ಣ ಬ್ರೇಕ್ ತೆಗೆದುಕೊಂಡಿದ್ದರು. ಈಗ ಮತ್ತೆ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಗ ಚೈತನ್ಯ ಜೊತೆ ‘ತಾಂಡೇಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿ ಬಗ್ಗೆ ಟ್ವೀಟ್..

View this post on Instagram

A post shared by … (@ajaynavee_offl_)

ಪ್ರಭಾಸ್ ‘ಬಾಹುಬಲಿ 2’ ಬಳಿಕ ಅವರ ಯಾವುದೇ ಸಿನಿಮಾ ಗೆದ್ದಿರಲಿಲ್ಲ. ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ ಚಿತ್ರಗಳು ಸೋತವು. ಇದರಿಂದ ಪ್ರಭಾಸ್ ಫ್ಯಾನ್ಸ್ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಈಗ ‘ಸಲಾರ್’ ಚಿತ್ರದಿಂದ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ಪೃಥ್ವಿರಾಜ್​ ಸುಕುಮಾರನ್, ಶ್ರುತಿ ಹಾಸನ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ಯಾಕೆ ಹೀಗೆ ಆಗಿದ್ದಾರೆ ಪ್ರಭಾಸ್​? ಬಾಡಿದ ಮುಖ ನೋಡಿ ಅಭಿಮಾನಿಗಳಿಗೆ ಚಿಂತೆ

ಪ್ರಭಾಸ್ ಸದ್ಯ ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಇದಲ್ಲದೆ ‘ರಾಜಾ ಸಾಬ್’ ಹಾಗೂ ‘ಸ್ಪಿರಿಟ್’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ವರ್ಷಕ್ಕೆ ಎರಡು ಸಿನಿಮಾ ರಿಲೀಸ್ ಮಾಡೋ ಉದ್ದೇಶ ಇಟ್ಟುಕೊಂಡಿರುವ ಅವರು ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​