AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ

‘ನನಗೂ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನು ಕೂಡ ಬದುಕುತ್ತಿದ್ದೆ. ಮತ್ತೆ ಜನ್ಮತಾಳಿ ಬಂದು ಒಳ್ಳೆಯ ಕೆಲಸ ಮಾಡುತ್ತೇನೆ’ ಎಂದು ಶನಿವಾರ ಫೇಸ್​ಬುಕ್​ನಲ್ಲಿ ರಾಹುಲ್​ ಬರೆದುಕೊಂಡಿದ್ದರು. ಮರುದಿನವೇ ಅವರು ಮೃತರಾದರು.

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ
Actor Rahul Vohra dies due to Coronavirus hours after request Narendra Modi for help
ಮದನ್​ ಕುಮಾರ್​
|

Updated on: May 10, 2021 | 10:41 AM

Share

ಕೊರೊನಾ ವೈರಸ್​ನಿಂದಾಗಿ ಸಾಯುತ್ತಿರುವ ಸೆಲೆಬ್ರಿಟಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರು ಕಲಾವಿದರನ್ನು ಈ ಮಹಾಮಾರಿ ಬಲಿ ತೆಗೆದುಕೊಳ್ಳುತ್ತಿದೆ. ಈಗ ನಟ ರಾಹುಲ್​ ವೋಹ್ರಾ ನಿಧನರಾಗಿದ್ದಾರೆ. ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ (ಮೇ9) ಕೊನೆಯುಸಿರೆಳೆದರು. ಅದಕ್ಕೂ ಒಂದು ದಿನ ಮುಂಚೆ ಅವರು ಉತ್ತಮ ಚಿಕಿತ್ಸೆ ಬೇಕು ಎಂದು ಸೋಶಿಯಲ್​ ಮೀಡಿಯಾ ಮೂಲಕ ನರೇಂದ್ರ ಮೋದಿ ಅವರನ್ನು ಕೈ ಮುಗಿದು ಬೇಡಿಕೊಂಡಿದ್ದರು.

‘ನನಗೂ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನು ಕೂಡ ಬದುಕುತ್ತಿದ್ದೆ. ಮತ್ತೆ ಜನ್ಮತಾಳಿ ಬಂದು ಒಳ್ಳೆಯ ಕೆಲಸ ಮಾಡುತ್ತೇನೆ’ ಎಂದು ಶನಿವಾರ ಫೇಸ್​ಬುಕ್​ನಲ್ಲಿ ರಾಹುಲ್​ ಬರೆದುಕೊಂಡಿದ್ದರು. ತಾವಿರುವ ಆಸ್ಪತ್ರೆಯ ಹೆಸರು, ತಮ್ಮ ವಯಸ್ಸು, ಬೆಡ್ ಸಂಖ್ಯೆ ಮುಂತಾದ ವಿವರಗಳನ್ನು ಈ ಪೋಸ್ಟ್​ನಲ್ಲಿ ಬರೆದು, ದಯವಿಟ್ಟು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್​ ವೋಹ್ರಾ ಟ್ಯಾಗ್​ ಮಾಡಿದ್ದರು. ಅವರು ನಿಧನರಾಗಿರುವ ಸುದ್ದಿಯನ್ನು ನಟ, ನಿರ್ದೇಶಕ, ನಾಟಕಕಾರ ಅರವಿಂದ್​ ಗೌರ್​​ ಖಚಿತ ಪಡಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ರಾಹುಲ್​ ಅವರಿಗೆ ಕೊರೊನಾ ವೈರಸ್​ ತಗುಲಿತ್ತು. ಆ ಬಗ್ಗೆ ಅವರು ಅಸಹಾಯಕತೆಯಿಂದ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ‘ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾಲ್ಕು ದಿನದಿಂದ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ನನಗೆ ಎಲ್ಲಿ ಆಕ್ಸಿಜನ್​ ಬೆಡ್​ ಸಿಗಬಹುದು? ನನ್ನ ಆಕ್ಸಿಜನ್​ ಮಟ್ಟ​ ಕಡಿಮೆ ಆಗುತ್ತಲೇ ಇದೆ. ಇಲ್ಲಿ ನೋಡಿಕೊಳ್ಳಲು ಯಾರೂ ಇಲ್ಲ’ ಎಂದು ರಾಹುಲ್​ ಅಂಗಲಾಚಿದ್ದರು.

ರಾಹುಲ್​ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ. ಸೋನು ಸೂದ್​ ಅವರಿಗೆ ಈಗ ವಿಚಾರ ತಿಳಿದಿದ್ದರೆ ಖಂಡಿತವಾಗಿಯೂ ರಾಹುಲ್​ ಸಾಯುತ್ತಿರಲಿಲ್ಲ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಕಾಲಿವುಡ್​ ನಿರ್ದೇಶಕ ಕೆವಿ ಆನಂದ್​, ರವಿರತ್ನ ಕಾಳಿದಾಸ ಚಿತ್ರದ ನಿರ್ದೇಶಕ ರೇಣುಕಾ ಶರ್ಮಾ, ನಟ ಶಂಕನಾದ ಅರವಿಂದ್​, ಯುವ ನಿರ್ಮಾಪಕ ಡಿ.ಎಸ್​. ಮಂಜುನಾಥ್​ ಸೇರಿದಂತೆ ಅನೇಕರು ಈ ಮಹಾಮಾರಿಗೆ ಬಲಿ ಆಗಿದ್ದಾರೆ.

ಇದನ್ನೂ ಓದಿ:

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್