AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR’ ಚಿತ್ರದ ವೇಳೆ ರಾಮ್​ ಚರಣ್​ಗೆ ಸಿಕ್ಕಿದ್ರಂತೆ ಹೊಸ ಸಹೋದರ; ಯಾರದು?

Ram Charan | Jr NTR: ಇತ್ತೀಚೆಗೆ ‘ಆರ್​ಆರ್​ಆರ್​’ ಚಿತ್ರದ ಪ್ರಿ-ರಿಲೀಸ್ ಈವೆಂಟ್ ಚೆನ್ನೈನಲ್ಲಿ ನಡೆದಿತ್ತು. ಆ ಕಾರ್ಯಕ್ರಮದಲ್ಲಿ ರಾಮ್ ಚರಣ್ ಅಚ್ಚರಿಯ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.

‘RRR’ ಚಿತ್ರದ ವೇಳೆ ರಾಮ್​ ಚರಣ್​ಗೆ ಸಿಕ್ಕಿದ್ರಂತೆ ಹೊಸ ಸಹೋದರ; ಯಾರದು?
ರಾಮ್​ ಚರಣ್, ರಾಜಮೌಳಿ, ಜೂ.ಎನ್​ಟಿಆರ್
TV9 Web
| Edited By: |

Updated on: Dec 29, 2021 | 9:35 AM

Share

ಚಿತ್ರದ ಬಿಡುಗಡೆಗೆ ಸಿದ್ಧವಾಗಿರುವ ‘ಆರ್​​ಆರ್​​ಆರ್​’ (RRR) ಚಿತ್ರತಂಡ ದೇಶದೆಲ್ಲೆಡೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇತ್ತೀಚೆಗೆ ಚಿತ್ರದ ಪ್ರಿ-ರಿಲೀಸ್ ಈವೆಂಟ್ ಚೆನ್ನೈನಲ್ಲಿ ನಡೆದಿತ್ತು. ಅದರಲ್ಲಿ ನಿರ್ದೇಶಕ ಎಸ್​ಎಸ್​​ ರಾಜಮೌಳಿ (SS Rajamouli), ನಟರಾದ ಜ್ಯೂ.ಎನ್​ಟಿಆರ್​​, ರಾಮ್​ ಚರಣ್ ಹಾಗೂ ನಿರ್ಮಾಪಕ ಡಿವಿವಿ ದಾನಯ್ಯ ಮೊದಲಾದವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಮ್​ ಚರಣ್ (Ram Charan) ಹಾಗೂ ಜ್ಯೂ ಎನ್​ಟಿಆರ್ (Jr NTR)​​ ನಡುವಿನ ಮಾತುಕತೆ ಇದೀಗ ಎಲ್ಲರ ಗಮನ ಸೆಳೆದಿದೆ. ಜ್ಯೂ ಎನ್​ಟಿಆರ್​ ಮಾತನಾಡುತ್ತಾ ರಾಮ್ ಚರಣ್ ಅವರೊಂದಿಗೆ ಕಾಣಿಸಿಕೊಳ್ಳುವುದು ಇದು ಆರಂಭವಷ್ಟೇ ಎಂದರು. ‘‘ಪ್ರೀತಿಯ ರಾಮ್​ ಚರಣ್, ನಿಮ್ಮೊಡನೆ ತೆರೆ ಹಂಚಿಕೊಳ್ಳಬಹುದು ಎಂಬ ಕಾರಣಕ್ಕೆ ಆರ್​ಆರ್​​ಆರ್​​ ಚಿತ್ರದ ಪ್ರತೀ ದೃಶ್ಯದಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳಬೇಕು ಎಂದು ಮನಸ್ಸು ಹೇಳುತ್ತದೆ. ಇದು ಕೊನೆಯಲ್ಲ. ಹೊಸ ಪಯಣದ ಆರಂಭ’’ ಎಂದಿದ್ದಾರೆ ಜ್ಯೂ.ಎನ್​ಟಿಆರ್​.

ನಂತರ ಮಾತನಾಡಿದ ರಾಮ್​ ಚರಣ್, ಜ್ಯೂ.ಎನ್​ಟಿಆರ್ ಅವರೊಂದಿಗಿನ ಸ್ನೇಹದ ಕುರಿತು ಮಾತನಾಡುತ್ತಾ ಭಾವುಕರಾದರು. ‘‘ಪ್ರೀತಿಯ ಎನ್​ಟಿಆರ್, ನಮ್ಮಿಬ್ಬರಿಗೆ ಕೇವಲ ಒಂದು ವರ್ಷದ ವ್ಯತ್ಯಾಸ. ಆದರೆ ನಿಜ ಜೀವನದಲ್ಲಿ ಅವನದ್ದು (ಎನ್​ಟಿಆರ್) ಮಕ್ಕಳ ರೀತಿಯ ಮನಸ್ಸು ಆದರೆ ಸಿಂಹದಂತಹ ವ್ಯಕ್ತಿತ್ವ. ಇವನೊಡನೆ ಬಹಳ ಜಾಗೃತರಾಗಿರಬೇಕು’’ ಎಂದು ನಗುತ್ತಾ ರಾಮ್ ಚರಣ್ ಹೇಳಿದ್ದಾರೆ. ಮುಂದುವರೆಸಿದ ರಾಮ್ ಚರಣ್, ‘‘ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಆದರೆ ತಾರಕ್​ಗೆ ಹೇಳುವುದಿಲ್ಲ. ಕಾರಣ, ನಾನು ದೇವರಿಗೆ ಇಂತಹ ಸೋದರನನ್ನು ನೀಡಿದ್ದಕ್ಕೆ ಧನ್ಯವಾದ ಹೇಳಬೇಕು’’ ಎಂದು ಭಾವುಕರಾಗಿ ನುಡಿದಿದ್ದಾರೆ ರಾಮ್​ಚರಣ್.

ಜ್ಯೂ ಎನ್​ಟಿಆರ್ ಜತೆಗಿನ ಸೋದರ ಸಂಬಂಧದ ಕುರಿತು ಮತ್ತಷ್ಟು ಮಾತನಾಡಿದ ರಾಮ್​ ಚರಣ್, ‘‘ಈ ಚಿತ್ರದೊಂದಿಗಿನ ಸಂಬಂಧವನ್ನು ಎಲ್ಲರಂತೆ ನಾನೂ ಬಹಳ ಕಾಲ ಇಟ್ಟುಕೊಳ್ಳುತ್ತೇನೆ. ಆದರೆ ತಾರಕ್ ಜತೆಗಿನ ಸಂಬಂಧ ನನ್ನ ಸಂಪೂರ್ಣ ಜೀವಿತಾವಧಿಯವರೆಗೆ ಇರುತ್ತದೆ. ಆ ಸೋದರತ್ವವನ್ನು ನನ್ನ ಕೊನೆಯುಸಿರು ಇರುವವರೆಗೂ ಕಾಪಾಡಿಕೊಳ್ಳುತ್ತೇನೆ. ಎಲ್ಲರಿಗೂ ಧನ್ಯವಾದಗಳು’’ ಎಂದಿದ್ದಾರೆ. ಜ್ಯೂ.ಎನ್​ಟಿಆರ್​​ ಹಾಗೂ ರಾಮ್​ ಚರಣ್ ಮಾತುಗಳನ್ನು ಕೇಳಿ ಅವರ ಫ್ಯಾನ್ಸ್ ಸಅಖತ್ ಖುಷಿಪಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ.

ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಜನವರಿ 7ರಂದು ವಿಶ್ವಾದ್ಯಂತ ತೆರೆಕಾಣಲಿದೆ. ರಾಮ್ ಚರಣ್, ಜ್ಯೂ ಎನ್​ಟಿಆರ್ ಅವರೊಂದಿಗೆ ಆಲಿಯಾ ಭಟ್, ಅಜಯ್ ದೇವಗನ್, ಶ್ರಿಯಾ ಶರಣ್ ಸೇರಿದಂತೆ ಹಲವು ತಾರೆಯರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ:

Arun Vaidyanathan: ‘ಕೊವಿಡ್​ ಮಸಾಲಾ ಫಿಲ್ಮ್​ ಇದ್ದಂತೆ; ಲಾಜಿಕ್ ಇರೋದೇ ಇಲ್ಲ’ ಎಂದ ನಿರ್ದೇಶಕ!

Irrfan Khan: ಇರ್ಫಾನ್ ಅಭಿಮಾನಿಗಳಿಗೆ ಖುಷಿ ಸುದ್ದಿ; ಬರೋಬ್ಬರಿ 14 ವರ್ಷಗಳ ಬಳಿಕ ಓಟಿಟಿಯಲ್ಲಿ ತೆರೆಕಾಣಲಿದೆ ಈ ಚಿತ್ರ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು