AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara 100 Days: ಬೆಳಕು..!! ಆದರೆ ಇದು ಬೆಳಕಲ್ಲ 100 ದಿನದ ದರ್ಶನ: ಶತ ದಿನೋತ್ಸವದ ಸಂಭ್ರಮದಲ್ಲಿ ‘ಕಾಂತಾರ’ ಚಿತ್ರ 

'ಕಾಂತಾರ' ಚಿತ್ರ ಬಿಡುಗಡೆಯಾಗಿ ಇಂದಿಗೆ 100 ದಿನ ಪೂರ್ಣಗೊಳಿಸಿದೆ. ಇಡೀ 'ಕಾಂತಾರ' ಚಿತ್ರತಂಡ ಶತ ದಿನೋತ್ಸವದ ಸಂಭ್ರಮದಲ್ಲಿದೆ. 

Kantara 100 Days: ಬೆಳಕು..!! ಆದರೆ ಇದು ಬೆಳಕಲ್ಲ 100 ದಿನದ ದರ್ಶನ: ಶತ ದಿನೋತ್ಸವದ ಸಂಭ್ರಮದಲ್ಲಿ 'ಕಾಂತಾರ' ಚಿತ್ರ 
ಕಾಂತಾರ ಚಿತ್ರಕ್ಕೆ ಶತ ದಿನೋತ್ಸವದ ಸಂಭ್ರಮ. Image Credit source: rishabshettyofficial
TV9 Web
| Edited By: |

Updated on:Jan 07, 2023 | 7:12 PM

Share

ಇಡೀ ವಿಶ್ವವೇ ಒಂದು ಭಾರಿ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿದ ಚಿತ್ರವೆಂದರೆ ಅದು ‘ಕಾಂತಾರ’ (Kantara) ಚಿತ್ರ. ರಿಷಬ್​ ಶೆಟ್ಟಿ (Rishab Shetty) ನಟಿಸಿ, ನಿರ್ದೇಶರಾಗಿ ಕಮಾಲ್ ಮಾಡಿದ ಚಿತ್ರ. ‘ಕಾಂತಾರ’ ಚಿತ್ರದ ಕ್ರೆಜ್​ ಇನ್ನು ನಿಂತಿಲ್ಲ. ಈ ಚಿತ್ರದಿಂದ ನಟ ರಿಷಬ್​ ಶೆಟ್ಟಿ ಡಿವೈನ್​ ಸ್ಟಾರ್​ ಆಗುವ ಮೂಲಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಪಂಚದಾದ್ಯಂತ ಸಿನಿ ಪ್ರೇಕ್ಷಕರು ‘ಕಾಂತಾರ’ ಚಿತ್ರವನ್ನು ತಮ್ಮ ಮಡಿಲಿಗೆ ಹಾಕಿಕೊಂಡಾಗಿದೆ. ಸದ್ಯ ‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಇಂದಿಗೆ 100 ದಿನ ಪೂರ್ಣಗೊಳಿಸಿದೆ. ಇಡೀ ‘ಕಾಂತಾರ’ ಚಿತ್ರತಂಡ ಶತ ದಿನೋತ್ಸವದ ಸಂಭ್ರಮದಲ್ಲಿದೆ.

‘ಕಾಂತಾರ’ ಚಿತ್ರ 2022 ಸೆಪ್ಟಂಬರ್ 30 ರಂದು ರಾಜ್ಯಾದ್ಯಂತ ರಿಲೀಸ್ ಆಯಿತು. ಬಳಿಕ ವಿಶ್ವದಾದ್ಯಂತ ಹಂತ ಹಂತವಾಗಿ ರಿಲೀಸ್ ಮಾಡಲಾಯಿತು. ಅತ್ಯಂತ ಕಡಿಮೆ ಬಜೆಟ್​ನಲ್ಲಿ ತಯಾರಾದ ಚಿತ್ರ ‘ಕಾಂತಾರ’ ಬರೋಬ್ಬರಿ 400 ಕೋಟಿ. ರೂ. ಭರ್ಜರಿ ಕಲೆಕ್ಷನ್​ ಮಾಡಿದೆ. ಮೊದಲು ಕನ್ನಡದಲ್ಲಿ ತೆರೆಗೆ ಬಂದ ‘ಕಾಂತಾರ’ ಚಿತ್ರ ಬಳಿಕ ಹಿಂದಿ, ತೆಲಗು, ತಮಿಳು, ಮಲಯಾಳಂ ಭಾಷೆಯಲ್ಲಿಯೂ ಬಿಡುಗಡೆಯಾಗಿ ಚಿತ್ರ ಸಕ್ಸಸ್​​ ಕಂಡಿತು. ಈ ಮೂಲಕ ‘ಕಾಂತಾರ’ ಚಿತ್ರ 2022ರ ಬ್ಲಾಕ್​ ಬಸ್ಟರ್​ ಹಿಟ್​ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಇದನ್ನೂ ಓದಿ: Kishore: ‘ನಾನು ಕೆಜಿಎಫ್​ 2 ಸಿನಿಮಾ ನೋಡಿಲ್ಲ’; ಕಾರಣ ತಿಳಿಸಿದ ‘ಕಾಂತಾರ’ ನಟ ಕಿಶೋರ್

‘ಕಾಂತಾರ’ ಚಿತ್ರದ ಶತ ದಿನೋತ್ಸವದ ಸಂಭ್ರಮವನ್ನು ನಟ, ನಿರ್ದೇಶಕ ರಿಷಬ್​ ಶೆಟ್ಟಿ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಬೆಳಕು..!! ಆದರೆ ಇದು ಬೆಳಕಲ್ಲ 100 ದಿನದ ದರ್ಶನ. ಈ ಪ್ರಯಾಣದುದ್ದಕ್ಕೂ ನಮ್ಮನ್ನೊಂದಿಗೆ ನಿಂತಿದ್ದಕ್ಕೆ ಮತ್ತು ದೈವತ್ವವನ್ನು ಕಂಡುಕೊಂಡಿದ್ದಕ್ಕಾಗಿ ಧನ್ಯವಾದಗಳು. ನಾವು ಯಾವಾಗಲೂ ಪ್ರೀತಿಸುವ ಒಂದು ಚಿತ್ರ. ಅದು ಸಂಪ್ರದಾಯಗಳ ಬಗ್ಗೆ ನಮ್ಮನ್ನು ವಿಸ್ಮಯಗೊಳಿಸಿದೆ. ಈ ವಿಸ್ಮಯಕ್ಕೆ ಕಾರಣಕರ್ತರಾದ ಪ್ರತಿಯೊಬ್ಬರಿಗೂ ನಾನು ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ.

‘ಕಾಂತಾರ’ ಚಿತ್ರಕ್ಕೆ ಬಂಡವಾಳ ಹೂಡಿದ್ದ ಹೊಂಬಾಳೆ ಪ್ರೊಡಕ್ಷನ್ಸ್​ ಕೂಡ ಚಿತ್ರದ ಶತ ದಿನೋತ್ಸವವನ್ನು ಸಂಭ್ರಮಿಸಿದೆ. ಚಿತ್ರದಲ್ಲಿ ದೊಡ್ಡ ತಾರಾ ಬಳಗವೆ ಇದೆ. ಸಪ್ತಮಿ ಗೌಡ, ಅಚ್ಯುತ್​ ಕುಮಾರ್​, ಕಿಶೋರ್​​, ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ‘ಕಾಂತಾರ’ ಚಿತ್ರ ಕಂಬಳ, ಪಂಜುರ್ಲಿ ದೈವದ ಗೆಜ್ಜೆ ನಾದ, ಕಾಡು, ಕಾಮಿಡಿ ಹೀಗೆ ಹಲವು ವಿಚಾರಕ್ಕೆ ವಿಶೇಷವೆನಿಸಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:10 pm, Sat, 7 January 23

Follow Us
Web contact
Web contact

TV9 Kannada

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ