AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಖ್ಯಾತ ನಟ; ಇಲ್ಲಿದೆ ಆರೋಗ್ಯದ ಅಪ್​ಡೇಟ್

ಇತ್ತೀಚೆಗೆ ಸಯಾಜಿ ಅವರಿಗೆ ಅನಾರೋಗ್ಯ ಕಾಡಿತ್ತು. ಈಗ ಅವರಿಗೆ ಎದೆನೋವು ಕೂಡ ಕಾಣಿಸಿಕೊಂಡಿರುವುದರಿಂದ ಕುಟುಂಬದವರು ಆತಂಕಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೃದಯಕ್ಕೆ ಸಂಬಂಧಿಸಿದ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ಅವರ ಹೃದಯ ರಕ್ತನಾಳದಲ್ಲಿ ಶೇ.99 ಬ್ಲಾಕೇಜ್ ಇರುವ ವಿಚಾರ ಗೊತ್ತಾಗಿದೆ.

ತೀವ್ರ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಖ್ಯಾತ ನಟ; ಇಲ್ಲಿದೆ ಆರೋಗ್ಯದ ಅಪ್​ಡೇಟ್
ಸಯಾಜಿ
ರಾಜೇಶ್ ದುಗ್ಗುಮನೆ
|

Updated on: Apr 13, 2024 | 2:35 PM

Share

ತೆಲುಗಿನ ಖ್ಯಾತ ನಟ ಸಯಾಜಿ ಶಿಂಧೆ (Sayaji Shinde) ಅವರು ಏಕಾಏಕಿ ಆಸ್ಪತ್ರೆ ಸೇರಿದ್ದಾರೆ. ತೀವ್ರವಾಗಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆ ಸೇರಬೇಕಾದ ಅನಿವಾರ್ಯತೆ ಬಂದಿದೆ. ಕಳೆದ ಕೆಲವು ದಿನಗಳಿಂದ ಅವರಿಗೆ ಅನಾರೋಗ್ಯ ಕಾಡಿತ್ತು. ಏಪ್ರಿಲ್ 11ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಲಾಗಿದ್ದು, ಅವರ ಹೃದಯದಲ್ಲಿ ಬ್ಲಾಕೇಜ್ ಇದೆ ಎನ್ನುವ ವಿಚಾರ ಗೊತ್ತಾಗಿದೆ. ಈಗ ವೈದ್ಯರು ಆ್ಯಂಜಿಯೋಪ್ಲಾಸ್ಟಿ ಮಾಡಿದ್ದು, ಸಯಾಜಿ ಆರೋಗ್ಯವಾಗಿದ್ದಾರೆ.

ಸಯಾಜಿ ಆಸ್ಪತ್ರೆಗೆ ದಾಖಲಾದ ವಿಚಾರ ಕೇಳಿ ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಡಿಯೋ ಒಂದನ್ನು ಮಾಡಿ ಪೋಸ್ಟ್ ಮಾಡಿದ್ದರು. ‘ನಾನು ಆರೋಗ್ಯವಾಗಿದ್ದೇನೆ. ನನ್ನ ಬಗ್ಗೆ ಕಾಳಜಿವಹಿಸುವ ಎಲ್ಲಾ ಅಭಿಮಾನಿಗಳು ಚಿಂತಿಸೋದು ಬೇಡ. ನಾನು ಶೀಘ್ರವೇ ನಿಮ್ಮನ್ನು ಮನರಂಜಿಸುತ್ತೇನೆ’ ಎಂದಿದ್ದಾರೆ ಸಯಾಜಿ. ‘ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಅವರು ಬೇಗ ರಿಕವರಿ ಆಗಲಿ ಎಂದು ಹಾರೈಸಿದ್ದಾರೆ.

ಇತ್ತೀಚೆಗೆ ಸಯಾಜಿ ಅವರಿಗೆ ಅನಾರೋಗ್ಯ ಕಾಡಿತ್ತು. ಈಗ ಅವರಿಗೆ ಎದೆನೋವು ಕೂಡ ಕಾಣಿಸಿಕೊಂಡಿರುವುದರಿಂದ ಕುಟುಂಬದವರು ಆತಂಕಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೃದಯಕ್ಕೆ ಸಂಬಂಧಿಸಿದ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ಅವರ ಹೃದಯ ರಕ್ತನಾಳದಲ್ಲಿ ಶೇ.99 ಬ್ಲಾಕೇಜ್ ಇರುವ ವಿಚಾರ ಗೊತ್ತಾಗಿದೆ. ಸದ್ಯ ಅವರ ಆರೋಗ್ಯ ಸುಧಾರಿಸಿದೆ. ಅವರನ್ನು ಎರಡು ದಿನಗಳಲ್ಲಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದಾರೆ.

ಸಯಾಜಿ ಶಿಂದೆ ಅವರು ‘ಸಿಂಗಂ’, ‘ನೆನೊಕ್ಕಡಿನೆ’, ‘ಅಂತಿಮ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಹಿಂದಿ ಸಿನಿಮಾಗಳಲ್ಲೂ ನಟಿಸಿದ್ದಾರೆ. ‘ಕಿಲ್ಲರ್ ಸೂಪ್’ ಸೀರಿಸ್​ನಲ್ಲಿ ಮನೋಜ್​ ಬಾಜ್​ಪಾಯೀ, ಕೊಂಕಣ್ ಸೇನ್ ಶರ್ಮಾ ಮೊದಲಾದವರು ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗೆ ಅಮಿತಾಭ್​ ಬಚ್ಚನ್​ ದಾಖಲು; ಆಂಜಿಯೋಪ್ಲಾಸ್ಟಿ ಮಾಡಿದ ವೈದ್ಯರು

ಕೆಲ ದಿನಗಳ ಹಿಂದೆ ಖ್ಯಾತ ನಟ ಅಮಿತಾಭ್​ ಬಚ್ಚನ್ ಕೂಡ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು. ಸಾಮಾನ್ಯವಾಗಿ ಹೃದಯಾಘಾತವಾದಾಗ ಹೃದಯಕ್ಕೆ ರಕ್ತ ಪೂರೈಕೆ ಮಾಡುವ ಅಪಧಮನಿಗಳು ಬ್ಲಾಕ್ ಆಗಿದ್ದರೆ ಅವುಗಳನ್ನು ತೆರೆಯಲು ಆಂಜಿಯೋಪ್ಲಾಸ್ಟಿ ಮಾಡಲಾಗುತ್ತದೆ. ಇದರರ್ಥ ಹೃದಯದ ಅಪಧಮನಿಯ ಅಡಚಣೆಯಿಂದಾಗಿ ರಕ್ತ ಪರಿಚಲನೆ ಸರಿಯಾಗಿ ನಡೆಯುತ್ತಿಲ್ಲ. ಇಂತಹ ಸಮಯದಲ್ಲಿ ಹೃದಯಾಘಾತವಾಗುವ ಸಾಧ್ಯತೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?