AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಆರ್​. ಮಾಧವನ್​ ಇಂಗ್ಲಿಷ್​ ಉಚ್ಚಾರಣೆ ಕೇಳಿದ್ರಾ?; ವೈರಲ್​ ಆಯ್ತು ಹಳೆಯ ವಿಡಿಯೋ

ಮಾಧವನ್​ ಕಾರು ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದರು. ಈ ಜಾಹೀರಾತಿನಲ್ಲಿ ಅವರ ಇಂಗ್ಲಿಷ್​ ಅದ್ಭುತವಾಗಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ.

ನಟ ಆರ್​. ಮಾಧವನ್​ ಇಂಗ್ಲಿಷ್​ ಉಚ್ಚಾರಣೆ ಕೇಳಿದ್ರಾ?; ವೈರಲ್​ ಆಯ್ತು ಹಳೆಯ ವಿಡಿಯೋ
ಮಾಧವನ್
TV9 Web
| Edited By: |

Updated on: Jul 05, 2021 | 6:21 PM

Share

ನಟ ಆರ್​. ಮಾಧವನ್​ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ಜಾಹೀರಾತು ಇಂಡಸ್ಟ್ರಿಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಅವರು ಈ ಮೊದಲು ಸಾಕಷ್ಟು ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಈಗ ಅವರ ಹಳೆಯ ಜಾಹೀರಾತಿನ ವಿಡಿಯೋ ಒಂದು ವೈರಲ್​ ಆಗಿದೆ. ​ಈ ವಿಡಿಯೋದಲ್ಲಿ ಮಾಧವನ್​ ಇಂಗ್ಲಿಷ್​ ಉಚ್ಚಾರಣೆ ಕೇಳಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ.

ಮಾಧವನ್​ ಕಾರು ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದರು. ಈ ಜಾಹೀರಾತಿನಲ್ಲಿ ಅವರ ಇಂಗ್ಲಿಷ್​ ಅದ್ಭುತವಾಗಿದೆ. ಲೇಡಿ ಲವ್​ ಬಗ್ಗೆ ಮಾತನಾಡುವ ಮಾಧವನ್​, ‘ನನ್ನ ಪ್ರಿಯತಮೆ ಡೈಮಂಡ್​ ಅಥವಾ ದೊಡ್ಡ ಮನೆ ಬಗ್ಗೆ ಚಿಂತೆ ನಡೆಸಿಲ್ಲ. ಅವಳು ವಿಶ್ವವನ್ನು ನೋಡಬೇಕು ಎಂದು ಬಯಸಲಿಲ್ಲ. ನಿಖಿಲ್​ ನೀನೆ ನನಗೆ ವಿಶ್ವ ಎಂದಳು. ಲಕ್ಸುರಿ ಕಾರನ್ನು ಖರೀದಿಸಿ ಆಕೆಗೆ ಕೀ ನೀಡಿದರೆ, ‘ನಾನು ನನ್ನ ಈ ಸಣ್ಣಕಾರಿನಲ್ಲೇ ಖುಷಿಯಾಗಿದ್ದೇನೆ’ ಎನ್ನುವುದೇ. ಆಕೆ ಸುಳ್ಳುಗಾರ್ತಿ’ ಎಂದು ಮಾಧವನ್​ ತಮ್ಮ ಅದ್ಭುತ ಇಂಗ್ಲಿಷ್​ ಮೂಲಕ ಜಾಹೀರಾತನ್ನು ಪ್ರಸ್ತುತ ಪಡಿಸಿದ್ದಾರೆ.

ಈ ವಿಡಿಯೋ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ. ಇದು ಬ್ರಿಟಿಷ್​ ಉಚ್ಚಾರಣೆ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಅದ್ಭುತ ಇಂಗ್ಲಿಷ್​ ಆ್ಯಕ್ಸೆಂಟ್​ ಎಂದು ಶ್ಲಾಘಿಸಿದ್ದಾರೆ.

ಮಾಧವನ್​ ಅವರ ಪತ್ನಿ ಸರಿತಾ ಅವರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಕೊವಿಡ್​ನ ಈ ಕಡುಕಷ್ಟದ ಸಂದರ್ಭದಲ್ಲಿ ಶಾಲೆಗಳು ಬಂದ್​ ಆಗಿವೆ. ಹಾಗಾಗಿ, ಸರಿತಾ ಅವರು ಬಡಮಕ್ಕಳಿಗೆ ಆನ್​ಲೈನ್​ ಮೂಲಕ ಪಾಠ ಹೇಳಿಕೊಡುತ್ತಿದ್ದಾರೆ. ಈ ವಿಡಿಯೋವನ್ನು ಮಾಧವನ್​ ಇತ್ತೀಚೆಗೆ ಶೇರ್​ ಮಾಡಿಕೊಂಡಿದ್ದರು. ಪತ್ನಿ ಮಾಡುತ್ತಿರುವ ಈ ಕೆಲಸದ ಮುಂದೆ ತಾವು ಅಸಮರ್ಥ ಎನಿಸುತ್ತಿದೆ ಎಂದು ಹೇಳಿದ್ದರು.

ಏಪ್ರಿಲ್​ನಲ್ಲಿ ಮಾಧವನ್​ ಅವರಿಗೆ ಕೊರೊನಾ ವೈರಸ್​ ಪಾಸಿಟಿವ್​ ಆಗಿತ್ತು. ಈಗ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಮನೆಯಲ್ಲೇ ಇದ್ದಾರೆ. ದೇವರ ದಯೆಯಿಂದ ನಾವೆಲ್ಲ ಈಗ ಸದೃಢ ಮತ್ತು ಸುರಕ್ಷತೆಯಿಂದ ಇದ್ದೇವೆ ಎಂದು ಅವರು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು.

ಸಿನಿಮಾ ವಿಚಾರಕ್ಕೆ ಬರುವುದಾದರೆ ಮಾಧವನ್​ ನಟನೆ ಮತ್ತು ನಿರ್ದೇಶನದ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ ಭಾರಿ ಕೌತುಕ ಮೂಡಿಸಿದೆ. ಟ್ರೇಲರ್​ನಲ್ಲಿ​ ಮಾಧವನ್​ ಅವರ ಕೆಲಸ ಕಂಡು ಎಲ್ಲರೂ ಶಹಭಾಷ್​ ಎಂದಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಸೆಲೆಬ್ರಿಟಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್ ನೋಡಿರುವ ನರೇಂದ್ರ ಮೋದಿ, ಅಮಿತಾಬ್​ ಬಚ್ಚನ್​, ಪ್ರಿಯಾಂಕಾ ಚೋಪ್ರಾ, ಹೃತಿಕ್​ ರೋಷನ್​, ಅಭಿಷೇಕ್​ ಬಚ್ಚನ್​ ಮುಂತಾದವರು ಫಿದಾ ಆಗಿದ್ದಾರೆ.

ಇದನ್ನೂ ಓದಿ: Rocketry Trailer: ದೇಶದ್ರೋಹ ಆರೋಪ ಹೊತ್ತಿದ್ದ ನಂಬಿ ನಾರಾಯಣ್​ ಬಗ್ಗೆ ಮಾಧವನ್​ ಸಿನಿಮಾ! ‘ರಾಕೆಟ್ರಿ’ ಚಿತ್ರದ ರಿಯಲ್​ ಕಥೆ ಏನು?

Madhavan: ಹೆಂಡತಿ ಎದುರು ನಾನು ಅಸಮರ್ಥ; ನಟ ಮಾಧವನ್​ ಬಹಿರಂಗವಾಗಿ ಹೀಗೆ ಹೇಳಲು ಕಾರಣ ಏನು?

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ