Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಪ್ರಚಾರಕ್ಕೆ ಬಳಕೆ ಆಗ್ತಿದ್ಯ ಪ್ರಭಾಸ್ ಮದುವೆ ವಿಚಾರ? ಮೂಡಿತು ಅನುಮಾನ

ವಿಶಾಲ್ ನಟನೆಯ ‘ರತ್ನಮ್’ ಸಿನಿಮಾ ಏಪ್ರಿಲ್ 19ರಂದು ರಿಲೀಸ್ ಆಗಿದೆ. ಹರಿ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ರೀತಿಯಲ್ಲಿ ಮೂಡಿ ಬರಲಿದೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ಹೈದರಾಬಾದ್​ನಲ್ಲಿದ್ದಾರೆ. ಅವರಿಗೆ ಮದುವೆ ಬಗ್ಗೆ ಕೇಳಲಾಗಿದೆ.

Prabhas: ಪ್ರಚಾರಕ್ಕೆ ಬಳಕೆ ಆಗ್ತಿದ್ಯ ಪ್ರಭಾಸ್ ಮದುವೆ ವಿಚಾರ? ಮೂಡಿತು ಅನುಮಾನ
ಪ್ರಭಾಸ್​
Follow us
ರಾಜೇಶ್ ದುಗ್ಗುಮನೆ
|

Updated on: Apr 20, 2024 | 9:40 AM

ಪ್ರಭಾಸ್ (Prabhas) ಅವರು ಟಾಲಿವುಡ್​ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದಾರೆ. ಅವರು ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ ಹೊರತಾಗಿಯೂ ಮದುವೆ ಆಗೋದು ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ಅವರಿಗೆ ಪದೇ ಪದೇ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ. ಆದರೆ, ಇದಕ್ಕೆ ಅವರು ಉತ್ತರಿಸೋ ಗೋಜಿಗೆ ಹೋಗಿಲ್ಲ. ಪ್ರಭಾಸ್ ಅವರ ಮದುವೆ ವಿಚಾರ ಪ್ರಚಾರಕ್ಕೆ ಬಳಕೆ ಆಗುತ್ತಿದೆಯೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಅದಕ್ಕೆ ಕಾರಣವೂ ಇದೆ.

ವಿಶಾಲ್ ನಟನೆಯ ‘ರತ್ನಮ್’ ಸಿನಿಮಾ ಏಪ್ರಿಲ್ 19ರಂದು ರಿಲೀಸ್ ಆಗಿದೆ. ಹರಿ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ರೀತಿಯಲ್ಲಿ ಮೂಡಿ ಬರಲಿದೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ಹೈದರಾಬಾದ್​ನಲ್ಲಿದ್ದಾರೆ. ಅವರಿಗೆ ಮದುವೆ ಬಗ್ಗೆ ಕೇಳಲಾಗಿದೆ.

‘ಸರಿಯಾದ ಸಮಯ ಬಂದಾಗ ನಾನು ಮದುವೆ ಆಗುತ್ತೇನೆ. ಪ್ರಭಾಸ್ ಮದುವೆ ಆದ ಬಳಿಕವೇ ನಾನು ವಿವಾಹ ಆಗೋದು. ಒಂದೊಮ್ಮೆ ನಾನು ಮದುವೆ ಆದರೆ ಪ್ರಭಾಸ್​ಗೆ ಮೊದಲು ಆಮಂತ್ರಣ ಪತ್ರ ನೀಡುತ್ತೇನೆ’ ಎಂದು ವಿಶಾಲ್ ಅವರು ಹೇಳಿಕೊಂಡಿದ್ದಾರೆ. ಈ ಹೇಳಿಕೆ ಸದ್ಯ ಚರ್ಚೆ ಹುಟ್ಟುಹಾಕಿದೆ.

ಯಾವುದೇ ಹೀರೋಗಳಿಗೆ ಮದುವೆ ವಿಚಾರ ತೆಗೆದರೆ ಪ್ರಭಾಸ್ ಅವರ ಮದುವೆ ವಿಚಾರ ಬರುತ್ತದೆ. ಇದನ್ನು ಎಲ್ಲರೂ ಪ್ರಚಾರಕ್ಕೆ ಬಳಕೆ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಕೇಳಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ನಟಿ ನಾಯಕಿ, ಸಿನಿಮಾ ಯಾವುದು? ನಟಿ ಯಾರು?

ಪ್ರಭಾಸ್ ಅವರು ಸದ್ಯ ‘ಸಲಾರ್’ ಸಿನಿಮಾದ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ಹೊಸ ಸಿನಿಮಾ ಕೆಲಸಗಳು ಭರ್ಜರಿಯಾಗಿ ಸಾಗುತ್ತಿವೆ. ‘ಕಲ್ಕಿ 2898 ಎಡಿ’ ಸಿನಿಮಾ ಈ ವರ್ಷ ರಿಲೀಸ್ ಆಗಲಿದೆ. ಮೇ 9ರಂದು ಚಿತ್ರ ಬಿಡುಗಡೆ ಆಗೋ ಸಾಧ್ಯತೆ ಇದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಚುನಾವಣೆ ಸಮಯವಾಗಿರುವುದರಿಂದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಲಿದೆ ಎಂದು ವರದಿ ಆಗಿದೆ. ಸದ್ಯ ಚಿತ್ರತಂಡ ಯಾವುದೇ ಪ್ರಚಾರ ಕಾರ್ಯದಲ್ಲಿ ಭಾಗಿ ಆಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು