AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಸಿನಿಮಾ ಶೂಟ್ ವೇಳೆ ರಾಜೇಶ್ ಶರ್ಮಗೆ ಕಚ್ಚಿದ ಹುಳು; ಆರೋಗ್ಯ ಸ್ಥಿತಿ ಗಂಭೀರ

ಪ್ರಭಾಸ್ ನಟನೆಯ 'ಫೌಜಿ' ಚಿತ್ರದ ಶೂಟಿಂಗ್ ವೇಳೆ ಹಿರಿಯ ನಟ ರಾಜೇಶ್ ಶರ್ಮಾ ಅವರಿಗೆ ಕೀಟ ಕಚ್ಚಿದ ಪರಿಣಾಮ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಘಟನೆ ಬಳಿಕ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಅವರು ಕೋಲ್ಕತ್ತಾದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಬಲಗಾಲಿನಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.

ಪ್ರಭಾಸ್ ಸಿನಿಮಾ ಶೂಟ್ ವೇಳೆ ರಾಜೇಶ್ ಶರ್ಮಗೆ ಕಚ್ಚಿದ ಹುಳು; ಆರೋಗ್ಯ ಸ್ಥಿತಿ ಗಂಭೀರ
ರಾಜೇಶ್ ಶರ್ಮ
ರಾಜೇಶ್ ದುಗ್ಗುಮನೆ
|

Updated on: Jul 09, 2026 | 7:06 AM

Share

ಮುಖ್ಯಾಂಶಗಳು

  • ಶೂಟಿಂಗ್ ಮುಗಿದ ನಂತರ ರಾಜೇಶ್ ಶರ್ಮಾಗೆ ಕೀಟ ಕಡಿತ
  • ಆರಂಭದಲ್ಲಿ ನಿರ್ಲಕ್ಷ್ಯ, ಬಳಿಕ ಆರೋಗ್ಯ ಗಂಭೀರ
  • ಆರೋಗ್ಯ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲು

ಪ್ರಭಾಸ್ ನಟನೆ ‘ಫೌಜಿ’ ಚಿತ್ರದ ಶೂಟ್ ವೇಳೆ ಹಿರಿಯ ನಟ ರಾಜೇಶ್ ಶರ್ಮ ಅವರಿಗೆ ಒಂದು ತೊಂದರೆ ಆಗಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಈ ಚಿತ್ರದ ಶೂಟ್ ನಡೆಯುತ್ತಿತ್ತು. ಈ ವೇಳೆ ರಾಜೇಶ್ ಅವರಿಗೆ ಹುಳುವೊಂದು ಕಚ್ಚಿದೆ. ಆ ಬಳಿಕ ಜ್ವರ ಕೂಡ ಕಾಣಿಸಿದೆ. ಸದ್ಯ ಅವರ ಆರೋಗ್ಯ ತೀವ್ರವಾಗಿ ಬಿಗಡಾಯಿಸಿದೆ. ಅವರು ಕೋಲ್ಕತ್ತಾ ತಲುಪಿದ್ದು, ಅಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ನಡೆದಿದ್ದು ಹೇಗೆ?

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿದ ನಂತರ ರಾಜೇಶ್ ಶರ್ಮ ಅವರು ಸ್ಥಳೀಯ ತಂತ್ರಜ್ಞರೊಂದಿಗೆ ಮಾತನಾಡುತ್ತಿದ್ದರು. ಆ ಜಾಗದಲ್ಲಿ ದಟ್ಟವಾದ ಗಿಡಗಂಟಿಗಳಿದ್ದವು. ಅಲ್ಲಿ ಅವರಿಗೆ ಒಂದು ಕೀಟ ಕಚ್ಚಿದೆ. ಅದು ಕೇವಲ ಸಾಮಾನ್ಯ ಹುಳ ಇರಬೇಕು ಎಂದು ರಾಜೇಶ್ ಶರ್ಮ ನಿರ್ಲಕ್ಷ್ಯ ವಹಿಸಿದ್ದಾರೆ. ಅದುವೇ ಅವರು ಮಾಡಿದ ದೊಡ್ಡ ತಪ್ಪು.

ಆರೋಗ್ಯದ ಸ್ಥಿತಿ ಗಂಭೀರ

ಕೀಟ ಕಚ್ಚಿದ ಆರು ಗಂಟೆಗಳ ನಂತರ ಅವರ ಬಲಗಾಲಿನಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಅವರು ಕೋಲ್ಕತ್ತಾ ವಿಮಾನ ಹತ್ತುವಷ್ಟರಲ್ಲಿ ಜ್ವರ ಹೆಚ್ಚಾಗಿದೆ. ಮರುದಿನ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆ ಇದೆ. ಅವರ ಬಲಗಾಲಿನ ಸೋಂಕು ವೇಗವಾಗಿ ಹರಡುತ್ತಿದೆ. ಕಾಲ್ಬೆರಳುಗಳಿಂದ ಮೊಣಕಾಲಿನವರೆಗೆ ಸೋಂಕು ಹಬ್ಬಿದ್ದು, ದೊಡ್ಡ ದೊಡ್ಡ ಗುಳ್ಳೆಗಳು ಎದ್ದಿವೆ ಎಂದು ವರದಿ ಆಗಿದೆ.

ಹೆಚ್ಚಿನ ಚಿಕಿತ್ಸೆ

ಡಾ. ಅವಿಜಿತ್ ಭಟ್ಟಾಚಾರ್ಯ ಅವರ ನೇತೃತ್ವದಲ್ಲಿ ರಾಜೇಶ್ ಶರ್ಮ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ರಕ್ತ ಹೆಪ್ಪುಗಟ್ಟುವ ಭೀತಿ ಎದುರಾಗಿದೆ. ಈ ರಕ್ತ ಹೆಪ್ಪುಗಟ್ಟುವಿಕೆ ಶ್ವಾಸಕೋಶಕ್ಕೆ ತಲುಪಿದರೆ ಪ್ರಾಣಕ್ಕೆ ಆಪತ್ತು ಬರಬಹುದು. ಹಾಗಾಗಿ ವೈದ್ಯರು ಅವರ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದಾರೆ.

ಇದನ್ನೂ ಓದಿ: ಕೋರ್ಟ್​ ಕೇಸ್​ನಲ್ಲಿ ಗೆದ್ದ ಕಪಿಲ್ ಶರ್ಮಾ; ಅರ್ಜಿ ಹಾಕಿದವನಿಗೆ ಕಿವಿಮಾತು ಹೇಳಿದ ಕೋರ್ಟ್

ರಾಜೇಶ್ ಶರ್ಮ ಅವರ ಚಿಕಿತ್ಸೆಗೆ ಬಂಗಾಳದ ಚಲನಚಿತ್ರ ಕಲಾವಿದರ ಸಂಘ ಮತ್ತು ನಟ ಪ್ರೊಸೆಂಜಿತ್ ಚಟರ್ಜಿ ಸಹಾಯ ಮಾಡುತ್ತಿದ್ದಾರೆ. ಇದಕ್ಕೆ ಅವರ ಕುಟುಂಬಸ್ಥರು ಧನ್ಯವಾದ ಹೇಳಿದ್ದಾರೆ. ರಾಜೇಶ್ ಶರ್ಮ ಅವರು ಕಳೆದ ಮೂರು ದಶಕಗಳಿಂದ ಹಿಂದಿ ಮತ್ತು ಬಂಗಾಳಿ ಚಿತ್ರರಂಗದಲ್ಲಿ ಪೋಷಕ ನಟರಾಗಿ ಗುರುತಿಸಿಕೊಂಡಿದ್ದಾರೆ. ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ವೆಬ್ ಸೀರಿಸ್ ಮೂಲಕವೂ ಅವರು ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ