AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ

‘ನನಗೂ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನು ಕೂಡ ಬದುಕುತ್ತಿದ್ದೆ. ಮತ್ತೆ ಜನ್ಮತಾಳಿ ಬಂದು ಒಳ್ಳೆಯ ಕೆಲಸ ಮಾಡುತ್ತೇನೆ’ ಎಂದು ಶನಿವಾರ ಫೇಸ್​ಬುಕ್​ನಲ್ಲಿ ರಾಹುಲ್​ ಬರೆದುಕೊಂಡಿದ್ದರು. ಮರುದಿನವೇ ಅವರು ಮೃತರಾದರು.

ಆಕ್ಸಿಜನ್​ ಬೇಕು ಎಂದು ಮೋದಿಗೆ ಕೈ ಮುಗಿದು ಬೇಡಿಕೊಂಡಿದ್ದ ನಟ ರಾಹುಲ್​ ಕೊರೊನಾದಿಂದ ನಿಧನ
Actor Rahul Vohra dies due to Coronavirus hours after request Narendra Modi for help
ಮದನ್​ ಕುಮಾರ್​
|

Updated on: May 10, 2021 | 10:41 AM

Share

ಕೊರೊನಾ ವೈರಸ್​ನಿಂದಾಗಿ ಸಾಯುತ್ತಿರುವ ಸೆಲೆಬ್ರಿಟಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರು ಕಲಾವಿದರನ್ನು ಈ ಮಹಾಮಾರಿ ಬಲಿ ತೆಗೆದುಕೊಳ್ಳುತ್ತಿದೆ. ಈಗ ನಟ ರಾಹುಲ್​ ವೋಹ್ರಾ ನಿಧನರಾಗಿದ್ದಾರೆ. ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ (ಮೇ9) ಕೊನೆಯುಸಿರೆಳೆದರು. ಅದಕ್ಕೂ ಒಂದು ದಿನ ಮುಂಚೆ ಅವರು ಉತ್ತಮ ಚಿಕಿತ್ಸೆ ಬೇಕು ಎಂದು ಸೋಶಿಯಲ್​ ಮೀಡಿಯಾ ಮೂಲಕ ನರೇಂದ್ರ ಮೋದಿ ಅವರನ್ನು ಕೈ ಮುಗಿದು ಬೇಡಿಕೊಂಡಿದ್ದರು.

‘ನನಗೂ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನು ಕೂಡ ಬದುಕುತ್ತಿದ್ದೆ. ಮತ್ತೆ ಜನ್ಮತಾಳಿ ಬಂದು ಒಳ್ಳೆಯ ಕೆಲಸ ಮಾಡುತ್ತೇನೆ’ ಎಂದು ಶನಿವಾರ ಫೇಸ್​ಬುಕ್​ನಲ್ಲಿ ರಾಹುಲ್​ ಬರೆದುಕೊಂಡಿದ್ದರು. ತಾವಿರುವ ಆಸ್ಪತ್ರೆಯ ಹೆಸರು, ತಮ್ಮ ವಯಸ್ಸು, ಬೆಡ್ ಸಂಖ್ಯೆ ಮುಂತಾದ ವಿವರಗಳನ್ನು ಈ ಪೋಸ್ಟ್​ನಲ್ಲಿ ಬರೆದು, ದಯವಿಟ್ಟು ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್​ ವೋಹ್ರಾ ಟ್ಯಾಗ್​ ಮಾಡಿದ್ದರು. ಅವರು ನಿಧನರಾಗಿರುವ ಸುದ್ದಿಯನ್ನು ನಟ, ನಿರ್ದೇಶಕ, ನಾಟಕಕಾರ ಅರವಿಂದ್​ ಗೌರ್​​ ಖಚಿತ ಪಡಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ರಾಹುಲ್​ ಅವರಿಗೆ ಕೊರೊನಾ ವೈರಸ್​ ತಗುಲಿತ್ತು. ಆ ಬಗ್ಗೆ ಅವರು ಅಸಹಾಯಕತೆಯಿಂದ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ‘ನನಗೆ ಕೊವಿಡ್​ ಪಾಸಿಟಿವ್​ ಆಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾಲ್ಕು ದಿನದಿಂದ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ನನಗೆ ಎಲ್ಲಿ ಆಕ್ಸಿಜನ್​ ಬೆಡ್​ ಸಿಗಬಹುದು? ನನ್ನ ಆಕ್ಸಿಜನ್​ ಮಟ್ಟ​ ಕಡಿಮೆ ಆಗುತ್ತಲೇ ಇದೆ. ಇಲ್ಲಿ ನೋಡಿಕೊಳ್ಳಲು ಯಾರೂ ಇಲ್ಲ’ ಎಂದು ರಾಹುಲ್​ ಅಂಗಲಾಚಿದ್ದರು.

ರಾಹುಲ್​ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ. ಸೋನು ಸೂದ್​ ಅವರಿಗೆ ಈಗ ವಿಚಾರ ತಿಳಿದಿದ್ದರೆ ಖಂಡಿತವಾಗಿಯೂ ರಾಹುಲ್​ ಸಾಯುತ್ತಿರಲಿಲ್ಲ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಕಾಲಿವುಡ್​ ನಿರ್ದೇಶಕ ಕೆವಿ ಆನಂದ್​, ರವಿರತ್ನ ಕಾಳಿದಾಸ ಚಿತ್ರದ ನಿರ್ದೇಶಕ ರೇಣುಕಾ ಶರ್ಮಾ, ನಟ ಶಂಕನಾದ ಅರವಿಂದ್​, ಯುವ ನಿರ್ಮಾಪಕ ಡಿ.ಎಸ್​. ಮಂಜುನಾಥ್​ ಸೇರಿದಂತೆ ಅನೇಕರು ಈ ಮಹಾಮಾರಿಗೆ ಬಲಿ ಆಗಿದ್ದಾರೆ.

ಇದನ್ನೂ ಓದಿ:

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ